ಮಾನಸ ಸರೋವರ ಯಾತ್ರಾರ್ಥಿಗಳನ್ನು ಕರೆತರಲು ಪ್ರಯತ್ನ : ಸಂಸದೆ ಶೋಭಾ
ಉಡುಪಿ, ಜುಲೈ 03 : ಭಾರತದಿಂದ ಮಾನನಸರೋವರಕ್ಕೆ ಹೋದ ಯಾತ್ರಾರ್ಥಿಗಳ ಪೈಕಿ ಸುಮಾರು 500 ಮಂದಿ ನೇಪಾಳದ ಸಿಮಿಕೋಟ್ ನಲ್ಲಿ ಸಿಕ್ಕಿ ಬಿದ್ದಿದ್ದಾರೆ. ಅವರನ್ನು ಕಠ್ಮಂಡು ಮೂಲಕ ಭಾರತಕ್ಕೆ ಕರೆತರುವಲ್ಲಿ ಎಲ್ಲಾ ಪ್ರಯತ್ನ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಮಾನಸ ಸರೋವರದಲ್ಲಿ ಬಹಳಷ್ಟು ಕನ್ನಡಿಗರು ಸಿಕ್ಕಿ ಹಾಕಿಕೊಂಡಿದ್ದಾರೆ. ಅದರಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಬೆಂಗಳೂರಿನವರೇ ಹೆಚ್ಚು ಎಂಬ ಮಾಹಿತಿ ಇದೆ. ಈ ಬಗ್ಗೆ ನೇಪಾಳದ ಭಾರತದ ರಾಯಭಾರಿಯೊಂದಿಗೆ ಮಾತನಾಡಿದ್ದೇನೆ ಎಂದರು.
ಸಿಮಿಕೋಟ್ ನಲ್ಲಿರುವ ಸಣ್ಣ ಸಣ್ಣ ಹೋಟೆಲಿನಲ್ಲಿ ಅವರೆಲ್ಲ ತಂಗಿದ್ದಾರೆ. ಎರಡು ದಿನಕ್ಕೆ ಆಹಾರವಿದೆ. ಸಿಮಿಕೋಟ್ ಸಣ್ಣ ನಗರವಾಗಿದ್ದು ವಾಸಕ್ಕೆ ಎಲ್ಲಾ ವ್ಯವಸ್ಥೆ ಮಾಡಲಾಗುತ್ತಿದೆ. ಊಟಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದು ಶೋಭಾ ವಿವರಿಸಿದರು.

ಶೀರೂರು ಸ್ವಾಮೀಜಿ ಶಿಷ್ಯತ್ವ ಸ್ವೀಕಾರ
ಶಿರೂರು ಮಠಾಧೀಶರ ಬಗ್ಗೆ ಕೆಲ ತಿಂಗಳ ಹಿಂದೆ ಆರಂಭವಾಗಿದ್ದ ಚರ್ಚೆ ಈಗ ಮತ್ತೊಮ್ಮೆ ಜೀವ ಪಡೆದುಕೊಂಡಿದೆ.
ಶೀರೂರು ಸ್ವಾಮೀಜಿ ಶಿಷ್ಯ ಸ್ವೀಕಾರ ಮಾಡಬೇಕು ಎಂಬ ವಿಚಾರದಲ್ಲಿ ಇತರ ಅಷ್ಟ ಮಠಾಧೀಶರು ಕೆಲವೊಂದು ಮಹತ್ವದ ನಿರ್ಣಯ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಭಾನುವಾರ ಸೇರಿದ ಐದು ಮಠಾಧೀಶರು ಈ ಬಗ್ಗೆ ಚರ್ಚೆ ನಡೆಸಿದ್ದು ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ ಎಂದು ಪರ್ಯಾಯ ಪಲಿಮಾರು ಮಠಾಧೀಶರು ತಿಳಿಸಿದ್ದಾರೆ.
ಅಷ್ಟ ಮಠಾಧೀಶರು ಪಾಲಿಸಬೇಕಾದ ನಿಯಮಗಳನ್ನು ಶೀರೂರು ಸ್ವಾಮೀಜಿ ಪಾಲಿಸುತ್ತಿಲ್ಲ ಎಂಬ ಬಗ್ಗೆ ಕೆಲ ತಿಂಗಳ ಹಿಂದೆ ಚರ್ಚೆ ಆರಂಭವಾಗಿತ್ತು. ಸದ್ಯ ಶೀರೂರು ಮಠದ ಪಟ್ಟದ ದೇವರು ಕೃಷ್ಣ ಮಠದಲ್ಲೇ ಇದ್ದು ಪಲಿಮಾರು ಸ್ವಾಮೀಜಿ ಪೂಜೆ ನಡೆಸುತ್ತಿದ್ದಾರೆ.
ಶೀರೂರು ಮಠದ ಶಿಷ್ಯ ಸ್ವೀಕಾರದ ಬಗ್ಗೆ ಯಾವುದೇ ತೀರ್ಮಾನಕ್ಕೆ ಬಂದಿಲ್ಲ, ಪೇಜಾವರ ಸ್ವಾಮೀಜಿ ನೇತೃತ್ವದಲ್ಲಿ ಇನ್ನೊಮ್ಮೆ ಸಭೆ ಸೇರಿ ಈಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಅಷ್ಟಮಠಾಧೀಶರಲ್ಲಿ ಬಹುಮತದ ತೀರ್ಮಾನವೇ ಅಂತಿಮ ಎಂದು ಪರ್ಯಾಯ ಪಲಿಮಾರು ಸ್ವಾಮೀಜಿ ತಿಳಿಸಿದ್ದಾರೆ.
ಕಳೆದ ವಿಧಾನ ಸಭಾಚುನಾವಣೆ ಸಂದರ್ಭದಲ್ಲಿ ಶೀರೂರು ಸ್ವಾಮೀಜಿಯ ಶಿಷ್ಯ ಸ್ವೀಕಾರದ ಕುರಿತು ಚರ್ಚೆ ಆರಂಭವಾಗಿದ್ದನ್ನುಇಲ್ಲಿ ಸ್ಮರಿಸಬಹುದು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications