ಉಡುಪಿ ಜಿಲ್ಲೆಯ ಈ ಪುಣ್ಯಕ್ಷೇತ್ರದಲ್ಲಿ ಎಂದೂ ಬತ್ತದ ಜೀವಸೆಲೆ: ಅಚ್ಚರಿಯ ವಿಚಾರ ತಿಳಿಯಿರಿ
ಉಡುಪಿ, ಮೇ 19: ಸದ್ಯ ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿಧಾನವಾಗಿ ಆರಂಭವಾಗಿದ್ದು, ಈ ಮಧ್ಯೆ ಕಳೆದ ಕೆಲವು ದಿನಗಳಿಂದ ಮಳೆ ಆರಂಭವಾಗಿದೆ. ಆದರೆ ನಗರ ಪ್ರದೇಶದಲ್ಲಿ ನೀರಿನ ಸಮಸ್ಯೆ ಇದ್ದು, ಈಗಾಗಲೇ ನೀರಿನ ರೇಷನ್ ಪದ್ಧತಿಯೂ ಆರಂಭ ಆಗಿದೆ. ಝಳ ಝಳ ಬಿಸಿಲು, ಬಿಸಿಲಿನ ಧಗೆ, ಸೆಕೆಯಿಂದ ಜನ ಹೈರಾಣಾಗಿದ್ದ ಉಡುಪಿ ಜಿಲ್ಲೆಯಲ್ಲಿ ಸಮುದ್ರಮಟ್ಟಕ್ಕಿಂತ 300 ಅಡಿಗಳ ಮೇಲೆ ನೀರು ಸಿಗುತ್ತಿದೆ. ಅಚ್ಚರಿಯಾದರೂ ಇದು ಸತ್ಯ.
ಕರಾವಳಿ ಜಿಲ್ಲೆಗಳಲ್ಲಿ ಒಂದಾದ ಉಡುಪಿ ವಿಶಿಷ್ಟ ಮತ್ತು ವೈವಿಧ್ಯತೆಗಳಿಂದ ಕೂಡಿರುವ ಜಿಲ್ಲೆ ಎಂದರೆ ತಪ್ಪಾಗಲಾರದು. ಜಿಲ್ಲೆಯ ಪಶ್ಚಿಮ ದಿಕ್ಕಿನಲ್ಲಿ ಬೋರ್ಗೆರೆಯುವ ಆರಬ್ಬೀ ಸಮುದ್ರ ವಿದ್ದರೂ ಕೂಡ ಇಲ್ಲಿನ ಜನರಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಭವಣೆ ತಪ್ಪಿದ್ದಲ್ಲ. ಸದ್ಯ ಜಿಲ್ಲೆಯ ಸಮುದ್ರ ಮಟ್ಟಕ್ಕೆ ಸಮಾನಾಂತರವಾಗಿರುವ ಬಹುತೇಕ ಜಾಗಗಳಲ್ಲಿ ಜಲಮೂಲಗಳು ಇಂಗಿ ಹೋಗಿದೆ ಎನ್ನಬಹುದು.

ಜೂನ್ ಮೊದಲ ವಾರದಲ್ಲಿ ಬರಬಹುದಾದ ಮಳೆಯ ನಿರೀಕ್ಷೆಯಲ್ಲಿ ಜಿಲ್ಲೆಯ ಜನರಿದ್ದಾರೆ. ಇಂತಹ ಜಿಲ್ಲೆಯಲ್ಲಿ ಸಮುದ್ರ ಮಟ್ಟಕ್ಕಿಂತ 300 ಅಡಿ ಎತ್ತರದಲ್ಲಿ ಕುಡಿಯುವ ನೀರು ಶೇಖರಣೆಯಾಗಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಹೊಸಂಗಡಿ ಬಳಿಯ ಮೆಟ್ಕಲ್ ಗುಡ್ಡ ಈ ಪ್ರಕೃತಿ ವೈಚಿತ್ರಕ್ಕೆ ಸಾಕ್ಷಿಯಾಗಿದೆ.
ಮೆಟ್ಕಲ್ ಗುಡ್ಡವು ಉಡುಪಿ ಜಿಲ್ಲೆಯ ಹೊಸಂಗಡಿ ಗ್ರಾಮದಲ್ಲಿದೆ. ಈ ಸ್ಥಳವು ಬಿದನೂರು ಮತ್ತು ಕೆಳದಿ ಸಾಮ್ರಾಜ್ಯದ ಐತಿಹಾಸಿಕವಾಗಿ ಮಹತ್ವದ್ದಾಗಿದೆ ಮತ್ತು ಕೆಳದಿ ಸಾಮ್ರಾಜ್ಯದ ರಾಜ ಶಿವಪ್ಪ ನಾಯಕ ಈ ಪ್ರದೇಶವನ್ನು ಆಳಿದಾಗ ಪ್ರಮುಖ ಸ್ಥಳವಾಗಿತ್ತು. ವಿಶೇಷವಾಗಿ ಬೆಟ್ಟದ ತುದಿಯಲ್ಲಿ ಕೋಟೆಗಳ ಅವಶೇಷಗಳಿವೆ ಸಾಹಸ ಪ್ರಿಯರಿಗೆ ಗಮನಾರ್ಹ ಮತ್ತು ದೊಡ್ಡ ಅನ್ವೇಷಣೆಯಾಗಿದೆ.

ಈ ಸ್ಥಳವು ವರಾಹಿ ಭೂಗತ ವಿದ್ಯುತ್ ಯೋಜನೆಗೆ ಸಮೀಪದಲ್ಲಿದೆ, ಇಡೀ ಹುಲಿಕಲ್ ಘಾಟ್ (ಬಾಳೆಬರೆ) ಪ್ರದೇಶ ಮತ್ತು ಉಳಿದ ಕುಂಚಿಕಲ್ ಜಲಪಾತವು ಮೇಲಿನಿಂದ ಗೋಚರಿಸುತ್ತದೆ. ಬೆಟ್ಟದ ತುದಿಯಲ್ಲಿ ಇರುವ ಗಣೇಶ ದೇವಾಲಯದ ಮುಂಭಾಗದಲ್ಲಿರುವಂತ ಪುರಾತನ ಜಲ ವಿಸ್ಮಯ ಎನ್ನುವಂತಿದೆ. ಈ ಬಾವಿಯಲ್ಲಿ ವರ್ಷದ 365 ದಿನಗಳು ಕೂಡ ನೀರು ಲಭ್ಯವಿದ್ದು, ಇಲ್ಲಿಗೆ ಭೇಟಿ ನೀಡುವ ಎಲ್ಲರನ್ನ ಆಶ್ಚರ್ಯಚಕಿತರನ್ನಾಗಿಸುತ್ತಿದೆ. ಜಿಲ್ಲೆಯಲ್ಲಿ ನೀರಿನ ಭವಣೆ ಇದ್ದರೂ ಕೂಡ ಬಹುತೇಕ ಇಂತಹ ಪುರಾತನ ಮತ್ತು ಐತಿಹಾಸಿಕ ಸ್ಥಳಗಳಲ್ಲಿ ಇಂದಿಗೂ ನೀರಿನ ಲಭ್ಯತೆ ಇರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಬಿಸಿಲಿನ ತಾಪಕ್ಕೆ ಕಳೆಗುಂದಿದೆಯೇ ಮುಖದ ಕಾಂತಿ? ಬೇಸಿಗೆಯಲ್ಲಿ ತ್ವಚೆಯ ರಕ್ಷಣೆಗೆ ಇಲ್ಲಿವೆ 12 ಸರಳ ಸೂತ್ರ -
Summer Gardening: ಸುಡು ಬಿಸಿಲಲ್ಲೂ ನಿಮ್ಮ ಕೈತೋಟದ ಹಸಿರಾಗಿರಲಿ: ಗಿಡಗಳ ರಕ್ಷಣೆಗೆ ಇಲ್ಲಿವೆ ಸರಳ ಸೂತ್ರಗಳು -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ












Click it and Unblock the Notifications