ಶಿರೂರು ಶ್ರೀ ಸಾವು : ಬುರ್ಖಾ ಧರಿಸಿ ಪರಾರಿಗೆ ಯತ್ನ, ಮಹಿಳೆ ವಶಕ್ಕೆ
Recommended Video

ಉಡುಪಿ, ಜುಲೈ 24: ಶಿರೂರು ಶ್ರೀ ಅಸಹಜ ಸಾವು ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲಾಗಿದ್ದ ಮಹಿಳೆ ಬುರ್ಖಾ ಧರಿಸಿ ಪರಾರಿಯಾಗಲು ಯತ್ನಿಸಿದ್ದರು. ಆದರೆ, ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಆ ಮಹಿಳೆ ಬುರ್ಖಾ ಧರಿಸಿಕೊಂಡು ಮೂವರು ಮಹಿಳೆಯರ ಜತೆ ಎರ್ಟಿಗಾ ಕಾರ್ನಲ್ಲಿ ಪರಾರಿಯಾಗುತ್ತಿದ್ದರು. ಈ ವೇಳೆ ಬೆಳ್ತಂಗಡಿ ತಾಲ್ಲೂಕಿನ ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನ ಬಳಿ ಕಾರ್ ಪಂಕ್ಚರ್ ಆಗಿದೆ.
ಗ್ಯಾರೇಜ್ ಅಂಗಡಿ ಪಕ್ಕ ನಿಂತಿದ್ದ ಕಾರ್ ಕಂಡು ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಉಡುಪಿ ಪೊಲೀಸರ ಸೂಚನೆ ಮೇರೆಗೆ ಅವರ ಕಾರ್ ಹಿಂಬಾಲಿಸಿಕೊಂಡು ಬಂದಿದ್ದ ವೇಣೂರು ಪೊಲೀಸರು ಆ ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶಿರೂರು ಶ್ರೀ ಅವರಿಗೆ ಆಪ್ತರಾಗಿದ್ದಾರೆನ್ನಲಾದ ಆ ಮಹಿಳೆ ಸೇರಿದಂತೆ ಐವರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಅವರನ್ನು ಉಡುಪಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಸ್ವಾಮೀಜಿ ಪರಮಾಪ್ತೆ
ಶಿರೂರು ಸ್ವಾಮೀಜಿಗಳಿಗೆ ಮಹಿಳೆಯ ನಂಟು ಇರುವುದು ತನಿಖೆ ವೇಳೆ ಬಯಲಾಗಿತ್ತು. ಈ ಸಂಬಂಧ ಪೊಲೀಸರು ಬ್ರಹ್ಮಾವರದ ಅವರನ್ನು ವಿಚಾರಣೆಗೆಂದು ವಶಕ್ಕೆ ತೆಗೆದುಕೊಂಡಿದ್ದರು.
ಪ್ರತಿ ಸೋಮವಾರ ಶ್ರೀಗಳಿಗೆ ಊಟ ತರುತ್ತಿದ್ದ ಅವರು, ಮಠದಲ್ಲಿ ಉಳಿಯುತ್ತಿದ್ದರು. ಅವರ ಜೊತೆ ಅವರ ತಾಯಿ ಕೂಡ ಬರುತ್ತಿದ್ದರು. ಅವರು ಮೂಲತಃ ಸಿರ್ಸಿಯವರಾಗಿದ್ದು, ಹಲವು ಬಾರಿ ರಾತ್ರಿ ಮೂಲಮಠದಲ್ಲಿ ತಂಗಿದ್ದರು ಎಂದು ತಿಳಿದುಬಂದಿದೆ.
ಸ್ವಾಮೀಜಿ ಅವರು ತೊಡುತ್ತಿದ್ದ ಕಡಗ ಹಾಗೂ ಚಿನ್ನಾಭರಣಗಳನ್ನು ಧರಿಸಿ ಫೋಟೊ ಶೂಟ್ ಸಹ ಮಾಡಿಸಿಕೊಂಡಿದ್ದರು. ಈಗ ಅವರು ಪರಾರಿಯಾಗಲು ಯತ್ನಿಸಿದ್ದು ಅನುಮಾನಗಳನ್ನು ಮತ್ತಷ್ಟು ಬಲಗೊಳಿಸಿದೆ.

ಒಂದು ಡಿವಿಆರ್ ಪತ್ತೆ
ಮಠದ ಆವರಣದಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿನ ಡಿವಿಆರ್ ನಾಪತ್ತೆಯಾಗಿರುವುದು ವರದಿಯಾಗಿತ್ತು. ಆದರೆ ಎರಡು ಡಿವಿಆರ್ಗಳು ನಾಪತ್ತೆ ಆಗಿರುವುದು ಬೆಳಕಿಗೆ ಬಂದಿದ್ದು, ಅವುಗಳ ಪೈಕಿ ಒಂದು ಡಿವಿಆರ್ ಪತ್ತೆಯಾಗಿದೆ ಎನ್ನಲಾಗಿದೆ.
ಆದರೆ, ಆ ಡಿವಿಆರ್ ಕುರಿತು ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ.

ಬಾವಿಯಿಂದ ವಸ್ತುಗಳು ಹೊರಕ್ಕೆ
ಶಿರೂರು ಸ್ವಾಮಿಗಳ ಅಸಹಜ ಸಾವಿನ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು, ಮಠದ ಸುತ್ತಮುತ್ತ ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ.
ಶಿರೂರು ಮಠ ಮತ್ತು ಕೃಷ್ಣಮಠದ ಪಕ್ಕದಲ್ಲಿರುವ ಬಾವಿಯಲ್ಲಿ ಶೋಧನೆ ನಡೆಸಿದ್ದು, ಅಲ್ಲಿ ಮದ್ಯದ ಬಾಟಲಿಗಳು ಸೇರಿದಂತೆ ವಿವಿಧ ವಸ್ತುಗಳು ದೊರೆತಿವೆ ಎನ್ನಲಾಗಿದೆ. ಅವುಗಳನ್ನು ಚೀಲದಲ್ಲಿರಿಸಿ ಪೊಲೀಸರು ಪರಿಶೀಲನೆಗೆ ಕೊಂಡೊಯ್ದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನಿಂದನೆ
ಶಿರೂರು ಶ್ರೀಗಳ ಸಾವಿನ ಸಮಗ್ರ ತನಿಖೆಗೆ ಆಗ್ರಹಿಸಿರುವ ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾರ್ಹ ಬರಹಗಳನ್ನು ಪ್ರಕಟಿಸಲಾಗಿದೆ.
ಅಲ್ಲದೆ, ತಮಗೆ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆಗಳು ಸಹ ಬರುತ್ತಿವೆ ಎಂದು ಸ್ವಾಮೀಜಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶಿರೂರು ಶ್ರೀಗಳ ತನಿಖೆಯ ಭಾಗವಾಗಿಯೇ ತಮಗೆ ಬಂದಿರುವ ಬೆದರಿಕೆ ಹಾಗೂ ನಿಂದನಾತ್ಮಕ ಬರಹಗಳನ್ನು ಪರಿಗಣಿಸುವಂತೆ ಅವರು ಮನವಿ ಮಾಡಿದ್ದಾರೆ.

ವದಂತಿ ಹಬ್ಬಿಸಬೇಡಿ: ಪೊಲೀಸರ ಮನವಿ
ಶಿರೂರು ಶ್ರೀಗಳ ಅಸಹಜ ಸಾವಿಗೆ ಸಂಬಂಧಿಸಿದಂತೆ ಪರಿಶೀಲಿಸದೆಯೇ ಯಾವುದೇ ವರದಿ ಬಿತ್ತರಿಸದಂತೆ ಮಾಧ್ಯಮಗಳಿಗೆ ಪೊಲೀಸರು ಮನವಿ ಮಾಡಿದ್ದಾರೆ.
ಶ್ರೀಗಳಿಗೆ ಆಪ್ತರಾಗಿದ್ದ ಮಹಿಳೆ ಅವರಿಗೆ ವಿಷ ಬೆರೆಸಿದ ಜ್ಯೂಸ್ ನೀಡಿ ಕೊಂದಿದ್ದಾರೆ ಎಂಬ ಸುದ್ದಿ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇದು ವದಂತಿ. ಈ ರೀತಿಯ ವರದಿಗಳನ್ನು ಪರಿಶೀಲಿಸದೆ ಪ್ರಸಾರ ಮಾಡಬೇಡಿ. ಇದರಿಂದ ತನಿಖೆಗೆ ಅಡ್ಡಿಯಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ಮಠದ ಮಾಜಿ ಮ್ಯಾನೇಜರ್ ವಿಚಾರಣೆ
ಶಿರೂರು ಮಠದ ಮಾಜಿ ಮ್ಯಾನೇಜರ್ ಸುನಿಲ್ ಸಂಪಿಗೆತ್ತಾಯ ಹಾಗೂ ಸ್ವಾಮೀಜಿಗಳ ಜತೆ ಸಂಪರ್ಕ ಇರಿಸಿಕೊಂಡಿದ್ದ ಆಟೊ ಚಾಲಕನೊಬ್ಬನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಸ್ವಾಮೀಜಿ ಅವರ ಭೇಟಿಗೆ ನಿರಂತರವಾಗಿ ಬರುತ್ತಿದ್ದ ಮಹಿಳೆಯೊಬ್ಬರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ. ಮಣಿಪಾಲದ ದುಗಲಿಪಡುವಿನ ಆಟೊ ಚಾಲಕನಿಗೆ ಸ್ವಾಮೀಜಿ ಆಟೊ ಖರೀದಿಗೆ ಹಣಕಾಸಿನ ನೆರವು ನೀಡಿದ್ದರು.

ಜ್ಯೂಸಿನ ಬಾಟಲಿಯಲ್ಲಿ ವಿಷ?
ಶಿರೂರು ಸ್ವಾಮೀಜಿಗಳು ಕುಡಿದ ಜ್ಯೂಸಿನ ಬಾಟಲಿಯಲ್ಲಿ ವಿಷಕಾರಕ ಅಂಶ ಪತ್ತೆಯಾಗಿದೆ ಎನ್ನಲಾಗಿದೆ. ಮಠದಲ್ಲಿ ಜ್ಯೂಸಿನ ಬಾಟಲಿ ಪತ್ತೆಯಾಗಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ ವರದಿಗೆ ಕಾಯುತ್ತಿರುವುದಾಗಿ ಉಡುಪಿ ಪೊಲೀಸರು ತಿಳಿಸಿದ್ದಾರೆ.
ಜ್ಯೂಸಿನ ಬಾಟಲಿಯಲ್ಲಿ ಪತ್ತೆಯಾದ ವಿಷಕಾರಿ ಅಂಶದ ಕುರಿತು ಒಂದೆರಡು ದಿನಗಳಲ್ಲಿ ವರದಿ ಬರುವ ನಿರೀಕ್ಷೆಯಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications