ಉಡುಪಿ: ಖ್ಯಾತ ಗಾಯಕಿ ದಿ.ರಂಜನಿ ಹೆಬ್ಬಾರ್ ಪ್ರತಿಮೆ ಅನಾವರಣ
ಉಡುಪಿ, ಸೆಪ್ಟೆಂಬರ್ 10: ಕನ್ನಡನಾಡಿನ ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕಿ ದಿವಂಗತ ರಂಜನಿ ಹೆಬ್ಬಾರ್ ಅವರ ಪ್ರತಿಮೆಯನ್ನು ಉಡುಪಿಯಲ್ಲಿ ಅನಾವರಣಗೊಳಿಸಲಾಯಿತು.
ಅವರ ಜನ್ಮದಿನದ ಸಂದರ್ಭದಲ್ಲಿ ರಂಜನಿ ಮೆಮೋರಿಯಲ್ ಟ್ರಸ್ಟ್ ಹಮ್ಮಿಕೊಂಡಿರುವ ಸಂಗೀತೋತ್ಸವದಲ್ಲಿ ಪ್ರತಿಮೆ ಅನಾವರಣಗೊಂಡಿತು. ಇಂದ್ರಾಳಿಯ 'ಲತಾಂಗಿ' ಮನೆಯಲ್ಲಿ ಸ್ವಾಮಿ ಸೂರ್ಯಪಾದರು ಪ್ರತಿಮೆ ಅನಾವರಣಗೊಳಿಸಿದರು.
ಈ ವೇಳೆ ಚಿಂತಕ ಲಕ್ಷ್ಮೀಶ ತೋಳ್ಪಾಡಿ, ವಸಂತಲಕ್ಷ್ಮೀ ಹೆಬ್ಬಾರ್, ಸಾರಂಗ ಹೆಬ್ಬಾರ್ ಉಪಸ್ಥಿತರಿದ್ದರು. ಪ್ರತಿಮೆ ಅನಾವರಣದ ಬಳಿಕ ಸ್ವಾಮಿ ಸೂರ್ಯಪಾದರಿಂದ ಸತ್ಸಂಗ ನಡೆಯಿತು.

"ದಿ.ರಂಜನಿ ಅನೇಕರಿಗೆ ಸ್ಪೂರ್ತಿಯಾಗಿದ್ದು, ಆಕೆ ಕೇವಲ ನನ್ನ ಮಗಳಲ್ಲ, ಶುದ್ಧ ಸಂಗೀತದ ಅಭಿಮಾನಿಗಳು ಮತ್ತು ಆಕೆಯ ಕಲೆಯನ್ನು ಇಷ್ಟಪಡುವ ಪ್ರತಿಯೊಬ್ಬರ ಮಗಳು, ಈ ಪ್ರತಿಮೆ ಆಕೆಯ ಕಲಾ ಸೇವೆಯನ್ನು ನಿತ್ಯವೂ ಸ್ಮರಿಸುವುದಕ್ಕೊಂದು ಮಾಧ್ಯಮ'' ಎಂದು ಟ್ರಸ್ಟ್ ನ ಪ್ರಮುಖರಾದ ವಿ.ಅರವಿಂದ ಹೆಬ್ಬಾರ್ ಹೇಳಿದರು.
ಸೆ.1 ರಿಂದ ನಿರಂತರ 13 ದಿನಗಳ ಈ ಸಂಗೀತೋತ್ಸವದಲ್ಲಿ ದೇಶ-ವಿದೇಶಗಳ ಪ್ರಖ್ಯಾತ ಸಂಗೀತ ಕಲಾವಿದರು, ಫೇಸ್ ಬುಕ್ ಲೈವ್ ಮೂಲಕವೇ ಪ್ರತಿದಿನ ಸಂಗೀತ ಕಛೇರಿ ನೀಡುತ್ತಿದ್ದಾರೆ.

ಈಗಾಗಲೇ ತಿರುಮೆಗ್ನನಂ ಟಿಪಿಎನ್ ರಮಾನಾಥನ್ ಮತ್ತು ಪಂಡಮಂಗಲಂ ಪಿ.ಜಿ.ಯುವರಾಜ್, ಚೆನ್ನೈನ ಪ್ರಾರ್ಥನಾ ಸಾಯಿ ನರಸಿಂಹನ್, ಬೆಂಗಳೂರಿನ ಸಿದ್ದಾರ್ಥ ಬೆಳ್ಮಣ್ಣು, ಯು.ಎಸ್. ಎ, ಹ್ಯೂಸ್ಟನ್ ನಿಂದ ಕೃತಿ ಭಟ್, ರಮಣಾ ಬಾಲಚಂದ್ರನ್, ಚೆನ್ನೈನ ಸತ್ಯನಾರಾಯಣ, ಬೆಂಗಳೂರಿನ ಸ್ಪೂರ್ತಿ ರಾವ್, ಐಶ್ವರ್ಯ ವಿದ್ಯಾ ರಘುನಾಥ್, ಚೆನ್ನೈನ ಜೆ.ಬಿ.ಶೃತಿ ಸಾಗರ್, ಮೈಸೂರಿನ ಶ್ರೀಮತಿದೇವಿ, ಅನುಪಮಾ ಭಾಗವತ್, ಕು. ಸಮನ್ವಿ ಅವರು ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನೀಡಿದ್ದಾರೆ.
Recommended Video
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications