ಕನ್ನಡ ಸಾಹಿತ್ಯ ಸಮ್ಮೇಳನದ ವಿರುದ್ಧ ಸಂಸದೆ ಶೋಭಾ ಕಿಡಿ

ಉಡುಪಿ, ನವೆಂಬರ್ 25: ಮೈಸೂರಿನಲ್ಲಿ ನಡೆಯುತ್ತಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವಿರುದ್ಧ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅಸಮಾಧಾನ ವ್ಯಕ್ತಪಡಿಸಿದರು.

ಉಡುಪಿಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ಕನ್ನಡ ಸಾಹಿತ್ಯ ಸಮ್ಮೇಳನ ಕಾಂಗ್ರೆಸ್ ಸಮ್ಮೇಳನವಾಗಿ ಪರಿವರ್ತನೆಗೊಂಡಿದೆ ಎಂದು ಕಿಡಿಕಾರಿದರು.

Shobha Karandlaje Unhappy about 83rd Kannada Sahitya Sammelana

ಸಮ್ಮೇಳನದಲ್ಲಿ ಎಡಪಂಥೀಯ ವಿಚಾರಧಾರೆ ಹರಿಯಬಿಟ್ಟಿದ್ದಾರೆ. ಸಮ್ಮೇಳನ ದಲ್ಲಿ ಹಿಂದೂ ಧರ್ಮ ಸಂಸದ್ ಬಗ್ಗೆಯೂ ಟೀಕಿಸಲಾಗುತ್ತಿದೆ. ಸಮ್ಮೇಳನದಲ್ಲಿ ಕನ್ನಡ ನಾಡಿನ ಸಮಸ್ಯೆ ಬಗ್ಗೆ ಚರ್ಚೆ ನಡೆಯದೆ ಕನ್ನಡ ಹೊರತಾದ ಚರ್ಚೆ ನಡೆಯುತ್ತಿದೆ ಇದನ್ನು ನಾವು ಆತಂಕದಿಂದ ನೋಡುವಂತಾಗಿದೆ ಎಂದು ಸಮ್ಮೇಳನಾಧ್ಯಕ್ಷ ಚಂಪಾ ಸೇರಿದಂತೆ ಎಲ್ಲರ ವಿರುದ್ಧ ಶೋಭಾ ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಸೆಕ್ಯೂಲರ್ ಪಕ್ಷಕ್ಕೇ ಮತನೀಡಿ ಎಂದು ಸಮ್ಮೇಳನಾಧ್ಯಕ್ಷ ಚಂದ್ರಶೇಖರ್ ಪಾಟೀಲ್ 83ನೇ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಹೇಳಿದ್ದರು. ಆದರೆ ಈ ಹೇಳಿಕೆ ಇದೀಗ ಹಲವು ಟೀಕೆಗಳು ವ್ಯಕ್ತವಾಗುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+