ವರಮಹಾಲಕ್ಷ್ಮೀ ವ್ರತ: ಉಡುಪಿಯಲ್ಲಿ ಮುಗಿಲು ಮುಟ್ಟಿದ ಭಕ್ತಿ
ಉಡುಪಿ, ಆಗಸ್ಟ್.24: ಇಂದು ಶುಕ್ರವಾರ ವರಮಹಾಲಕ್ಷ್ಮೀ ಪ್ರಯುಕ್ತ ಇಲ್ಲಿನ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಮುಖ್ಯವಾಗಿ ಗೌಡ ಸಾರಸ್ವತ ಸಮುದಾಯದ ಮುತ್ತೈದೆಯರು ಸಾಮೂಹಿಕವಾಗಿ ಪೂಜೆ ,ಮಂತ್ರ ಪಠಣ ಮತ್ತು ಪ್ರಾರ್ಥನೆಯಲ್ಲಿ ಪಾಲ್ಗೊಂಡರು.
ಶ್ರಾವಣದ ಎರಡನೇ ಶುಕ್ರವಾರ ಬರುವ ಈ ಹಬ್ಬದ ದಿವಸ ಭಕ್ತರು ಕೇಳಿದ ವರವನ್ನು ಮಹಾಲಕ್ಷ್ಮಿ ನೀಡುತ್ತಾಳೆ ಎಂಬುದು ಭಕ್ತರಲ್ಲಿರುವ ನಂಬಿಕೆ. ಬೆಳಗ್ಗೆ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಭಕ್ತಿ ಮುಗಿಲು ಮುಟ್ಟಿತ್ತು. ಸಾವಿರಾರು ಸುಮಂಗಲಿಯರು ಸೇರಿ ದೇವಸ್ಥಾನದಲ್ಲಿ ಸಾಮೂಹಿಕ ಲಕ್ಷ್ಮೀ ಪೂಜೆ ಮತ್ತು ಚೂಡಿ ಪೂಜೆ ನಡೆಸಿ ಕೃತಾರ್ಥರಾದರು.
ಈ ವೇಳೆ ದೇವಸ್ಥಾನದಲ್ಲಿ ವಿಶೇಷ ಅಲಂಕಾರವನ್ನೂ ಮಾಡಲಾಗಿತ್ತು. ಬೆಳಗ್ಗೆ ಗಂಗಾಪೂಜೆ ಬಳಿಕ ದೇವರನ್ನು ಪ್ರತಿಷ್ಠಾಪಿಸಲಾಯಿತು. ತದನಂತರ ದೇವರಿಗೆ ಅಲಂಕಾರ ನಡೆದು ಸಾಮೂಹಿಕ ಕುಂಕುಮಾರ್ಚನೆ ಸಂಪನ್ನಗೊಂಡಿತು.

ಈ ವೇಳೆ ಮಹಿಳೆಯರ ಮಂತ್ರ ಪಠಣ ಮತ್ತು ಸ್ತೋತ್ರದ ಹಾಡು ಅನುರಣಗೊಳ್ಳುತ್ತಲೇ ಇತ್ತು. ನೂರಾರು ಸಂಖ್ಯೆಯಲ್ಲಿದ್ದ ಮುತ್ತೈದೆಯರು ತಮಗೆ ದೊರೆತ ಮುತ್ತೈದೆ ಭಾಗ್ಯವನ್ನು ಶಾಶ್ವತವಾಗಿಡು ಎಂದು ಕೇಳಿಕೊಂಡರು.

ವರ್ಷಂಪ್ರತಿ ಈ ದಿವಸ 12 ಗಂಟಿನ ದಾರವನ್ನು ಧಾರಣೆ ಮಾಡುವ ಸಂಪ್ರದಾಯ ಜಿಎಸ್ಬಿ ಸಮುದಾಯದಲ್ಲಿದೆ. ಅಂತೆಯೇ ಹಿಂದಿನ ವರ್ಷದ ದಾರವನ್ನು ವಿಸರ್ಜಿಸಿ ಮುತ್ತೈದೆಯರು ಹೊಸ ದಾರ ಧಾರಣೆ ಮಾಡುವುದು ಈ ದಿನದ ವಿಶೇಷ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications