ಶೀರೂರು ಶ್ರೀಗಳಿಗೆ ಸ್ಪರ್ಧಿಸದಂತೆ ಹೇಳಿದ್ದು ಕೋಲದ ದೈವ !
ಉಡುಪಿ, ಏಪ್ರಿಲ್ 18: ಚುನಾವಣಾ ಕಣಕ್ಕೆ ಇಳಿಯುವ ಮೂಲಕ ಕರಾವಳಿ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಶೀರೂರು ಲಕ್ಷ್ಮೀವರ ತೀರ್ಥ ಶ್ರೀಗಳು ಶುಕ್ರವಾರ ನಾಮಪತ್ರ ಹಿಂದೆಗೆದು ಮತ್ತೆ ಸುದ್ದಿ ಮಾಡಿದ್ದಾರೆ.
ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಶ್ರೀಗಳು, ಟಿಕೆಟ್ ಸಿಗದ ಕಾರಣ ಕಳೆದ ಮಂಗಳವಾರದಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಉಡುಪಿಯಲ್ಲಿ ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಟಿಕೆಟ್ ಸಿಕ್ಕಿದೆ.
ನಾಮಪತ್ರ ಹಿಂತೆಗೆತಕ್ಕೆ ಕಾರಣ ನೀಡಿದ್ದ ಶ್ರೀಗಳು, ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಅವರನ್ನು ಬೆಂಬಲಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಅಲ್ಲದೆ, ಮೇ ಒಂದರಂದು ಪ್ರಧಾನಿಯವರು ಉಡುಪಿಗೆ ಬರುತ್ತಿದ್ದಾರೆ. ಅವರು ನಮ್ಮ ಊರಿಗೆ ಬಂದಾಗ ಅವರ ಧ್ಯೇಯ ಮತ್ತು ಚಿಂತನೆಗಳಿಗೆ ತೊಡಕು ಉಂಟು ಮಾಡಬಾರದು ಎಂಬ ಉದ್ದೇಶದಿಂದ ನಾಮಪತ್ರ ಹಿಂದೆಗೆದಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಆದರೆ, ಶೀರೂರು ಶ್ರೀಗಳು ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವುದರ ಹಿಂದೆ ಸ್ವಾರಸ್ಯಕರ ಕಾರಣವೊಂದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅದು ದೈವದ ನುಡಿ.
ಹೌದು. ಶಿರೂರು ಶ್ರೀಗಳು ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಅವರು ನಂಬುವ ದೈವಗಳೂ ಕೂಡ ಬೇಡ ಎಂದಿದ್ದವು ಎಂಬ ಕುತೂಹಲಕಾರಿ ಅಂಶ ಈಗ ಬೆಳಕಿಗೆ ಬಂದಿದೆ. ಶೀರೂರು ಶ್ರೀಗಳು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ ನಂತರ ತಮ್ಮ ಮಠದಲ್ಲಿ 3 ದಿನಗಳ ದೈವಗಳ ಕೋಲವನ್ನು ಆಯೋಜಿಸಿದ್ದರು.
ಈ ಸಂದರ್ಭದಲ್ಲಿ ಸ್ವಾಮೀಜಿ, ತಾವು ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇವೆ. ಗೆಲ್ಲಿಸಿಕೊಡುತ್ತೀರಾ ಎಂದು ದೈವಗಳನ್ನು ಕೇಳಿದ್ದರು. ಅದಕ್ಕೆ ದೈವಗಳು ನೀಡಿದ ಉತ್ತರ ಅಷ್ಟೇನೂ ಆಶಾದಾಯಕವಾಗಿರಲಿಲ್ಲ.
ಸ್ವಾಮಿಗಳೇ... ನೀವು ದೇವರಿಗಿಂತ ಒಂದು ಪಟ್ಟ ಕೆಳಗಿದ್ದೀರಿ. ಅದು ಬಹಳ ಶ್ರೇಷ್ಠವಾದ ಪಟ್ಟ. ಅದನ್ನು ಬಿಟ್ಟು ನಿಮ್ಮನ್ನು ಇನ್ನೂ ಕೆಳಗಿನ ಪಟ್ಟದಲ್ಲಿ ನೋಡುವುದಕ್ಕೆ ನಾವು ಇಷ್ಟಪಡುವುದಿಲ್ಲ. ನೀವು ಈಗಿರುವ ಪಟ್ಟವನ್ನು ಬಿಟ್ಟು ಕೆಳಗಿನ ಪಟ್ಟಕ್ಕೆ ಇಳಿಯುವುದಕ್ಕೆ ಹೊರಟರೆ ನಾವು ನಿಮಗೆ ಬೆಂಬಲ ಕೊಡುವುದಿಲ್ಲ ಎಂದು ದೈವ ಹೇಳಿತ್ತು ಎಂದು ಕೋಲದ ಸಂದರ್ಭ ಉಪಸ್ಥಿತರಿದ್ದವರು ಮಾತಾಡಿಕೊಳ್ಳುತ್ತಿದ್ದಾರೆ.
ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿ ಅಷ್ಠಮಠಾಧೀಶರ ವಲಯದಲ್ಲಿ ಇರಿಸುಮುರಿಸು ತಂದಿದ್ದ ಶೀರೂರು ಶ್ರೀಗಳು ಕೊನೆಗೂ ದೈವದ ಇಚ್ಛೆಯಂತೆ ಕಣದಿಂದ ಹಿಂದೆ ಸರಿದಿದ್ದಾರೆ ಎಂಬುದು ಚರ್ಚೆಗೆ ಗ್ರಾಸವಾಗಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications