ಕ್ರಿಮಿನಲ್ ಕೇಸು ಹಾಕಿಯೇ ಸಿದ್ಧ: ಶೀರೂರು ಶ್ರೀಗಳ ಕೊನೆಯ ಮಾತು
ಉಡುಪಿ, ಜುಲೈ 19: ಶೀರೂರು ಶ್ರೀಗಳು ಇಂದು ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. ಅವರು ಸಾಯುವ ಕೆಲ ದಿನಗಳ ಮುಂಚೆ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಅಷ್ಟಮಠದ ಆರು ಮಠಗಳ ವಿರುದ್ಧ ಕ್ರಿಮಿನಲ್ ಕೇಸು ಹಾಕಿಯೇ ಸಿದ್ಧ ಎಂದು ಗುಡುಗಿದ್ದರು.
ಸಾಯುವ ಕೆಲವು ದಿನಗಳ ಮುಂಚೆಯಷ್ಟೆ ಸುದ್ದಿಗೋಷ್ಠಿ ನಡೆಸಿದ್ದ ಶ್ರೀಗಳು 'ಅಷ್ಟ ಮಠದ ಆರು ಮಠಗಳವರು ಸಭೆಗೆ ಕರೆದರೂ ನಾನು ಹೋಗುವುದಿಲ್ಲ, ಅವರೊಂದಿಗೆ ಮಾತು ಬೇಡ, ಕ್ರಿಮಿನಲ್ ಕೇಸು ಹಾಕಿಯೇ ಸಿದ್ಧ' ಎಂದು ಗುಡುಗಿದ್ದರು.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ್ದ ಧ್ವನಿ ಮುದ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅವರು ಯಾವುದೇ ಬಳಲಿಕೆಗಳಾಗಲಿ ಇಲ್ಲದೆ ಆರೋಗ್ಯವಂತರಾಗಿಯೇ ಇದ್ದರು ಎನಿಸುತ್ತದೆ.

ವಿಠ್ಠಲ ನನ್ನ ಸ್ವತ್ತು
ವರದಿಗಾರರೊಂದಿಗೆ ಬಹಳಷ್ಟು ವಿಷಯವನ್ನು ಮಾತನಾಡಿದ ಅವರು, ಕೃಷ್ಣ ನನ್ನ ಸ್ವತ್ತಲ್ಲ, ರಾಮ ನನ್ನ ಸ್ವತ್ತಲ್ಲ ಆದರೆ ವಿಠ್ಠಲ ನನ್ನ ಸ್ವತ್ತು ಅದನ್ನು ನಾನು ಪಡೆದೇ ತೀರುತ್ತೇನೆ ಎಂದಿದ್ದರು.

ಪಟ್ಟದ ದೇವರನ್ನು ಕೃಷ್ಣಮಠದಲ್ಲಿಟ್ಟಿದ್ದರು
ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾಗ ಪಟ್ಟದ ದೇವರನ್ನು ಕೃಷ್ಣಮಠದಲ್ಲಿ ಇಟ್ಟಿದ್ದರು ಆದರೆ ನಂತರ ಅಷ್ಟ ಮಠದ ಆರು ಮಠಗಳ ಶ್ರೀಗಳು ಪಟ್ಟದ ದೇವರನ್ನು ಹಿಂದಿರುಗಿಸಲು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದಾಗಿ ಶೀರೂರು ಶ್ರೀಗಳು ಕೋರ್ಟ್ ಮೆಟ್ಟಿಲೇರಿದ್ದರು.

ತೀರ್ಪು ಪರವಾಗುವ ಭರವಸೆ
ನ್ಯಾಯಾಲಯದ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿದ್ದೇನೆ ಎಂದಿದ್ದ ಅವರು, ನ್ಯಾಯಾಲಯದ ತೀರ್ಪು ತಮ್ಮ ಪರವಾಗಿಯೇ ಆಗುತ್ತದೆ ಎಂದು ಹೇಳಿದ್ದರು. ಅದು ನನ್ನದು, ನನ್ನ ಸ್ವತ್ತು ಕದ್ದಿದ್ದಲ್ಲ ಎಂದು ಆಕ್ರೋಶದಿಂದ ನುಡಿಸಿದ್ದರು ಶ್ರೀಗಳು.

ಉಳಿದ ಶ್ರೀಗಳ ಬಗ್ಗೆ ಮಾತು
ಇಷ್ಟೆ ಅಲ್ಲದೆ, ಅಷ್ಟ ಮಠದ ಕೆಲವು ಶ್ರೀಗಳ ಬಗ್ಗೆಯೂ ಲೋಕಾಭಿರಾಮವಾಗಿ ಮಾತನಾಡಿದ್ದ ಶ್ರೀಗಳು ಕೆಲವು ಶ್ರೀಗಳ ಪಟ್ಟದ ದೇವರನ್ನು ವಿಮಾನ ನಿಲ್ದಾಣದ ಸೆಕ್ಯೂರಿಟಿ ಅವರು ಮುಟ್ಟಿಬಿಟ್ಟಿದ್ದಾರೆ, ಅದು ಶಾಸ್ತ್ರಬದ್ಧವಲ್ಲ ಎಂದು ಆರೋಪಿಸಿದ್ದರು.

ಅನುಭವ ಹಂಚಿಕೊಂಡಿದ್ದ ಶ್ರೀಗಳು
ತಮಗೆ ಒಮ್ಮೆ ಮುಂಬೈ ವಿಮಾನ ನಿಲ್ದಾಣದಲ್ಲಿ ಅದೇ ಪರಿಸ್ಥಿತಿ ಎದುರಾಗಿ ಆ ನಂತರ ಭಕ್ತರೊಬ್ಬರ ಸಹಾಯದಿಂದ ಪಟ್ಟದ ದೇವರನ್ನು ಇಟ್ಟಿದ್ದ ಪೆಟ್ಟಿಗೆಯನ್ನು ಪರಿಶೀಲಿಸದೆ ಹೊರ ಬಂದ ಘಟನೆಯನ್ನು ಹೇಳಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications