ತಮ್ಮ ಜೀವಿತಾವಧಿಯಲ್ಲೇ ಉತ್ತರಾಧಿಕಾರಿ ಆಯ್ಕೆ ಮಾಡಿದ್ದ ಶೀರೂರು ಶ್ರೀ
ಉಡುಪಿ, ಜುಲೈ.20: ಶೀರೂರು ಶ್ರೀ ಲಕ್ಷ್ಮೀವರ ತೀರ್ಥರ ಶ್ರೀಪಾದರು ಸಾವನ್ನಪ್ಪಿದ ಬಳಿಕ ಉದ್ಭವಿಸಿದ ಪ್ರಮುಖ ಪ್ರಶ್ನೆ ಅಂದರೆ ಅವರ ಉತ್ತರಾಧಿಕಾರಿ ಯಾರು ಎಂಬುದು. ಶೀರೂರು ಶ್ರೀಗಳು ತಮ್ಮ ಜೀವಿತಾವಧಿಯಲ್ಲೇ ಉತ್ತರಾಧಿಕಾರಿ ಆಯ್ಕೆ ಮಾಡಿದ್ದರು ಎಂಬ ಅಂಶ ಇದೀಗ ಬಯಲಾಗತೊಡಗಿದೆ.
ಸೋದೆ ಮಠದ ವಿಶ್ವವಲ್ಲಭ ತೀರ್ಥರ ಸೋದರ ಸಂಬಂಧಿಯೊಬ್ಬರನ್ನು ಶಿಷ್ಯನನ್ನಾಗಿ ಸ್ವೀಕಾರ ಮಾಡಲು ಶೀರೂರು ಶ್ರೀಗಳು ಬಯಸಿದ್ದರು ಎನ್ನಲಾಗುತ್ತಿದೆ. ಕಳೆದ ಜುಲೈ 14ರಂದೇ ಘೋಷಣೆ ಮಾಡಲು ನಿರ್ಧರಿಸಿದ್ದ ಶೀರೂರು ಶ್ರೀ ಕಾರಣಾಂತರಗಳಿಂದ ಉತ್ತರಾಧಿಕಾರಿ ಘೋಷಣೆ ಮುಂದಕ್ಕೆ ಹಾಕಿದ್ದರು ಎಂಬ ಮಾತುಗಳು ಕೇಳಿ ಬರುತ್ತಿವೆ.
ಇದೀಗ ಅವರ ನಿಧನದ ಬಳಿಕ ಸಂಪ್ರದಾಯದಂತೆ ಶೀರೂರು ಮಠದ ದ್ವಂದ್ವ ಮಠವಾದ ಸೋದೆ ಶ್ರೀಗಳ ಹೆಗಲಿಗೆ ಈ ಜವಾಬ್ದಾರಿ ಬಿದ್ದಿದೆ. ಮಾಧ್ಯಮದ ಜೊತೆ ಮಾತಾಡಿದ ಸೋದೆ ವಿಶ್ವವಲ್ಲಭ ಶ್ರೀಗಳು, ಶೀರೂರು ಮಠದ ಸೊತ್ತುಗಳ ಸ್ವಾಧೀಕರಣ ಆಗಬೇಕು. ಈಗ ಎಲ್ಲವೂ ಪೊಲೀಸರ ಸುಪರ್ದಿಯಲ್ಲಿದೆ.

ಪೊಲೀಸರ ಮೂಲಕ ಕಾನೂನು ಪ್ರಕಾರ ಮಾಡುತ್ತಿದ್ದೇವೆ. ಯೋಗ್ಯ ವಟುವನ್ನು ನೋಡಿ ಉತ್ತರಾಧಿಕಾರಿಯನ್ನಾಗಿ ಮಾಡಲಾಗುವುದು. ಹಿರಿಯ ಯತಿಗಳ ಅಭಿಪ್ರಾಯವನ್ನು ಪಡೆದೇ ತೀರ್ಮಾನಿಸುತ್ತೇವೆ ಅಂತ ಪ್ರತಿಕ್ರಿಯೆ ನೀಡಿದ್ದಾರೆ. ಮೂಲಗಳ ಪ್ರಕಾರ ಈಗ ಆಷಾಢ ಮಾಸವಾದ ಕಾರಣ ಆಷಾಢ ಕಳೆದ ಬಳಿಕವಷ್ಟೇ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆ ಪ್ರಾರಂಭವಾಗಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications