ಗತಿಸಿದ ಅಮ್ಮನ ಪುತ್ಥಳಿ ನಿರ್ಮಿಸಿ ನಿತ್ಯ ಪೂಜೆ ಸಲ್ಲಿಸುತ್ತಿರುವ ಈ ಕುಲಪುತ್ರ!
ಉಡುಪಿ, ಡಿಸೆಂಬರ್ 22: ಹೆತ್ತವರ ಋಣ ತೀರಿಸಲು ಸಾಧ್ಯವೇ ಇಲ್ಲ. ಅಂಥದ್ದರಲ್ಲಿ ಹೆತ್ತವರನ್ನು ವೃದ್ಧಾಶ್ರಮಗಳಿಗೆ ಸೇರಿಸುತ್ತಿರುವ ಮಕ್ಕಳ ಕಥೆಗಳನ್ನು ನಾವು ಆಗಾಗ ಕೇಳುತ್ತಿರುತ್ತೇವೆ. ಆದರೆ ಉಡುಪಿ ಜಿಲ್ಲೆಯ ಒಬ್ಬ ನಟ-ನಿರ್ದೇಶಕ, ಕಲಾವಿದನ ಮಾತೃಪ್ರೇಮ ನಿಜಕ್ಕೂ ಶ್ಲಾಘನೀಯ.
ಈ ನಟ-ನಿರ್ದೇಶಕ ತೀರಿಹೋದ ತಮ್ಮ ಅಮ್ಮನನ್ನು ಹೋಲುವ ಮೂರ್ತಿಯನ್ನು ನಿರ್ಮಿಸಿ ಪ್ರತಿನಿತ್ಯ ಅಮ್ಮನ ಸ್ಮರಣೆ ಮಾಡುತ್ತಾರೆ ಎಂದರೆ ನೀವು ನಂಬಲೇಬೇಕಾಗುತ್ತದೆ. ಅಮ್ಮನ ಸವಿ ನೆನಪಿಗಾಗಿ ಆಕೆಯ ಮೂರ್ತಿ ನಿರ್ಮಾಣ ಮಾಡಿ, ಗುಡಿ ಕಟ್ಟಿದ್ದಾರೆ. ದಿನ ನಿತ್ಯ ಪೂಜೆ ಮಾಡಿ ಹೆತ್ತಾಕೆಯ ಆಶೀರ್ವಾದ ಪಡೆಯುತ್ತಿದ್ದಾರೆ.
ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ರಾಜಶೇಖರ ಕೋಟ್ಯಾನ್ ತಮ್ಮ ತಾಯಿ ದಿವಂಗತ ಕಲ್ಯಾಣಿ ಪೂಜಾರ್ತಿ ಅವರ ನೆನಪಿಗಾಗಿ ಹುಟ್ಟೂರು ಉಡುಪಿಯ ಸಾಂತೂರು ಗರಡಿ ಮನೆಯಲ್ಲಿ, ಸುಂದರವಾದ ಗುಡಿ ಕಟ್ಟಿ, ಮೂರ್ತಿ ನಿರ್ಮಿಸಿ ಮಂಗಳಾರತಿ ಬೆಳಗುತ್ತಿದ್ದಾರೆ.

ಅಮ್ಮನ ಸವಿನೆನಪಿಗಾಗಿ ಇವರು ತಮ್ಮ ಮನೆಯ ಪಕ್ಕ ಏಕಶಿಲಾ ಮೂರ್ತಿಯಲ್ಲಿ ಅಮ್ಮನ ಮೂರ್ತಿ ಕೆತ್ತನೆ ಮಾಡಿಸಿದ್ದಾರೆ. ಇವರು ಲಕ್ಷಾಂತರ ರೂ. ಖರ್ಚು ಮಾಡಿ ಈ ಮೂರ್ತಿಯನ್ನು ರಾಜಸ್ಥಾನದಲ್ಲಿ ನಿರ್ಮಿಸಿ ಊರಿಗೆ ತರಿಸಿಕೊಂಡಿದ್ದಾರೆ.
ಈ ಮೂರ್ತಿ ಅಪ್ಪಟ ರಾಜಶೇಖರ ಕೋಟ್ಯಾನ್ ಅವರ ಅಮ್ಮನನ್ನೇ ಹೋಲುತ್ತಿದ್ದು, ಪ್ರತಿನಿತ್ಯ ಇದನ್ನು ನೋಡಿದಾಗ ಸಾಕ್ಷಾತ್ ಅಮ್ಮನನ್ನೇ ನೋಡದಷ್ಟು ಖುಷಿ ಆಗುತ್ತೆ ಎನ್ನುತ್ತಾರೆ ಮಗ ರಾಜಶೇಖರ್.

ಚಿತ್ರನಟ, ಚಾಲೆಂಜಿಗ್ ಸ್ಟಾರ್ ದರ್ಶನ್ ಗೆಳೆಯರಾಗಿರುವ ರಾಜಶೇಖರ್ ತಮ್ಮ ಪ್ರೀತಿಯ ತಾಯಿಯನ್ನು ಇರುವಾಗಲೂ ಚೆನ್ನಾಗಿ ನೋಡಿಕೊಂಡು, ಗತಿಸಿದ ಮೇಲೂ ತಾಯಿ ಕಲ್ಯಾಣಿ ನೆನಪು ನೆನಪಲ್ಲಿ ಚಿರವಾಗಿ ಇರುವಂತೆ ಮಾಡಿ ಊರವರ ಗಮನ ಸೆಳೆದಿದ್ದಾರೆ ಮಾತ್ರವಲ್ಲ, ಹೆತ್ತವರ ನೋಡಿಕೊಳ್ಳದ ಮಕ್ಕಳಿಗೆ ಮಾದರಿಯಾಗಿ ಬದುಕುತ್ತಿದ್ದಾರೆ.
ನಿಜಕ್ಕೂ ಇವರ ಮಾತೃಪ್ರೇಮ ಮೆಚ್ಚುವಂತಹದ್ದಾಗಿದ್ದು, ಇಂತಹ ಮಕ್ಕಳಿದ್ದರೆ ವೃದ್ಧಾಶ್ರಮಗಳ ಅವಶ್ಯಕತೆಯೇ ಇರುವುದಿಲ್ಲ ಅಲ್ಲವೇ? ಸತ್ತ ನಂತರದ ಮಾತು ಬಿಡಿ, ಬದುಕ್ಕಿದ್ದಾಗಲೂ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳದ ಮಕ್ಕಳಿಗೆ ಇದೊಂದು ಪಾಠವೂ ಹೌದು, ಪ್ರೇರಣೆಯೂ ಹೌದು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications