ಉಡುಪಿ: ಶಿರೂರು ಮಠಕ್ಕೆ ತಾತ್ಕಾಲಿಕ ಉಸ್ತುವಾರಿ ನೇಮಕ
Recommended Video

ಉಡುಪಿ, ಜುಲೈ 24:ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಅಸಹಜ ಸಾವಿನಿಂದಾಗಿ ತೆರವಾಗಿರುವ ಶಿರೂರು ಮಠದ ಹೊಣೆಗಾರಿಕೆ ನೋಡಿಕೊಳ್ಳಲು ಉಸ್ತುವಾರಿಯೊಬ್ಬರನ್ನು ನೇಮಿಸಲಾಗಿದೆ.
ಶಿರೂರು ಮಠದ ಮಾಜಿ ಸಿಬ್ಬಂದಿಯಾದ ಸುಬ್ರಮಣ್ಯ ಭಟ್ ಅವರನ್ನು ಮಠದ ತಾತ್ಕಾಲಿಕ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ಸೋದೆ ಮಠದ ವಿಶ್ವವಲ್ಲಭ ತೀರ್ಥರು ಸುಬ್ರಮಣ್ಯ ಭಟ್ ಅವರನ್ನು ನೇಮಿಸಿದ್ದಾರೆ. ಅವರು ಮಠದದಲ್ಲಿರುವ ಚಿನ್ನಾಭರಣ, ಇತರೆ ಆಸ್ತಿಪಾಸ್ತಿಗಳ ರಕ್ಷಣೆ ಹಾಗೂ ನಿರ್ವಹಣೆಯ ಜವಾಬ್ದಾರಿ ನಿಭಾಯಿಸಲಿದ್ದಾರೆ.

ಸದ್ಯ, ಶಿರೂರು ಸ್ವಾಮಿಗಳ ಸಾವಿನ ಕುರಿತ ತನಿಖೆ ನಡೆಯುತ್ತಿದ್ದು, ಮಠವು ಪೊಲೀಸರ ವಶದಲ್ಲಿದೆ. ಹೀಗಾಗಿ ತನಿಖೆ ಮುಗಿಯುವವರೆಗೂ ಯಾರೂ ಆಸ್ತಿಗಳನ್ನು ಮುಟ್ಟುವಂತಿಲ್ಲ.
ಕೇಮಾರು ಸ್ವಾಮೀಜಿಗೆ ಬೆದರಿಕೆ
ಶಿರೂರು ಸ್ವಾಮೀಜಿಗಳ ಅಸಹಜ ಸಾವಿನ ಹಿಂದೆ ಅನುಮಾನ ವ್ಯಕ್ತಪಡಿಸಿ ತನಿಖೆಗೆ ಒತ್ತಾಯಿಸಿರುವ ಕೇಮಾರು ಸಾಂದೀಪಿನಿ ಮಠದ ಈಶ ವಿಠಲದಾಸ ಸ್ವಾಮೀಜಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಗೂ ನಿಂದನೆಗಳು ಎದುರಾಗಿವೆ.
ಫೇಸ್ಬುಕ್ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈಶ ವಿಠಲದಾಸ ಸ್ವಾಮೀಜಿ ಅವರ ಕುರಿತು ನಿಂದನಾತ್ಮಕ ಬರಹಗಳನ್ನು ಪ್ರಕಟಿಸಲಾಗುತ್ತಿದೆ.
ವಾಟ್ಸಾಪ್ನಲ್ಲಿ ಸಹ ಅವರಿಗೆ ಬೆದರಿಕೆ ಸಂದೇಶಗಳು ಬರುತ್ತಿದ್ದು, ಈ ಬಗ್ಗೆ ಪೊಲೀಸರನ್ನು ಸಂಪರ್ಕಿಸಲಾಗಿದೆ. ಶಿರೂರು ಸ್ವಾಮಿಗಳ ಸಾವಿನ ತನಿಖೆಯ ಭಾಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರುವ ನಿಂದನೆಗಳನ್ನು ಸಹ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿರುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ.
ಲಕ್ಷ್ಮೀವರ ತೀರ್ಥರ ದೇಹದಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿರುವುದರಿಂದ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಈಶ ವಿಠಲದಾಸ ಸ್ವಾಮೀಜಿ ಒತ್ತಾಯಿಸಿದ್ದರು.
ಮಠದಲ್ಲಿ ಎಲ್ಲರೂ ಊಟ ಮಾಡಿದ್ದಾರೆ. ಆದರೆ, ಸ್ವಾಮೀಜಿಗಳಿಗೆ ಮಾತ್ರ ಏಕೆ ಫುಡ್ ಪಾಯ್ಸನ್ ಆಗಿದೆ. ವ್ಯಕ್ತಿಗಿಂತ ಪೀಠ ಮುಖ್ಯ. ಅಷ್ಠಮಠಾಧೀಶರಲ್ಲಿ ಒಬ್ಬರಾಗಿದ್ದ ಶಿರೂರು ಶ್ರೀಗಳಿಗೆ ವಿಷ ನೀಡಿದ್ದು ಯಾರು ಎನ್ನುವುದು ತಿಳಿಯಬೇಕು. ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications