ಪೇಜಾವರ ಶ್ರೀಗಳ ಪುಟ್ಟ ಗಾಯಕ್ಕೆ ಸಿಕ್ಕಿತು ಬೆಟ್ಟದಷ್ಟು ಪ್ರಚಾರ
ಉಡುಪಿ, ಜೂನ್ 28: ಉಡುಪಿ ಕೃಷ್ಣ ಮಠದಲ್ಲಿ ಪರ್ಯಾಯಕ್ಕೆ ಕೂತಿರುವ ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥರಿಗೆ ಬುಧವಾರ ಬೆಳಗ್ಗೆ ಸಣ್ಣ ತರಚು ಗಾಯದಂಥದ್ದು ಆಗಿದ್ದು, ಈ ಸುದ್ದಿ ದೊಡ್ಡ ಸ್ವರೂಪ ಪಡೆದು ಜಾರಿ ಬಿದ್ದಿದ್ದಾರೆ, ಅದರಿಂದ ಶ್ರೀಗಳಿಗೆ ಗಾಯವಾಗಿದೆ ಎಂದು ಸುದ್ದಿ ಹರಿದಾಡುತ್ತಿದೆ.
ಆದರೆ, ಈ ಬಗ್ಗೆ ಒನ್ ಇಂಡಿಯಾ ಕನ್ನಡವು ಮಠದಲ್ಲಿರುವವರನ್ನೇ ವಿಚಾರಿಸಿದ್ದು, ಮಾಹಿತಿ ದೊರಕಿದೆ. ಬುಧವಾರ ಬೆಳಗ್ಗೆ ಗರ್ಭಗುಡಿಯಲ್ಲಿ ಪೂಜೆ ಮುಗಿಸಿದ ನಂತರ ಎಣ್ಣೆ ಪಸೆ ಇದ್ದದ್ದರಿಂದ ಅದರ ಮೇಲೆ ಕಾಲಿರಿಸಿ, ಗೋಡೆಗೆ ಭುಜ ತರಚಿದ್ದರಿಂದ ಆಗಿರುವ ಸಣ್ಣ ಪ್ರಮಾಣದ ಗಾಯ ಅದು.

ಗರ್ಭಗುಡಿಯಲ್ಲಿ ದೇವರಿಗೆ ಹಚ್ಚಿದ ದೀಪವನ್ನು ಹೊರತುಪಡಿಸಿ ಇನ್ಯಾವುದೇ ಬೆಳಕು ಇರುವುದಿಲ್ಲ. ಆ ಕತ್ತಲಲ್ಲಿ ಎಣ್ಣೆ ಬಿದ್ದಿದ್ದು ಗಮನಕ್ಕೆ ಬರದೆ ಸ್ವಾಮೀಜಿ ಅವರು ಮೇಲಕ್ಕೆ ಏಳುವ ವೇಳೆ ಸ್ವಲ್ಪ ಮಟ್ಟಿಗೆ ಆಯ ತಪ್ಪಿ ಭುಜವು ಗೋಡೆಗೆ ತಾಕಿದೆ. ಆ ಕಾರಣಕ್ಕೆ ಸ್ವಲ್ಪ ಮಟ್ಟಿಗೆ ಗಾಯವಾಗಿದೆ ವಿನಾ ಅದು ತೀರಾ ಗಂಭೀರ ಸ್ವರೂಪದ್ದಲ್ಲ. ಅದಕ್ಕೆ ಹೆಚ್ಚಿನ ಪ್ರಾಮುಖ್ಯ ಕೊಡುವ ಅಗತ್ಯವೂ ಇಲ್ಲ ಎಂದು ಮಠದ ಮೂಲಗಳು ತಿಳಿಸಿವೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications