ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೀರೂರು ಶ್ರೀಗಳ ವಕೀಲರಿಂದ ಸ್ಫೋಟಕ ಮಾಹಿತಿ

By Manjunatha
|
Google Oneindia Kannada News

Recommended Video

Shiroor Mutt seer ಲಕ್ಷ್ಮೀವರತೀರ್ಥ ಶ್ರೀಗಳ ಸಾವಿನ ಬಗ್ಗೆ ಸ್ಪೋಟಕ ಮಾಹಿತಿ ಕೊಟ್ಟ ವಕೀಲರು | Oneindia Kannada

ಉಡುಪಿ, ಜುಲೈ 19: ಇಂದು ಬೆಳಿಗ್ಗೆಯಷ್ಟೆ ಮಣಿಪಾಲ ಆಸ್ಪತ್ರೆಯಲ್ಲಿ ಶೀರೂರು ಮಠದ ಶ್ರೀಗಳು ನಿಧನರಾಗಿದ್ದು, ಶ್ರೀಗಳ ಪರ ವಕೀಲ ರವಿಕಿರಣ್ ಮುರುಡೇಶ್ವರ ಅವರು ಶ್ರೀಗಳ ಸಾವಿನ ಬಗ್ಗೆ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ.

ಶೀರೂರು ಶ್ರೀಗಳು, ಪಟ್ಟದ ದೇವರ ಹಸ್ತಾಂತರದ ಬಗ್ಗೆ ನ್ಯಾಯಾಲಯದದಲ್ಲಿ ಹೂಡಿದ್ದ ದಾವೆಯ ಪರ ವಾದಿಸುತ್ತಿರುವ ವಕೀಲ ರವಿಕಿರಣ್ ಮುರಡೇಶ್ವರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಶೀರೂರು ಶ್ರೀಗಳು 'ತಮ್ಮ ಜೀವಕ್ಕೆ ಅಪಾಯ ಇರುವ ಬಗ್ಗೆ ಮುಂಚೆಯೇ ತಮಗೆ ಹೇಳಿದ್ದರು' ಎಂದಿದ್ದಾರೆ.

ಶೀರೂರು ಶ್ರೀ ನಿಗೂಢ ಅಗಲಿಕೆ: ಅನುಮಾನ ವ್ಯಕ್ತಪಡಿಸಿದ ಆಪ್ತರುಶೀರೂರು ಶ್ರೀ ನಿಗೂಢ ಅಗಲಿಕೆ: ಅನುಮಾನ ವ್ಯಕ್ತಪಡಿಸಿದ ಆಪ್ತರು

'ಜೂನ್ 28 ರಂದು ತಮ್ಮ ಕಚೇರಿಗೆ ಬಂದಿದ್ದ ಶೀರೂರು ಶ್ರೀಗಳು , ಪುತ್ತಿಗೆ ಮಠವನ್ನು ಹೊರತುಪಡಿಸಿ ಉಳಿದ ಆರು ಮಠಗಳ ವಿರುದ್ಧ ಕ್ರಿಮಿನಲ್ ಸಲ್ಲಿಸಲು ತಮಗೆ ಸೂಚನೆ ನೀಡಿದ್ದರು. ಎಂದು ಅವರು ವಕೀಲ ರವಿಕಿರಣ್ ಹೇಳಿದ್ದಾರೆ.

Shiroor seer said earlier that his life is in danger: Shiroors Lawyer

'ಶ್ರೀಗಳು ತಮ್ಮ ಜೀವಕ್ಕೆ ಅಪಾಯವೂ ಆಗಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು ಹಾಗಾಗಿ ಆರೂ ಮಠಗಳ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಿದ್ದರು, ಅದರಂತೆ ನಾನು ನಿನ್ನೆಯಷ್ಟೆ ಫಿರ್ಯಾದು ಸಹ ಸಿದ್ಧ ಪಡಿಸಿದ್ದೆ' ಎಂದು ವಕೀಲ ರವಿಕಿರಣ್ ಮಾಹಿತಿ ನೀಡಿದ್ದಾರೆ.

ಶೀರೂರು ಶ್ರೀಗಳ ಸಾವಿನ ಸಮರ್ಪಕ ತನಿಖೆ ಆಗಬೇಕು, ಅವರ ಸಾವಿನ ಕಾರಣ ಬಹಿರಂಗವಾಗಬೇಕು ಅವರ ಹೋರಾಟ ವ್ಯರ್ಥವಾಗಬಾರದು ಎಂದು ರವಿಕರಣ್ ಅವರು ಆಗ್ರಹಿಸಿದ್ದಾರೆ.

ಶಿರೂರು ಶ್ರೀಗಳಿಗೆ ವಿಷಪ್ರಾಶನ? ಉಡುಪಿ ಶ್ರೀಕೃಷ್ಣನೇ ಬಲ್ಲ!ಶಿರೂರು ಶ್ರೀಗಳಿಗೆ ವಿಷಪ್ರಾಶನ? ಉಡುಪಿ ಶ್ರೀಕೃಷ್ಣನೇ ಬಲ್ಲ!

ಶೀರೂರು ಶ್ರೀಗಳು ಫುಡ್‌ಪಾಯಸನ್‌ಗೆ ಒಳಗಾಗಿದ್ದರು ಎಂದು ವೈದ್ಯರು ಹೇಳಿದ್ದು, ವಿಷಪ್ರಾಶನದ ಶಂಕೆಯನ್ನೂ ಕೆಲವರು ವ್ಯಕ್ತಪಡಿಸಿದ್ದಾರೆ. ಇದೀಗ ಮಣಿಪಾಲ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ವರದಿ ಬಂದ ಬಳಿಕವಷ್ಟೆ ಸಾವಿಗೆ ನಿಖರ ಕಾರಣ ತಿಳಿಯಲಿದೆ.

English summary
Shiroor Seer passed away today morning. Shiroor's lawyer Ravikiran said to media that Shiroor Seer recently said that his 'life is in danger'. Breaking:
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X