ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪತ್ರಕರ್ತ ಬಂಧನ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ನವೆಂಬರ್ 29: ಶಾಲಾ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪದಲ್ಲಿ ಪತ್ರಕರ್ತನನ್ನು ಪೊಲೀಸರು ಬಂಧಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರ ತಾಲೂಕು ಹೆಮ್ಮಾಡಿ ವ್ಯಾಪ್ತಿಯ ದಿನಪತ್ರಿಕೆಯೊಂದರ ಬಿಡಿ ವರದಿಗಾರ ಚಂದ್ರ ಕೆ. ಹೆಮ್ಮಾಡಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೈಂದೂರು ಸಮೀಪದ ಕಾಡಿನಲ್ಲಿ ಫೋಟೊ ತೆಗೆದು, ಸುದ್ದಿ ಮಾಡಲು ಸ್ಥಳೀಯರಲ್ಲಿ ನೆರವು ಕೇಳಿ, ದಾರಿಗಾಗಿ ಬಾಲಕನನ್ನು ಕರೆದೊಯ್ದು ಬಳಿಕ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕ ಕೆಲ ದಿನಗಳಿಂದ ಖಿನ್ನತೆಗೆ ಒಳಗಾಗಿದ್ದು, ಮನೆಯಲ್ಲಿ ವಿಚಾರಿಸಿದಾಗಲೂ ಏನೂ ತಿಳಿಸಿರಲಿಲ್ಲ.

ಲೈಂಗಿಕ ದೌರ್ಜನ್ಯ: ಇನ್ನುಮುಂದೆ ಆನ್‌ಲೈನ್‌ನಲ್ಲೇ ದೂರು ನೀಡಿಲೈಂಗಿಕ ದೌರ್ಜನ್ಯ: ಇನ್ನುಮುಂದೆ ಆನ್‌ಲೈನ್‌ನಲ್ಲೇ ದೂರು ನೀಡಿ

ಆ ಘಟನೆ ಬಳಿಕ ಬಾಲಕನಿಗೆ ನಡೆದಾಡಲೂ ಕಷ್ಟವಾಗುತ್ತಿತ್ತು. ಖಿನ್ನತೆಗೆ ಒಳಗಾಗಿದ್ದ ಮಗನನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ದ ಬಳಿಕ ಅಲ್ಲಿ ವೈದ್ಯರು ಬಾಲಕನ ಆರೋಗ್ಯ ತಪಾಸಣೆ ಮಾಡಿದ್ದು, ಈ ವೇಳೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಬಾಲಕನ ಜೊತೆ ಆಪ್ತ ಸಮಾಲೋಚನೆ ನಡೆಸಿದ ಬಳಿಕ ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ.

Sexual harassment on boy, complaint registered against journalist

ಲೈಂಗಿಕ ಕಿರುಕುಳ ಆರೋಪ, ಸಿಪಿಐಎಂ ಶಾಸಕ ಅಮಾನತು ಲೈಂಗಿಕ ಕಿರುಕುಳ ಆರೋಪ, ಸಿಪಿಐಎಂ ಶಾಸಕ ಅಮಾನತು

ಕಾರ್ಯಪ್ರವೃತ್ತರಾದ ಪೊಲೀಸರು ಚಂದ್ರ ಕೆ. ಹೆಮ್ಮಾಡಿಯನ್ನು ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕನ ತಂದೆಯು ನೀಡಿದ ದೂರಿನ ಮೇರೆಗೆ ಬೈಂದೂರು ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.

English summary
Chandra K Hemmadi, journalist booked under POCSO act by police in Kundapur, Udupi, alleging sexual harassment on a boy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X