ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏರ್ ಶೋ ಅಗ್ನಿ ಅವಘಡಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿ ಕಾರಣ:ಶೋಭಾ ಕರಂದ್ಲಾಜೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಫೆಬ್ರವರಿ 24:ಬೆಂಗಳೂರು ಏರ್ ಶೋ ಸ್ಥಳದಲ್ಲಿ ನಡೆದ ಬೆಂಕಿ ಅವಘಡ ಕುರಿತು ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.

ಸುಟ್ಟ ಕಾರಿನ ಕರಕಲು ಸತ್ಯ ಹೇಳಲು ಉಳಿದ ಒಂದೇ ಸಾಕ್ಷಿ.. ಅದೂ ಸುಟ್ಟ ಕ್ಯಾಮರಾ.!ಸುಟ್ಟ ಕಾರಿನ ಕರಕಲು ಸತ್ಯ ಹೇಳಲು ಉಳಿದ ಒಂದೇ ಸಾಕ್ಷಿ.. ಅದೂ ಸುಟ್ಟ ಕ್ಯಾಮರಾ.!

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏರ್ ಶೋ ಕೇಂದ್ರ ಸರ್ಕಾರ- ವಿವಿಧ ಇಲಾಖೆಯ ಆಯೋಜನೆಯಾಗಿದ್ದು, ಕಾರ್ಯಕ್ರಮಕ್ಕೆ ರಕ್ಷಣೆ ಕೊಡಬೇಕಾದದ್ದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಏರ್ ಶೋಗೆ ದೇಶ ವಿದೇಶದಿಂದ ಜನ ಬಂದಿದ್ದು, ರಾಜ್ಯ ಸರ್ಕಾರದ ಬೇಜವಾಬ್ದಾರಿ ಅವಘಡಕ್ಕೆ ಕಾರಣ ಎಂದು ಶೋಭಾ ಆರೋಪಿಸಿದ್ದಾರೆ.

 Viral Video: ಏರೋ ಇಂಡಿಯಾದಲ್ಲಿ ಧಗಧಗಿಸಿದ ಕಾರುಗಳು Viral Video: ಏರೋ ಇಂಡಿಯಾದಲ್ಲಿ ಧಗಧಗಿಸಿದ ಕಾರುಗಳು

ಏರ್ ಶೋ ಶಿಫ್ಟಾಗುವಾಗ ನಾವು ದನಿ ಎತ್ತಿದ್ದೆವು. ಇಂತಹ ಘಟನೆ ಶೋಭೆ ತರುವುದಿಲ್ಲ.ರಾಜ್ಯ ಸರ್ಕಾರ ತನ್ನ ತಪ್ಪನ್ನು ಬೇರೆಯವರ ಮೇಲೆ ಹೊರಿಸುತ್ತದೆ.ರಕ್ಷಣೆ ಕೊಡಲು ಆಗಲ್ಲಾ ಅಂದ್ರೆ ಏನರ್ಥ?.ಪೊಲೀಸ್, ಅಗ್ನಿಶಾಮಕ ಇಲಾಖೆ ಏನು ಮಾಡುತ್ತಿತ್ತು?, ಕಾಶ್ಮೀರದ ಫುಲ್ವಾಮಾ ಘಟನೆಗೂ ಇದಕ್ಕೂ ಲಿಂಕ್ ಇದ್ಯಾ? ದೇಶದ್ರೋಹಿಗಳು ಈ ಕೃತ್ಯದಲ್ಲಿ ತೊಡಗಿರಬಹುದಾ?
ಹೀಗೆ ಎಲ್ಲಾ ಆಯಾಮದಲ್ಲಿ ಈ ಬಗ್ಗೆ ಉನ್ನತಮಟ್ಟದ ತನಿಖೆಯಾಗಬೇಕು ಎಂದರು.

Shobha Karandlaje reacted about Bangalore Air Show Fire Accident

ರೈತರ ಖಾತೆಗೆ 2 ಸಾವಿರ ರೂಪಾಯಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುವುದರ ಕುರಿತು ಮಾತನಾಡಿದ ಶೋಭಾ ಕರಂದ್ಲಾಜೆ, ಆರಂಭಿಕ ಈ ಮೊತ್ತ ಭವಿಷ್ಯದಲ್ಲಿ ಹೆಚ್ಚಾಗಲಿದೆ. ರೈತರ ಮೇಲಿನ ಹೊರೆ ಕಡಿಮೆ ಆಗಲಿದೆ. ನೇರವಾಗಿ ರೈತರಿಗೆ ಈ ಹಣ ತಲುಪುತ್ತದೆ. ಪ್ರಧಾನಿ ಮೋದಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

English summary
MP Shobha Karandlaje reacted about Bangalore Air Show 2019 Fire Accident. She said due to the state government's responsibility this fire accident occurred.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X