ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೌದಿ ಜೈಲಲ್ಲಿ ಹರೀಶ್ ಬಂಗೇರ: ಶೋಭಾ ಕರಂದ್ಲಾಜೆ ಹೇಳಿದ್ದೇನು?

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಫೆಬ್ರವರಿ 21: ಒಂದೂವರೆ ತಿಂಗಳಿನಿಂದ ಸೌದಿ ಜೈಲಿನಲ್ಲಿ ಬಂಧಿಯಾಗಿರುವ ಕುಂದಾಪುರದ ಹರೀಶ್ ಬಂಗೇರ ಬಿಡುಗಡೆಯ‌ ಕುರಿತು ಸಂಸದೆ ಶೋಭಾ ಕರಂದ್ಲಾಜೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

"ಹರೀಶ್ ಬಂಗೇರ ಬಿಡುಗಡೆ ಕುರಿತು ಕೇಂದ್ರ ಸರ್ಕಾರದ ಜೊತೆ ಮಾತನಾಡಿದ್ದೇನೆ. ಸೌದಿ ದೊರೆ ವಿರುದ್ಧ ಹರೀಶ್ ಪೋಸ್ಟ್ ಹಾಕಿದ್ದಾರೆ ಎನ್ನುವ ಕೇಸ್ ಬಲವಾಗಿದೆ. ಫೇಸ್‌ಬುಕ್ ಪೋಸ್ಟ್ ಮಾಡಿದ್ದು ಯಾರು ಎನ್ನುವ ಐಟಿ ಫಾರೆನ್ಸಿಕ್ ರಿಪೋರ್ಟ್ ಕಳುಹಿಸಬೇಕಾಗಿದೆ. ನಕಲಿ ಖಾತೆಯಿಂದ ಪೋಸ್ಟ್ ಮಾಡಿದವರ ಪತ್ತೆ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಕ್ರಿಯವಾಗಿದ್ದು, ಈ ಬಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಸಂಪರ್ಕದಲ್ಲಿದ್ದೇನೆ" ಎಂದು ತಿಳಿಸಿದ್ದಾರೆ.

ಸೌದಿ ದೊರೆ ವಿರುದ್ಧ ಪೋಸ್ಟ್‌; ಹರೀಶ್ ನಿವಾಸಕ್ಕೆ ಅಧಿಕಾರಿಗಳ ಭೇಟಿಸೌದಿ ದೊರೆ ವಿರುದ್ಧ ಪೋಸ್ಟ್‌; ಹರೀಶ್ ನಿವಾಸಕ್ಕೆ ಅಧಿಕಾರಿಗಳ ಭೇಟಿ

Shobha Karandlaje Reaction On Harish Bangera Case

"ಪ್ರಾಥಮಿಕ ತನಿಖೆಯಲ್ಲಿ ಮೊದಲು ಪೋಸ್ಟ್ ಮಾಡಿದವರು ಬೇರೆಯವರು ಎನ್ನುವ ಮಾಹಿತಿ ಸಿಕ್ಕಿದೆ. ಅಂತಿಮವಾದ ನಂತರ ವರದಿಯನ್ನು ಕೇಂದ್ರ ಸರ್ಕಾರ, ರಾಯಭಾರಿ ಕಚೇರಿಗೆ ಕಳುಹಿಸಲಾಗುವುದು' ಎಂದು ಹೇಳಿದರು.

English summary
MP Shobha Karandlaje in Udupi has reacted on the issue of Harish Bangera of Kundapur who has been held in Saudi jail since one and a half months,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X