ದಟ್ಟ ಕಾನನದ ನಡುವೆ ಈ ಸ್ಥಳದಲ್ಲಿ ಅಮಾವಾಸ್ಯೆಯ ತೀರ್ಥ ಸ್ನಾನ: ಇಲ್ಲಿದೆ ಹೆಬ್ರಿಯ ವಿಶೇಷ ಕ್ಷೇತ್ರದ ಪರಿಚಯ
ಮಂಗಳೂರು, ಜನವರಿ 12: ಹಿಂದೂ ಕ್ಯಾಲೆಂಡರಿನ ಪ್ರಕಾರ ಮಾರ್ಗಶಿರ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯನ್ನು ಎಳ್ಳು ಅಮಾವಾಸ್ಯೆಯೆಂದು ಆಚರಿಸುತ್ತಾರೆ. ಈ ದಿನ ಪುಣ್ಯ ಕ್ಷೇತ್ರದ ಪುಷ್ಕರಣಿ, ನದಿ ಸಮುದ್ರದಲ್ಲಿ ಸ್ನಾನ ಮಾಡಿದರೆ ಪುಣ್ಯಪ್ರಾಪ್ತಿಯಾಗುತ್ತದೆ ಎನ್ನುವ ಪ್ರತೀತಿ ಇದೆ. ಹೀಗಾಗಿ ಜಿಲ್ಲೆಯ ಪ್ರಮುಖ ಪ್ರವಾಸಿತಾಣದಲ್ಲಿ, ಕಾಡಿನ ಮಧ್ಯೆ ಹಬ್ಬ ವಾತಾವರಣ ಸೃಷ್ಟಿಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ದೈವ ದೇವರಗಳ ಗುಡಿ ಮಂದಿರಗಳಿಗೇನು ಕೊರತೆಯಿಲ್ಲ. ಇಲ್ಲಿ ಆಚರಣೆಗಳು ಕೂಡ ರಾಜ್ಯ ಇತರೆಡೆಗೆ ಹೋಲಿಸಿದರೆ ಕೊಂಚ ವಿಭಿನ್ನ ಮತ್ತು ವಿಶಿಷ್ಟ ಎಂದರೆ ತಪ್ಪಾಗಲಾರದು. ಉಡುಪಿ ಜಿಲ್ಲೆಯ ಹೆಬ್ರಿ ವ್ಯಾಪ್ತಿಯಲ್ಲಿ ಸಾಕಷ್ಟು ಐತಿಹ್ಯಗಳಿರುವ ಸ್ಥಳಗಳಿಗೆ. ಅದರಲ್ಲೂ ಬಹುಮುಖ್ಯವಾಗಿ ಗುರುತಿಸಿಕೊಂಡಿರುವುದು ಜೋಮ್ಲು ತೀರ್ಥ.

ಸನಾತನ ಭಾರತೀಯರ ಪರ್ವಕಾಲಗಳಲ್ಲಿ ಉತ್ತರಾಯಣ ಪರ್ವ ಕಾಲ ಅತ್ಯಂತ ಪುಣ್ಯ ಕಾಲವಾಗಿದ್ದು, ಮಕರ ಸಂಕ್ರಮಣದಿಂದ ಆರಂಭಗೊಂಡು, ಕರ್ಕಾಟಕ ಸಂಕ್ರಮಣದವರೆಗಿನ ಕಾಲವನ್ನು ಉತ್ತರಾಯಣ, ಕರ್ಕಾಟಕ ಸಂಕ್ರಮಣ ದಿಂದ ಮಕರ ಸಂಕ್ರಮಣದವರೆಗಿನ ಕಾಲವನ್ನು ದಕ್ಷಿಣಾಯಣ ಕಾಲ ಎನ್ನುತ್ತಾರೆ.
ಮುಂಬರುವ ಮಕರ ಸಂಕ್ರಾಂತಿಯಿಂದ ದಕ್ಷಿಣಾಯಣ ಕಾಲ ಮುಗಿದು, ಉತ್ತರಾಯಣ ಕಾಲ ಆರಂಭವಾಗುವುದರಿಂದ ಎಳ್ಳಮಾವಾಸ್ಯೆ ದಿನ ಪುಣ್ಯ ಸ್ಥಳಗಳಲ್ಲಿ ತೀರ್ಥಸ್ನಾನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ. ಹಾಗಾಗಿ ಎಳ್ಳು ಅಮವಾಸೆಯ ದಿನದಂದು ಜೋಮ್ಲು ತೀರ್ಥದಲ್ಲಿ ಹಬ್ಬದ ವಾತವರಣ ಸೃಷ್ಟಿಯಾಗುತ್ತದೆ.

ಹೆಬ್ರಿ ಚಾರ ಸಮೀಪದಲ್ಲಿರುವ ಈ ಜೋಮ್ಲು ತೀರ್ಥ ನೈಸರ್ಗಿಕವಾಗಿ ಕಲ್ಲು ಬಂಡೆಗಳ ನಡುವೆ ಹರಿಯುವ ಸೀತಾನದಿಯಿಂದ ಸೃಷ್ಟಿಯಾದ ತಾಣ. ಹಿಂದೆ ಋಷಿ ಮುನಿಗಳು ಇದೇ ಸ್ಥಳದಲ್ಲಿ ಧ್ಯಾನ ಮಾಡಿದ್ದಾರೆ ಎನ್ನುವ ಐತಿಹ್ಯ ಹೊಂದಿರುವ ಸ್ಥಳ. ದಟ್ಟ ಕಾಡಿನ ಮಧ್ಯೆ ಇರುವ ಈ ಜೋಮ್ಲು ತೀರ್ಥಕ್ಕೆ ಪ್ರತಿ ವರ್ಷ ಎಳ್ಳು ಅಮವಾಸೆಯಂದು ಸಾವಿರಾರು ಭಕ್ತರು ಬಂದು ತೀರ್ಥ ಸ್ನಾನ ಮಾಡಿ ತೆರಳುತ್ತಾರೆ.
ಜೋಮ್ಲು ತೀರ್ಥದ ತಟದಲ್ಲಿ ಜೋಮ್ಲು ಬೊಬ್ಬಯ್ಯ ದೈವವಿದ್ದು, ತೀರ್ಥ ಸ್ನಾನ ಮಾಡಿ ಬಂದ ಭಕ್ತರು ಇಲ್ಲಿ ಹಣ್ಣು ಕಾಯಿ ಅರ್ಪಿಸಿ ತೆರಳುವುದು ವಾಡಿಕೆ. ಕೊರಕಲು ಮಧ್ಯೆ ಹರಿಯುವ ನದಿಯ ನೀರು ಕೆಳಕ್ಕೆ ಜಿಗಿಯುವ ನೀರಿನಲ್ಲಿ ತೀರ್ಥ ಸ್ನಾನ ಮಾಡಲು ದೂರದೂರದಿಂದಲೂ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಪ್ರತಿ ವರ್ಷ ಇಲ್ಲಿ ಎಳ್ಳು ಅಮವಾಸೆ ಬಂತು ಎಂದರೆ ಸಾಕು ಕಾಡಿನ ಮಧ್ಯೆ ಹಬ್ಬ ವಾತಾವರಣವೇ ಸೃಷ್ಠಿಯಾಗುತ್ತದೆ.
ಜೋಮ್ಲು ತೀರ್ಥ ಕೇವಲ ತೀರ್ಥ ಕ್ಷೇತ್ರವಾಗಿ ಗುರುತಿಸಿಕೊಳ್ಳದೆ ಪ್ರವಾಸಿ ತಾಣವಾಗಿಯು ಗುರುತಿಸಿಕೊಂಡಿದೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಇಲ್ಲಿ ಬರುವ ಪ್ರವಾಸಿಗರು ನೆಲ್ಫಿ ಹುಚ್ಚಿನಿಂದಾಗಿ ಸಾವು ಸಂಭವಿಸುತ್ತಿರುವ ಹಿನ್ನಲೆಯಲ್ಲಿ ಸದ್ಯ ಇಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಕೆಲವು ವರ್ಷಗಳಿಂದ ಕೇವಲ ಎಳ್ಳು ಅಮವಾಸೆ ಹಬ್ಬಕ್ಕಾಗಿ ಮಾತ್ರ ಇಲ್ಲಿ ತೀರ್ಥ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.
ಒಟ್ಟಾರೆಯಾಗಿ ಕಾಡಿನ ಮಧ್ಯೆ ನಡೆಯುವ ಈ ಜಾತ್ರೆ ನೋಡಲು ಬಲು ಸೊಗಸು. ಹಬ್ಬದ ಹಿನ್ನಲೆಯಲ್ಲಿ ಇಲ್ಲಿ ಅನ್ನದಾನ ಸೇವೆಯ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ಕೂಡ ನಡೆಯುತ್ತಿರುವ ಇಲ್ಲಿನ ಭಕ್ತರಿಗೆ ಸಂತಸ ನೀಡುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications