ಉಡುಪಿಯಿಂದ ಉತ್ತರಪ್ರದೇಶಕ್ಕೆ ಹೊರಟ ಶ್ರಮಿಕ್ ರೈಲು
ಉಡುಪಿ, ಮೇ 17: ಕೃಷ್ಣನಗರಿ ಉಡುಪಿಯಿಂದ ಉತ್ತರಪ್ರದೇಶಕ್ಕೆ ವಿಶೇಷ ಶ್ರಮಿಕ್ ರೈಲು ಇಂದು ಪ್ರಯಾಣ ಬೆಳೆಸಿತು. ಈ ಹಿನ್ನೆಲೆಯಲ್ಲಿ ಎರಡೂವರೆ ಸಾವಿರಕ್ಕೂ ಅಧಿಕ ಕಾರ್ಮಿಕರು ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಬಂದಿದ್ದರು.
ಆದರೆ ಒಂದೂವರೆ ಸಾವಿರ ಪ್ರಯಾಣಿಕರಿಗೆ ಮಾತ್ರ ರೈಲಿನಲ್ಲಿ ಅವಕಾಶ ಇದ್ದಿದ್ದರಿಂದ ಉಳಿದ ಸಾವಿರದಷ್ಟು ವಲಸೆ ಕಾರ್ಮಿಕರ ಪ್ರಯಾಣಕ್ಕೆ ಅವಕಾಶ ಸಿಗದೆ ನಿರಾಸೆಗೊಂಡರು.ಇವರೆಲ್ಲ ಸೇವಾ ಸಿಂಧು ಮೂಲಕ ಅರ್ಜಿ ಹಾಕಿ ಬಂದಿದ್ದರು.

ಇನ್ನಷ್ಟು ಕಾರ್ಮಿಕರು ಉಡುಪಿಯಿಂದ ಮರಳಿ ತಮ್ಮ ಊರಿಗೆ ಹೋಗಬೇಕಿರುವುದರಿಂದ ಜಿಲ್ಲಾಡಳಿತ ಎರಡನೇ ರೈಲು ವ್ಯವಸ್ಥೆಗೊಳಿಸುವ ಭರವಸೆ ನೀಡಬೇಕಾಯಿತು. ರೈಲ್ವೆ ನಿಲ್ದಾಣಕ್ಕೆ ಬಂದ ಕಾರ್ಮಿಕರನ್ನು ನಿಯಂತ್ರಿಸಲು ಪೊಲೀಸರು ಒಂದು ಹಂತದಲ್ಲಿ ಹರಸಾಹಸ ಪಡಬೇಕಾಯಿತು.

ಉತ್ತರಪ್ರದೇಶದ ವಲಸೆ ಕಾರ್ಮಿಕರು ಇಂದು ಬೆಳಿಗ್ಗಿನಿಂದಲೇ ಬಂದು ಠಿಕಾಣಿ ಹೂಡಿದ್ದರು. ಇವರಿಗೆಲ್ಲ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಆಹಾರ ವಿತರಣೆ ಮಾಡಲಾಯಿತು.
More From
-
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications