ಉಡುಪಿ: ಖ್ಯಾತ ಗಾಯಕಿ ದಿ.ರಂಜನಿ ಹೆಬ್ಬಾರ್ ಪ್ರತಿಮೆ ಅನಾವರಣ
ಉಡುಪಿ, ಸೆಪ್ಟೆಂಬರ್ 10: ಕನ್ನಡನಾಡಿನ ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕಿ ದಿವಂಗತ ರಂಜನಿ ಹೆಬ್ಬಾರ್ ಅವರ ಪ್ರತಿಮೆಯನ್ನು ಉಡುಪಿಯಲ್ಲಿ ಅನಾವರಣಗೊಳಿಸಲಾಯಿತು.
ಅವರ ಜನ್ಮದಿನದ ಸಂದರ್ಭದಲ್ಲಿ ರಂಜನಿ ಮೆಮೋರಿಯಲ್ ಟ್ರಸ್ಟ್ ಹಮ್ಮಿಕೊಂಡಿರುವ ಸಂಗೀತೋತ್ಸವದಲ್ಲಿ ಪ್ರತಿಮೆ ಅನಾವರಣಗೊಂಡಿತು. ಇಂದ್ರಾಳಿಯ 'ಲತಾಂಗಿ' ಮನೆಯಲ್ಲಿ ಸ್ವಾಮಿ ಸೂರ್ಯಪಾದರು ಪ್ರತಿಮೆ ಅನಾವರಣಗೊಳಿಸಿದರು.
ಈ ವೇಳೆ ಚಿಂತಕ ಲಕ್ಷ್ಮೀಶ ತೋಳ್ಪಾಡಿ, ವಸಂತಲಕ್ಷ್ಮೀ ಹೆಬ್ಬಾರ್, ಸಾರಂಗ ಹೆಬ್ಬಾರ್ ಉಪಸ್ಥಿತರಿದ್ದರು. ಪ್ರತಿಮೆ ಅನಾವರಣದ ಬಳಿಕ ಸ್ವಾಮಿ ಸೂರ್ಯಪಾದರಿಂದ ಸತ್ಸಂಗ ನಡೆಯಿತು.

"ದಿ.ರಂಜನಿ ಅನೇಕರಿಗೆ ಸ್ಪೂರ್ತಿಯಾಗಿದ್ದು, ಆಕೆ ಕೇವಲ ನನ್ನ ಮಗಳಲ್ಲ, ಶುದ್ಧ ಸಂಗೀತದ ಅಭಿಮಾನಿಗಳು ಮತ್ತು ಆಕೆಯ ಕಲೆಯನ್ನು ಇಷ್ಟಪಡುವ ಪ್ರತಿಯೊಬ್ಬರ ಮಗಳು, ಈ ಪ್ರತಿಮೆ ಆಕೆಯ ಕಲಾ ಸೇವೆಯನ್ನು ನಿತ್ಯವೂ ಸ್ಮರಿಸುವುದಕ್ಕೊಂದು ಮಾಧ್ಯಮ'' ಎಂದು ಟ್ರಸ್ಟ್ ನ ಪ್ರಮುಖರಾದ ವಿ.ಅರವಿಂದ ಹೆಬ್ಬಾರ್ ಹೇಳಿದರು.
ಸೆ.1 ರಿಂದ ನಿರಂತರ 13 ದಿನಗಳ ಈ ಸಂಗೀತೋತ್ಸವದಲ್ಲಿ ದೇಶ-ವಿದೇಶಗಳ ಪ್ರಖ್ಯಾತ ಸಂಗೀತ ಕಲಾವಿದರು, ಫೇಸ್ ಬುಕ್ ಲೈವ್ ಮೂಲಕವೇ ಪ್ರತಿದಿನ ಸಂಗೀತ ಕಛೇರಿ ನೀಡುತ್ತಿದ್ದಾರೆ.

ಈಗಾಗಲೇ ತಿರುಮೆಗ್ನನಂ ಟಿಪಿಎನ್ ರಮಾನಾಥನ್ ಮತ್ತು ಪಂಡಮಂಗಲಂ ಪಿ.ಜಿ.ಯುವರಾಜ್, ಚೆನ್ನೈನ ಪ್ರಾರ್ಥನಾ ಸಾಯಿ ನರಸಿಂಹನ್, ಬೆಂಗಳೂರಿನ ಸಿದ್ದಾರ್ಥ ಬೆಳ್ಮಣ್ಣು, ಯು.ಎಸ್. ಎ, ಹ್ಯೂಸ್ಟನ್ ನಿಂದ ಕೃತಿ ಭಟ್, ರಮಣಾ ಬಾಲಚಂದ್ರನ್, ಚೆನ್ನೈನ ಸತ್ಯನಾರಾಯಣ, ಬೆಂಗಳೂರಿನ ಸ್ಪೂರ್ತಿ ರಾವ್, ಐಶ್ವರ್ಯ ವಿದ್ಯಾ ರಘುನಾಥ್, ಚೆನ್ನೈನ ಜೆ.ಬಿ.ಶೃತಿ ಸಾಗರ್, ಮೈಸೂರಿನ ಶ್ರೀಮತಿದೇವಿ, ಅನುಪಮಾ ಭಾಗವತ್, ಕು. ಸಮನ್ವಿ ಅವರು ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನೀಡಿದ್ದಾರೆ.
Recommended Video
-
Asha Bhosle: ಆಶಾ ಭೋಸ್ಲೆಗೆ 16ನೇ ವರ್ಷದಲ್ಲೇ ಮದುವೆ, 2ನೇ ಮದುವೆಯಲ್ಲೂ ಸಂಕಷ್ಟ - ಕಾರಣವೇನು -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Asha Bhosle: ಸಂಗೀತ ಜಗತ್ತಿಗೆ ಆಶಾ ಭೋಸ್ಲೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications