ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ: ಬೊಬ್ಬರ್ಯನಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಮುಕ್ತಿ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜೂನ್ 29: ಹಲವು ದಿನಗಳಿಂದ ಉಡುಪಿ ಜಿಲ್ಲೆ ಕುಂದಾಪುರ ಬೊಬ್ಬರ್ಯನಕಟ್ಟೆ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶ/ ನಿರ್ಗಮನಕ್ಕೆ ಅವಕಾಶ ನೀಡಬೇಕು ಎಂಬುದು ಸ್ಥಳೀಯರ ಅಪೇಕ್ಷೆಯಾಗಿತ್ತು.

ಈ ಕುರಿತು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆಯವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಚರ್ಚಿಸಿ ಮಂಗಳವಾರ (ಜೂ.29) ಸ್ಥಳ ಪರಿಶೀಲನೆಗೆ ಅಧಿಕಾರಿಗಳನ್ನು ಕಳುಹಿಸಿದ್ದು, ಸ್ಥಳೀಯರ ಅಪೇಕ್ಷೆಯಂತೆ ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಯಿತು.

ಮಸೀದಿ ಜಾಗ ವಾಪಸ್ ಪಡೆದ ಸರ್ಕಾರ: ಮುಸ್ಲಿಂ ಸಂಘಟನೆಗಳಿಂದ ತೀವ್ರ ವಿರೋಧಮಸೀದಿ ಜಾಗ ವಾಪಸ್ ಪಡೆದ ಸರ್ಕಾರ: ಮುಸ್ಲಿಂ ಸಂಘಟನೆಗಳಿಂದ ತೀವ್ರ ವಿರೋಧ

1. ಕುಂದಾಪುರ ಡಿವೈಎಸ್ಪಿ ಕಚೇರಿಯ ಸಮೀಪದಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಪ್ರವೇಶ ನೀಡಲು ಅವಕಾಶ ಮಾಡಿಕೊಡುವುದು.

Solved The National Highway Problems Near Bobbaryana Katte

2. ಕುಂದಾಪುರ ಶಾಸ್ತ್ರಿ ಸರ್ಕಲ್‌ನಿಂದ ಉಡುಪಿಗೆ ಸಾಗುವ ದಾರಿಯಲ್ಲಿ, ಸರ್ವೀಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ (ಡಿವೈಎಸ್ಪಿ ಕಚೇರಿಯ ವಿರುದ್ಧ ಭಾಗದಲ್ಲಿ) ಪ್ರವೇಶ ನೀಡಲು ಅವಕಾಶ ಮಾಡಿ ಕೊಡುವುದು.

3. ಬಸ್ರೂರು ಮೂರ್ಕೈ ಹತ್ತಿರದ ಅಂಡರ್‌ಪಾಸ್ ಬಳಿ ಕೂಡಲೇ 2 ಕಡೆ ಹಂಪ್ ಅಳವಡಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

Solved The National Highway Problems Near Bobbaryana Katte

ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಸ್ಥಳ ಪರಿಶೀಲನೆಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

English summary
Solved the National Highway problems near Bobbaryana Katte in Kundapura taluk of Udupi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X