ಮೋದಿ ಸಂಪುಟದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಗೆ ರಾಜ್ಯದ ಸಂಸದರೊಬ್ಬರ ಸೇರ್ಪಡೆ
ಉಡುಪಿ, ಡಿ 22: ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರ ಒಬ್ಬ ಪುತ್ರ ಬಿ.ವೈ.ವಿಜಯೇಂದ್ರ ಬೈಇಲೆಕ್ಷನ್ ಸ್ಪೆಷಲಿಸ್ಟ್ ಆಗಿ ಸದ್ದು ಮಾಡುತ್ತಿದ್ದರೆ, ಇನ್ನೋರ್ವ ಪುತ್ರ, ಎರಡೆರಡು ಬಾರಿ ಸಂಸದರಾಗಿರುವ ಬಿ.ವೈ.ರಾಘವೇಂದ್ರ ಅಷ್ಟೇನೂ ಸುದ್ದಿಯಲ್ಲಿ ಇಲ್ಲ.
ಕಳೆದ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 25 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿತ್ತು. ಆದರೆ, ನಿರ್ಮಲಾ ಸೀತಾರಾಮನ್ (ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದು) ಹೊರತು ಪಡಿಸಿ, ಮೋದಿ ಸಂಪುಟದಲ್ಲಿ ಸ್ಥಾನ ಸಿಕ್ಕಿದ್ದು ಮೂವರಿಗೆ ಮಾತ್ರ. ಅವರೆಂದರೆ, ದಿ.ಸುರೇಶ್ ಅಂಗಡಿ, ಸದಾನಂದ ಗೌಡ, ಪ್ರಲ್ಹಾದ್ ಜೋಷಿ.
ಈಗ, ಯಡಿಯೂರಪ್ಪನವರ ಪುತ್ರ ರಾಘವೇಂದ್ರ ಸಚಿವ ಸ್ಥಾನದ ತನ್ನ ಆಕಾಂಕ್ಷೆಯನ್ನು ವ್ಯಕ್ತ ಪಡಿಸಿದ್ದಾರೆ. ಜಿಲ್ಲೆಯ ಕುಂದಾಪುರದ ಸಿದ್ದಾಪುರದ ಬಿಜೆಪಿ ಕಚೇರಿಯಲ್ಲಿ ಮಾತನಾಡುತ್ತಿದ್ದ ರಾಘವೇಂದ್ರ, "ಕೇಂದ್ರದಲ್ಲಿ ಸಚಿವ ಸ್ಥಾನ ಎನ್ನುವುದೊಂದು ದೊಡ್ಡ ಹುದ್ದೆ. ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಮಾಹಿತಿಯಿಲ್ಲ"ಎಂದು ಹೇಳಿದರು.

"ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಈ ಬಗ್ಗೆ ನಿರ್ಧರಿಸುತ್ತಾರೆ. ನನಗಿಂತಲೂ ಅನುಭವಿಗಳು ಪಕ್ಷದಲ್ಲಿ ಬೇಕಾದಷ್ಟು ಜನ ಇದ್ದಾರೆ. ನಿಮ್ಮೆಲ್ಲರ ಹಾರೈಕೆ, ಶುಭ ಕಾಮನೆಯಿಂದ ಸಚಿವ ಸ್ಥಾನ ಸಿಗುವ ದಿನ ಆದಷ್ಟು ಬೇಗ ಬರಲಿ"ಎಂದು ರಾಘವೇಂದ್ರ, ಕೇಂದ್ರದಲ್ಲಿ ಸಚಿವ ಸ್ಥಾನದ ತಮ್ಮ ಕನಸನ್ನು ತೋಡಿಕೊಂಡಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ಅನ್ನದಾತರ ಪ್ರತಿಭಟನೆಯ ಬಗ್ಗೆ ವಿವಾದಕಾರಿ ಹೇಳಿಕೆಯನ್ನು ನೀಡಿದ ರಾಘವೇಂದ್ರ, "ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವವರು ವಿರೋಧ ಪಕ್ಷದ ಕಾರ್ಯಕರ್ತರು ಮತ್ತು ಕೆಲವು ಸಂಘಟನೆಯ ಸದಸ್ಯರು"ಎಂದು ಹೇಳಿದರು.
Recommended Video
"ರೈತರು ಈ ದೇಶದ ಬೆನ್ನೆಲುಬು ಎನ್ನುವುದನ್ನು ನಾವು ಕಾಂಗ್ರೆಸ್ಸಿಗರಿಂದ ಕಲಿಯಬೇಕಾಗಿಲ್ಲ. ರೈತರ ಹಿತ ಕಾಪಾಡಲೆಂದೇ ನೂತನ ಕೃಷಿ ಮಸೂದೆಯನ್ನು ಜಾರಿಗೆ ತರಲು ಹೊರಟಿರುವುದು. ವಿರೋಧ ಪಕ್ಷಗಳು ಪ್ರತಿಭಟನಾಕಾರರ ತಲೆ ಕೆಡಿಸುತ್ತಿದ್ದಾರೆ"ಎಂದು ರಾಘವೇಂದ್ರ ಆರೋಪಿಸಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications