ಸೆಪ್ಟಂಬರ್ 4 ರಂದು ನಡೆಯಲಿದೆ ಶೀರೂರು ಶ್ರೀಗಳ ಆರಾಧನೆ
ಉಡುಪಿ, ಆಗಸ್ಟ್.30: ಶೀರೂರು ಶ್ರೀಗಳು ಸಾವನ್ನಪ್ಪಿ 40 ದಿನಗಳು ಕಳೆದಿವೆ. ತನಿಖಾ ದೃಷ್ಟಿಯಿಂದ ಪೊಲೀಸ್ ಸುಪರ್ದಿಯಲ್ಲಿದ್ದ ಶೀರೂರು ಮಠ ಈಗ ವಿಮುಕ್ತಗೊಂಡಿದೆ. ತನಿಖಾ ವೇಳೆಯಲ್ಲಿ ಸಾಕ್ಷ್ಯಾಧಾರಗಳು ನಾಶವಾಗಬಹುದೆಂಬ ಹಿನ್ನಲೆಯಲ್ಲಿ ಪೊಲೀಸರು ಶ್ರೀಗಳ ಆರಾಧನೆಗೆ ಅವಕಾಶ ನೀಡಿರಲಿಲ್ಲ.
"ತನಿಖೆ ಮುಗಿದು ಶೀರೂರು ಮಠ ಪೂರ್ಣವಾಗಿ ನಮ್ಮ ಕೈ ಸೇರಿದ ಮೇಲೆ ಶ್ರೀಗಳ ಆರಾಧನೆ ಕ್ರಿಯೆಯನ್ನು ನಡೆಸಲಿದ್ದೇವೆ" ಎಂದು ದ್ವಂದ್ವ ಮಠದ ಯತಿಗಳಾದ ಸೋದೆ ಶ್ರೀಗಳು ತಿಳಿಸಿದ್ದರು. ಇದೀಗ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಹಿನ್ನಲೆಯಲ್ಲಿ ಪೊಲೀಸರು ಶೀರೂರು ಮೂಲಮಠವನ್ನು ಸೋದೆ ಮಠಕ್ಕೆ ಹಸ್ತಾಂತರಿಸಿದ್ದಾರೆ.
ಹಾಗಾಗಿ ಶೀರೂರು ಶ್ರೀಗಳ ಆರಾಧನೆಗೆ ದಿನ ನಿಗದಿಯಾಗಿದೆ. ಸೆಪ್ಟಂಬರ್ 5ಕ್ಕೆ ಶ್ರೀಗಳ ಆರಾಧನೆ ನಡೆಯಲಿದೆ. ಶೀರೂರು ಮೂಲಮಠದಲ್ಲಿ ಸೋದೆ ಶ್ರೀಗಳ ನೇತೃತ್ವದಲ್ಲಿ ಆರಾಧನೆ ನಡೆಯಲಿದೆ ಎಂದು ಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ.

ಜುಲೈ 19 ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಶೀರೂರು ಶ್ರೀಗಳು, ಬಳಿಕ ಅದು ಅಸಹಜ ಸಾವು ಎಂಬ ವೈದ್ಯರ ಉಲ್ಲೇಖದಿಂದ ಹಲವು ಆಯಾಮಗಳನ್ನು ಕಂಡಿತ್ತು. ವಿಷಪ್ರಾಶನವೆಂದು ಹೇಳಿದ್ದ ಕೆಎಂಸಿ ಆಸ್ಪತ್ರೆ ವೈದ್ಯರ ಹೇಳಿಕೆ ಹಲವು ಗೊಂದಲವನ್ನು ಉಂಟುಮಾಡಿತ್ತು.
ಇದೀಗ ಶ್ರೀಗಳ ದೇಹದಲ್ಲಿ ವಿಷವಿಲ್ಲವೆಂದು ವಿಧಿವಿಜ್ಞಾನ ತಜ್ಞರು ಖಚಿತ ಪಡಿಸಿದ್ದಾರೆ. ಅದರ ಜೊತೆಗೆ ಶ್ರೀಗಳ ಭಕ್ತರು ಅವರ ಆತ್ಮಕ್ಕೆ ಶಾಂತಿ ಸಿಗಲಿಲ್ಲ. ಅವರ ಆರಾಧನಾ ಕ್ರಿಯೆಯನ್ನು ಮಾಡಬೇಕೆಂದು ಹೇಳಿದ್ದರು. ವಿಳಂಬವಾದ ಹಿನ್ನಲೆ ಭಕ್ತವೃಂದದಲ್ಲಿ ಬೇಸರದ ಛಾಯೆ ಮೂಡಿದ್ದು, ಸೋದೆ ಶ್ರೀಗಳ ನಿರ್ಧಾರದಿಂದ ಎಲ್ಲದಕ್ಕೂ ಅಂತ್ಯ ಸಿಗಲಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications