ಶೀರೂರು ಶ್ರೀಗಳು ನಾಮಪತ್ರ ಹಿಂತೆಗೆದುಕೊಳ್ಳಲು ಕಾರಣವೇನು ಗೊತ್ತಾ?
ಉಡುಪಿ, ಏಪ್ರಿಲ್ 27 : ವಿಧಾನಸಭಾ ಚುನಾವಣಾ ಕಣಕ್ಕೆ ಧುಮುಕಿ ಕರಾವಳಿ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಬಿಜೆಪಿ ಟಿಕೆಟ್ ಆಕಾಂಕ್ಷಿ ಶೀರೂರು ಶ್ರೀಗಳು ಇಂದು ಶುಕ್ರವಾರ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ಇದೇ ಮಂಗಳವಾರದಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶ್ರೀಗಳು ನಾಮಪತ್ರ ಹಿಂತೆಗೆತಕ್ಕೆ ಕಾರಣವನ್ನೂ ನೀಡಿದ್ದಾರೆ.
ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಅವರನ್ನು ಬೆಂಬಲಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಅಲ್ಲದೆ, ಮೇ ಒಂದಕ್ಕೆ ಪ್ರಧಾನಿಯವರು ಉಡುಪಿಗೆ ಬರುತ್ತಿದ್ದಾರೆ. ಹೀಗಾಗಿ ತಮ್ಮ ಊರಿಗೆ ಬರುವಾಗ ಅವರ ಧ್ಯೇಯ ಮತ್ತು ಚಿಂತನೆಗಳಿಗೆ ತೊಡಕುಂಟು ಮಾಡಬಾರದು ಎಂಬ ಉದ್ದೇಶದಿಂದ ನಾಮಪತ್ರ ಹಿಂತೆಗೆದುಕೊಂಡಿದ್ದೇನೆ ಎಂದು ಶ್ರೀಗಳು ಸ್ಪಷ್ಟಪಡಿಸಿದ್ದಾರೆ.
ಹಾಗೆ ನೋಡಿದರೆ ಶ್ರೀಗಳ ಈ ನಿರ್ಧಾರ ಸಂಚಲನ ಮೂಡಿಸಿದ್ದು ಬಿಟ್ಟರೆ ಸ್ವತಃ ಶ್ರೀಗಳಲ್ಲೇ ಸ್ಪಷ್ಟತೆ ಇರಲಿಲ್ಲ. ಬಿಜೆಪಿ ಸರಿಯಿಲ್ಲ ಎನ್ನುತ್ತಲೇ ಶ್ರೀಗಳು ಬಿಜೆಪಿ ಟಿಕೆಟ್ ಬಯಸಿದ್ದರು. ಮಾತ್ರವಲ್ಲ, ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಹೊಗಳಿದ್ದರು.

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಶೀರೂರು ಸ್ವಾಮಿ, ಪ್ರಚಾರವನ್ನೂ ಮಾಡಿರಲಿಲ್ಲ. ಆದರೆ ಬಿಜೆಪಿಯಲ್ಲಿ ಸ್ವಾಮೀಜಿಯ ಉಮೇದುವಾರಿಕೆ ತುಸು ಆತಂಕ ಸೃಷ್ಟಿ ಮಾಡಿದ್ದು ನಿಜ. ಈಗ ಕಣದಿಂದ ಹಿಂದೆ ಸರಿಯುವ ಮೂಲಕ ಶ್ರೀಗಳು ಬಿಜೆಪಿ ಪಕ್ಷಕ್ಕೆ ತುಸು ನೆಮ್ಮದಿ ನೀಡಿದ್ದಾರೆ. ಉಡುಪಿಯಲ್ಲಿ ಬಿಜೆಪಿಯಿಂದ ರಘುಪತಿ ಭಟ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications