ಉಡುಪಿ: ಶಿರೂರು ಮಠಕ್ಕೆ ತಾತ್ಕಾಲಿಕ ಉಸ್ತುವಾರಿ ನೇಮಕ
Recommended Video

ಉಡುಪಿ, ಜುಲೈ 24:ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಅಸಹಜ ಸಾವಿನಿಂದಾಗಿ ತೆರವಾಗಿರುವ ಶಿರೂರು ಮಠದ ಹೊಣೆಗಾರಿಕೆ ನೋಡಿಕೊಳ್ಳಲು ಉಸ್ತುವಾರಿಯೊಬ್ಬರನ್ನು ನೇಮಿಸಲಾಗಿದೆ.
ಶಿರೂರು ಮಠದ ಮಾಜಿ ಸಿಬ್ಬಂದಿಯಾದ ಸುಬ್ರಮಣ್ಯ ಭಟ್ ಅವರನ್ನು ಮಠದ ತಾತ್ಕಾಲಿಕ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ಸೋದೆ ಮಠದ ವಿಶ್ವವಲ್ಲಭ ತೀರ್ಥರು ಸುಬ್ರಮಣ್ಯ ಭಟ್ ಅವರನ್ನು ನೇಮಿಸಿದ್ದಾರೆ. ಅವರು ಮಠದದಲ್ಲಿರುವ ಚಿನ್ನಾಭರಣ, ಇತರೆ ಆಸ್ತಿಪಾಸ್ತಿಗಳ ರಕ್ಷಣೆ ಹಾಗೂ ನಿರ್ವಹಣೆಯ ಜವಾಬ್ದಾರಿ ನಿಭಾಯಿಸಲಿದ್ದಾರೆ.

ಸದ್ಯ, ಶಿರೂರು ಸ್ವಾಮಿಗಳ ಸಾವಿನ ಕುರಿತ ತನಿಖೆ ನಡೆಯುತ್ತಿದ್ದು, ಮಠವು ಪೊಲೀಸರ ವಶದಲ್ಲಿದೆ. ಹೀಗಾಗಿ ತನಿಖೆ ಮುಗಿಯುವವರೆಗೂ ಯಾರೂ ಆಸ್ತಿಗಳನ್ನು ಮುಟ್ಟುವಂತಿಲ್ಲ.
ಕೇಮಾರು ಸ್ವಾಮೀಜಿಗೆ ಬೆದರಿಕೆ
ಶಿರೂರು ಸ್ವಾಮೀಜಿಗಳ ಅಸಹಜ ಸಾವಿನ ಹಿಂದೆ ಅನುಮಾನ ವ್ಯಕ್ತಪಡಿಸಿ ತನಿಖೆಗೆ ಒತ್ತಾಯಿಸಿರುವ ಕೇಮಾರು ಸಾಂದೀಪಿನಿ ಮಠದ ಈಶ ವಿಠಲದಾಸ ಸ್ವಾಮೀಜಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಗೂ ನಿಂದನೆಗಳು ಎದುರಾಗಿವೆ.
ಫೇಸ್ಬುಕ್ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈಶ ವಿಠಲದಾಸ ಸ್ವಾಮೀಜಿ ಅವರ ಕುರಿತು ನಿಂದನಾತ್ಮಕ ಬರಹಗಳನ್ನು ಪ್ರಕಟಿಸಲಾಗುತ್ತಿದೆ.
ವಾಟ್ಸಾಪ್ನಲ್ಲಿ ಸಹ ಅವರಿಗೆ ಬೆದರಿಕೆ ಸಂದೇಶಗಳು ಬರುತ್ತಿದ್ದು, ಈ ಬಗ್ಗೆ ಪೊಲೀಸರನ್ನು ಸಂಪರ್ಕಿಸಲಾಗಿದೆ. ಶಿರೂರು ಸ್ವಾಮಿಗಳ ಸಾವಿನ ತನಿಖೆಯ ಭಾಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರುವ ನಿಂದನೆಗಳನ್ನು ಸಹ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿರುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ.
ಲಕ್ಷ್ಮೀವರ ತೀರ್ಥರ ದೇಹದಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿರುವುದರಿಂದ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಈಶ ವಿಠಲದಾಸ ಸ್ವಾಮೀಜಿ ಒತ್ತಾಯಿಸಿದ್ದರು.
ಮಠದಲ್ಲಿ ಎಲ್ಲರೂ ಊಟ ಮಾಡಿದ್ದಾರೆ. ಆದರೆ, ಸ್ವಾಮೀಜಿಗಳಿಗೆ ಮಾತ್ರ ಏಕೆ ಫುಡ್ ಪಾಯ್ಸನ್ ಆಗಿದೆ. ವ್ಯಕ್ತಿಗಿಂತ ಪೀಠ ಮುಖ್ಯ. ಅಷ್ಠಮಠಾಧೀಶರಲ್ಲಿ ಒಬ್ಬರಾಗಿದ್ದ ಶಿರೂರು ಶ್ರೀಗಳಿಗೆ ವಿಷ ನೀಡಿದ್ದು ಯಾರು ಎನ್ನುವುದು ತಿಳಿಯಬೇಕು. ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications