ಉಡುಪಿ ಜಿಲ್ಲೆಯ ಈ ಪುಣ್ಯಕ್ಷೇತ್ರದಲ್ಲಿ ಎಂದೂ ಬತ್ತದ ಜೀವಸೆಲೆ: ಅಚ್ಚರಿಯ ವಿಚಾರ ತಿಳಿಯಿರಿ
ಉಡುಪಿ, ಮೇ 19: ಸದ್ಯ ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿಧಾನವಾಗಿ ಆರಂಭವಾಗಿದ್ದು, ಈ ಮಧ್ಯೆ ಕಳೆದ ಕೆಲವು ದಿನಗಳಿಂದ ಮಳೆ ಆರಂಭವಾಗಿದೆ. ಆದರೆ ನಗರ ಪ್ರದೇಶದಲ್ಲಿ ನೀರಿನ ಸಮಸ್ಯೆ ಇದ್ದು, ಈಗಾಗಲೇ ನೀರಿನ ರೇಷನ್ ಪದ್ಧತಿಯೂ ಆರಂಭ ಆಗಿದೆ. ಝಳ ಝಳ ಬಿಸಿಲು, ಬಿಸಿಲಿನ ಧಗೆ, ಸೆಕೆಯಿಂದ ಜನ ಹೈರಾಣಾಗಿದ್ದ ಉಡುಪಿ ಜಿಲ್ಲೆಯಲ್ಲಿ ಸಮುದ್ರಮಟ್ಟಕ್ಕಿಂತ 300 ಅಡಿಗಳ ಮೇಲೆ ನೀರು ಸಿಗುತ್ತಿದೆ. ಅಚ್ಚರಿಯಾದರೂ ಇದು ಸತ್ಯ.
ಕರಾವಳಿ ಜಿಲ್ಲೆಗಳಲ್ಲಿ ಒಂದಾದ ಉಡುಪಿ ವಿಶಿಷ್ಟ ಮತ್ತು ವೈವಿಧ್ಯತೆಗಳಿಂದ ಕೂಡಿರುವ ಜಿಲ್ಲೆ ಎಂದರೆ ತಪ್ಪಾಗಲಾರದು. ಜಿಲ್ಲೆಯ ಪಶ್ಚಿಮ ದಿಕ್ಕಿನಲ್ಲಿ ಬೋರ್ಗೆರೆಯುವ ಆರಬ್ಬೀ ಸಮುದ್ರ ವಿದ್ದರೂ ಕೂಡ ಇಲ್ಲಿನ ಜನರಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಭವಣೆ ತಪ್ಪಿದ್ದಲ್ಲ. ಸದ್ಯ ಜಿಲ್ಲೆಯ ಸಮುದ್ರ ಮಟ್ಟಕ್ಕೆ ಸಮಾನಾಂತರವಾಗಿರುವ ಬಹುತೇಕ ಜಾಗಗಳಲ್ಲಿ ಜಲಮೂಲಗಳು ಇಂಗಿ ಹೋಗಿದೆ ಎನ್ನಬಹುದು.

ಜೂನ್ ಮೊದಲ ವಾರದಲ್ಲಿ ಬರಬಹುದಾದ ಮಳೆಯ ನಿರೀಕ್ಷೆಯಲ್ಲಿ ಜಿಲ್ಲೆಯ ಜನರಿದ್ದಾರೆ. ಇಂತಹ ಜಿಲ್ಲೆಯಲ್ಲಿ ಸಮುದ್ರ ಮಟ್ಟಕ್ಕಿಂತ 300 ಅಡಿ ಎತ್ತರದಲ್ಲಿ ಕುಡಿಯುವ ನೀರು ಶೇಖರಣೆಯಾಗಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಹೊಸಂಗಡಿ ಬಳಿಯ ಮೆಟ್ಕಲ್ ಗುಡ್ಡ ಈ ಪ್ರಕೃತಿ ವೈಚಿತ್ರಕ್ಕೆ ಸಾಕ್ಷಿಯಾಗಿದೆ.
ಮೆಟ್ಕಲ್ ಗುಡ್ಡವು ಉಡುಪಿ ಜಿಲ್ಲೆಯ ಹೊಸಂಗಡಿ ಗ್ರಾಮದಲ್ಲಿದೆ. ಈ ಸ್ಥಳವು ಬಿದನೂರು ಮತ್ತು ಕೆಳದಿ ಸಾಮ್ರಾಜ್ಯದ ಐತಿಹಾಸಿಕವಾಗಿ ಮಹತ್ವದ್ದಾಗಿದೆ ಮತ್ತು ಕೆಳದಿ ಸಾಮ್ರಾಜ್ಯದ ರಾಜ ಶಿವಪ್ಪ ನಾಯಕ ಈ ಪ್ರದೇಶವನ್ನು ಆಳಿದಾಗ ಪ್ರಮುಖ ಸ್ಥಳವಾಗಿತ್ತು. ವಿಶೇಷವಾಗಿ ಬೆಟ್ಟದ ತುದಿಯಲ್ಲಿ ಕೋಟೆಗಳ ಅವಶೇಷಗಳಿವೆ ಸಾಹಸ ಪ್ರಿಯರಿಗೆ ಗಮನಾರ್ಹ ಮತ್ತು ದೊಡ್ಡ ಅನ್ವೇಷಣೆಯಾಗಿದೆ.

ಈ ಸ್ಥಳವು ವರಾಹಿ ಭೂಗತ ವಿದ್ಯುತ್ ಯೋಜನೆಗೆ ಸಮೀಪದಲ್ಲಿದೆ, ಇಡೀ ಹುಲಿಕಲ್ ಘಾಟ್ (ಬಾಳೆಬರೆ) ಪ್ರದೇಶ ಮತ್ತು ಉಳಿದ ಕುಂಚಿಕಲ್ ಜಲಪಾತವು ಮೇಲಿನಿಂದ ಗೋಚರಿಸುತ್ತದೆ. ಬೆಟ್ಟದ ತುದಿಯಲ್ಲಿ ಇರುವ ಗಣೇಶ ದೇವಾಲಯದ ಮುಂಭಾಗದಲ್ಲಿರುವಂತ ಪುರಾತನ ಜಲ ವಿಸ್ಮಯ ಎನ್ನುವಂತಿದೆ. ಈ ಬಾವಿಯಲ್ಲಿ ವರ್ಷದ 365 ದಿನಗಳು ಕೂಡ ನೀರು ಲಭ್ಯವಿದ್ದು, ಇಲ್ಲಿಗೆ ಭೇಟಿ ನೀಡುವ ಎಲ್ಲರನ್ನ ಆಶ್ಚರ್ಯಚಕಿತರನ್ನಾಗಿಸುತ್ತಿದೆ. ಜಿಲ್ಲೆಯಲ್ಲಿ ನೀರಿನ ಭವಣೆ ಇದ್ದರೂ ಕೂಡ ಬಹುತೇಕ ಇಂತಹ ಪುರಾತನ ಮತ್ತು ಐತಿಹಾಸಿಕ ಸ್ಥಳಗಳಲ್ಲಿ ಇಂದಿಗೂ ನೀರಿನ ಲಭ್ಯತೆ ಇರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.
-
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications