ಪೊಲೀಸರ ಕೈ ಸೇರಿದ ಶೀರೂರು ಶ್ರೀಗಳ ಮರಣೋತ್ತರ ಪರೀಕ್ಷೆ ಪ್ರಾಥಮಿಕ ವರದಿ
Recommended Video

ಉಡುಪಿ, ಜುಲೈ 30: ಶೀರೂರು ಶ್ರೀಗಳ ಅಸಹಜ ಸಾವಿನ ಕುರಿತು ಸ್ಪಷ್ಟ ಚಿತ್ರಣ ನೀಡಬಲ್ಲ ಶ್ರೀಗಳ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಉಡುಪಿ ಪೊಲೀಸರ ಕೈಸೇರಿದೆ.
ಶ್ರೀಗಳ ಮರಣೋತ್ತರ ವರದಿ ಬಂದಿರುವುದಾಗಿ ಉಡುಪಿಯ ಪೊಲೀಸ್ ವರಿಷ್ಠಾಧಿಕಾರಿ ಅವರು ಸ್ಪಷ್ಟಪಡಿಸಿದ್ದು, ವರದಿಯಲ್ಲಿ ನಮೂದಾಗಿರುವ ಅಂಶಗಳ ಬಗ್ಗೆ ತನಿಖೆಯ ಈ ಹಂತದಲ್ಲಿ ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲು ನಕಾರ ವ್ಯಕ್ತಪಡಿಸಿದರು.

ಶ್ರೀಗಳ ಮರಣೋತ್ತರ ಪರೀಕ್ಷೆಯ ವರದಿಯನ್ನು ಕೆಎಂಸಿ ಆಸ್ಪತ್ರೆ ವೈದ್ಯರು ಪೊಲೀಸರಿಗೆ ನೀಡಿದ್ದು, ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಸ್ಪಷ್ಟವಾಗಿಲ್ಲದ ಕಾರಣ, ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ವೈದ್ಯಕೀಯ ವರದಿಗಾಗಿ ಪೊಲೀಸರು ಕಾಯಬೇಕಿದೆ.
ಮಂಗಳೂರಿನ ಪ್ರಾದೇಶಿಕ ವಿಧಿ ವಿಜ್ಞಾನ (ಎಫ್ಎಸ್ಎಲ್) ಪ್ರಯೋಗಾಲಯದಲ್ಲೇ ಪರೀಕ್ಷೆ ನಡೆಯುತ್ತಿದ್ದು, ವರದಿ ಬರಲು ಕನಿಷ್ಟ ಮೂರು ವಾರಗಳು ಅಗತ್ಯವಿದೆ ಎಂದು ಪೊಲೀಸರು ಹೇಳಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ನಂತರವಷ್ಟೆ ಮರಣೋತ್ತರ ಪರೀಕ್ಷೆಯ ವರದಿಗಳನ್ನು ಅದರೊಂದಿಗೆ ತಾಳೆ ನೋಡಿ ನಿರ್ಣಯಕ್ಕೆ ಬರಲು ಸಾಧ್ಯ.
ಶೀರೂರು ಶ್ರೀಗಳು ಜುಲೈ 19ರಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಅವರಿಗೆ ವಿಷ ಉಣ್ಣಿಸಿ ಕೊಲ್ಲಲಾಗಿದೆ ಎಂಬ ಊಹಾಪೋಹ ಹರಿದಾಡಿತ್ತು. ಅವರದ್ದು ಅಸಹಜ ಸಾವು ಎಂದು ಅವರ ಸಹೋದರರು ಠಾಣೆಗೆ ದೂರು ಸಹ ನೀಡಿದ್ದರು.
ಈ ಸುದ್ದಿಗಳಿಗೆ ಪುಷ್ಠಿ ನೀಡುವಂತೆ ತನಿಖೆ ಅವಧಿಯಲ್ಲಿ ಮಠದ ಬಗ್ಗೆ ಹಾಗೂ ಶ್ರೀಗಳೊಂದಿಗೆ ಒಡನಾಟವಿದ್ದ ಕೆಲವು ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ಹೊರಬಂದಿತ್ತು. ತನಿಖೆ ಇನ್ನೂ ನಡೆಯುತ್ತಿದ್ದು ಶ್ರೀಗಳ ಸಾವು ಸಹಜವೇ ಅಥವಾ ಅವರು ಕೊಲ್ಲಲ್ಪಟ್ಟಿದ್ದಾರೆಯೇ ಎಂಬ ವಿಷಯ ಬಹಿರಂಗವಾಗಬೇಕಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications