ಇಲ್ಲಿ ಅನ್ನ ತಿಂದು ಪಾಕ್ ಪರ ಘೋಷಣೆ ಕೂಗ್ತಾರೆ ಎಂದು ಗುಡುಗಿದ ಶೋಭಾ
ಉಡುಪಿ, ಫೆಬ್ರವರಿ 21: ಬೆಂಗಳೂರಿನಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದೆ ಶೋಭಾ ಕರಂದ್ಲಾಜೆ, "ಪಾಕ್ ಪರ ಘೋಷಣೆ ಕೂಗುವವರಿಗೆ ಉಗ್ರ ಶಿಕ್ಷೆ ಆಗಬೇಕು. ಭಾರತ ವಿರೋಧಿ ಘೋಷಣೆ ಕೂಗುವ ಜಾಲ ನಿರ್ಮಾಣ ಆಗಿದೆ. ದೇಶದಲ್ಲಿ ಜಿನ್ನಾ ಮಾನಸಿಕತೆ ಸೃಷ್ಟಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಈ ಸಂಬಂಧ ದೇಶದ ಮತ್ತು ರಾಜ್ಯದ ಕಾನೂನಲ್ಲಿ ಬದಲಾವಣೆ ಆಗಬೇಕು" ಎಂದಿದ್ದಾರೆ.
"ಭಾರತದ ಅನ್ನ ತಿಂದು, ಸಬ್ಸಿಡಿ ಪಡೆದು ಪಾಕ್ ಪರ ಘೋಷಣೆ ಕೂಗ್ತಾರೆ. ಇದರ ಹಿಂದೆ ಇರುವ ವ್ಯಕ್ತಿಗಳ ತನಿಖೆ ಆಗಬೇಕು, ಆಯೋಜಕರ ತನಿಖೆಯೂ ಆಗಬೇಕು. ಅಮೂಲ್ಯ ತಂದೆ ಬಗ್ಗೆಯೂ ತನಿಖೆಯಾಗಬೇಕು. ಅಮೂಲ್ಯ ತಂದೆ ಕೊಪ್ಪದವರು. ಹಿಂದೆ ನಕ್ಸಲರ ಜೊತೆ ಅವರಿಗೆ ಸಂಪರ್ಕ ಇತ್ತು. ಈ ಬಗ್ಗೆ ಪೊಲೀಸರಿಗೂ ಮಾಹಿತಿ ಇದೆ. ಅಮೂಲ್ಯ ಹಿನ್ನೆಲೆಯೇನು, ಈಕೆಗೆ ಯಾವ ಸಂಘಟನೆಯ ಜೊತೆ ಸಂಬಂಧ ಇದೆ? ಈ ಎಲ್ಲದರ ಬಗ್ಗೆ ತನಿಖೆಯಾಗಬೇಕು. ಎಲ್ಲರನ್ನೂ ದೇಶದ್ರೋಹದ ಕೇಸಿನ ಮೇಲೆ ಜೈಲಿಗೆ ಹಾಕಬೇಕು" ಎಂದು ಗುಡುಗಿದ್ದಾರೆ.
"ಯಾವುದೇ ವಕೀಲರು ಕೇಸು ನಡೆಸಬಾರದು. ಹುಬ್ಬಳ್ಳಿ ಪ್ರಕರಣದಲ್ಲಿ ಬೆಂಗಳೂರಿನ ವಕೀಲರು ವಾದ ಮಾಡಲು ಹೋಗಿದ್ದಾರೆ. ರಾಷ್ಟ್ರಪ್ರೇಮದ ವಿಚಾರದಲ್ಲಿ ಯಾರೂ ರಾಜಿ ಆಗಬೇಡಿ. ಚುನಾವಣೆ ಬಂದಾಗ ರಾಜಕೀಯ ಮಾಡೋಣ. ಆದರೆ ಭಾರತದ ಬಗ್ಗೆ ಅವಹೇಳನ ಮಾಡಿದವರಿಗೆ ಉಗ್ರ ಶಿಕ್ಷೆಯಾಗಬೇಕು" ಎಂದಿದ್ದಾರೆ.

ಇನ್ನು ಅಮೂಲ್ಯಾಗೆ ಮಾತನಾಡಲು ಅವಕಾಶ ನೀಡಬೇಕಿತ್ತು ಎಂದು ಡಿಕೆಶಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದೆ, "ಡಿಕೆಶಿ ಒರ್ಜಿನಲ್ ಕಾಂಗ್ರೆಸ್ಸಿಗ ಅಲ್ಲ. ನಿಜವಾದ ಕಾಂಗ್ರೆಸ್ಸಿಗರು ಈ ಹೇಳಿಕೆ ನೀಡುತ್ತಿರಲಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಪಕ್ಷ ಕಾಂಗ್ರೆಸ್ ಅಂತಾರೆ. ಹೇಳಿಕೆ ನೀಡಿದ ಡಿಕೆಶಿ ಬಗ್ಗೆಯೂ ತನಿಖೆಯಾಗಬೇಕು" ಎಂದು ಹೇಳಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications