ಉಡುಪಿ: ಮೂರು ವರ್ಷದ ಬಳಿಕ ದುಬೈನಿಂದ ಬಂದು ಅಮ್ಮನಿಗೆ ಸಪ್ರೈಸ್ ನೀಡಿದ ಮಗ
ಉಡುಪಿ, ಸೆಪ್ಟೆಂಬರ್ 21: ದುಡಿಮೆಗಾಗಿ ತುತ್ತಿನ ಜೋಳಿಗೆ ತುಂಬಿಸಿಕೊಳ್ಳಲು ಊರು ಬಿಟ್ಟು ಊರಿಗೆ ತೆರಳುವುದು ಅನಿವಾರ್ಯ. ತಂದೆ-ತಾಯಿಯನ್ನು ಬಿಟ್ಟು ಊರು, ಜಿಲ್ಲೆ, ರಾಜ್ಯ ಕೊನೆಗೆ ದೇಶವೇ ಬಿಟ್ಟು ಹೋಗುವ ಪರಿಸ್ಥತಿ ಕೂಡ ಬರುತ್ತದೆ. ಹೀಗೆ ಕೆಲಸಕ್ಕಾಗಿ ಕೆಲ ವರ್ಷಗಳಿಂದ ವಿದೇಶದಲ್ಲಿದ್ದ ಮಗ ಊರಿಗೆ ಬರುವ ಸುಳಿವೂ ನೀಡದೇ ಬಂದು ಹೆತ್ತ ತಾಯಿ ಎದುರು ಬಂದ ಸಂತೋಷದ ಘಳಿಗೆಗೆ ಸಾಕ್ಷಿಯಾದ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಕುಂದಾಪುರದ ರೋಹಿತ್ ಎನ್ನುವವರು ಮೂರು ವರ್ಷಗಳ ಬಳಿಕ ದುಬೈನಿಂದ ಬಂದು ಅಮ್ಮನಿಗೆ ಸಪ್ರೈಸ್ ನೀಡಿದ್ದಾರೆ. ರೋಹಿತ್ ಮನೆಯವರಿಗೆ, ಮಿತ್ರರಿಗೆ ಸರ್ಪ್ರೈಸ್ ನೀಡಲು ಯಾವುದೇ ಮಾಹಿತಿ ನೀಡದೆ ಊರಿಗೆ ಮರಳಿದ್ದಾರೆ. ಮನೆಗೆ ಮರಳಿದಾಗ ತಾಯಿ ಮನೆಯಲ್ಲಿ ಇರದಿರುವುದನ್ನು ಕಂಡು ಬೇಸರಗೊಂಡಿದ್ದ ರೋಹಿತ್ ನೇರವಾಗಿ ಗಂಗೊಳ್ಳಿ ಬಂದರಿನಲ್ಲಿ ತಾಯಿ ಮೀನು ಮಾರುವ ಸ್ಥಳಕ್ಕೆ ತೆರಳಿದ್ದಾರೆ.

ರೋಹಿತ್ ತಲೆಗೆ ಟೋಪಿ, ಮುಖಕ್ಕೆ ಕರವಸ್ತ್ರ ಕಟ್ಟಿ ಕಣ್ಣಿಗೆ ಕನ್ನಡಕ ಹಾಕಿ ಮೀನು ಖರೀದಿಯ ನಾಟಕವಾಡಿದ್ದಾರೆ. ಗ್ರಾಹಕನಂತ ಮಾತನಾಡುತ್ತಲೇ ಮುಖದಿಂದ ಕರವಸ್ತ್ರ ತೆಗೆದು ಅಮ್ಮನಿಗೆ ಅಚ್ಚರಿ ಮೂಡಿಸಿದ್ದಾರೆ. ಮಗ ದುಬೈನಲ್ಲಿದ್ದ ಎಂದುಕೊಂಡಿದ್ದ ತಾಯಿಗೆ ಕಣ್ಮುಂದೆ ಪ್ರತ್ಯಕ್ಷವಾಗಿರುವುದನ್ನು ಕಂಡು ತಾಯಿ ಕಣ್ಣೀರು ಹಾಕಿದ್ದಾರೆ. ಮೂರು ವರ್ಷಗಳ ಬಳಿಕ ತಾಯಿಯನ್ನು ನೋಡಿದ ಮಗನೂ ಅರೆಕ್ಷಣ ಭಾವುಕನಾಗಿದ್ದಾನೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಾಯಿ-ಮಗನ ಭಾವುಕರಾಗಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications