ಉಡುಪಿ ಶ್ರೀಕೃಷ್ಣ ದೇವಾಲಯ ನವೀಕರಣಕ್ಕೆ ಜಿಲ್ಲಾಡಳಿತ ತಡೆ
ಉಡುಪಿ, ಫೆಬ್ರವರಿ 1: ಅನುಮತಿ ಇಲ್ಲದೆ ಉಡುಪಿ ಶ್ರೀಕೃಷ್ಣ ದೇವಾಲಯ ನವೀಕರಣಕ್ಕೆ ಮುಂದಾಗಿರುವ ಶ್ರೀಕೃಷ್ಣ ಮಠದ ವಿರುದ್ಧ ಜಿಲ್ಲಾಡಳಿತ ಗರಂ ಆಗಿದ್ದು, ದೇವಸ್ಥಾನದ ವ್ಯವಸ್ಥಾಪಕರಿಗೆ ನೊಟೀಸ್ ಜಾರಿ ಮಾಡಿದೆ.
ಪುರಾತನವಾದ ಉಡುಪಿ ಶ್ರೀಕೃಷ್ಣ ದೇವಾಲಯದ ಒಳಗಿನ ಪ್ರಾಂಗಣ ಸೇರಿದಂತೆ ಕೆಲವೊಂದು ಭಾಗಗಳನ್ನು ನವೀಕರಿಸಲು ಭಕ್ತರ ಒತ್ತಾಯದ ಮೇರೆಗೆ ಶ್ರೀ ಮಠವು ಮುಂದಾಗಿತ್ತು. ಇದರ ಅನುಮತಿಯನ್ನು ಜಿಲ್ಲಾಡಳಿತದಿಂದ ಪಡೆಲಿಲ್ಲ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ.[ಉಡುಪಿ ಶ್ರೀಕೃಷ್ಣ ಮಠಕ್ಕೆ ಮುತ್ತಿಗೆ ಹಾಕಿದರೆ ಸುಮ್ನೆ ಬಿಡ್ತೀವಾ?]

ಧರ್ಮಾದಾಯ ದತ್ತಿ ಮತ್ತು ಹಿಂದೂ ಧಾರ್ಮಿಕ ಸಂಸ್ಥೆಗಳ ಅಧಿನಿಯಮ 1997ರ ಸೆಕ್ಷನ್ 23ರ ಅನ್ವಯ ಅಧಿಸೂಚಿತ ಸಂಸ್ಥೆಗಳ ಪಟ್ಟಿಯಲ್ಲಿ ದೇವಸ್ಥಾನ, ಬೃಂದಾವನ ಹಾಗೂ ಇತರ ಧಾರ್ಮಿಕ ಕೇಂದ್ರಗಳನ್ನು ಸೇರಿಸಲಾಗಿತ್ತು. ಆದರೆ, 2010ರಲ್ಲಿ ಈ ನಿಯಮಕ್ಕೆ ತಿದ್ದುಪಡಿ ಮಾಡಿ ಹೊರಡಿಸಿದ ಅಂದಿನ ಸರ್ಕಾರ, ನಾಲ್ಕು ಷರತ್ತುಗಳನ್ನು ವಿಧಿಸಿ ಶ್ರೀಕೃಷ್ಣ ದೇವಸ್ಥಾನವನ್ನು ಅಧಿಸೂಚಿತ ಸಂಸ್ಥೆಗಳ ಪಟ್ಟಿಯಿಂದ ಕೈಬಿಟ್ಟಿತ್ತು.[ಉಡುಪಿ ಮಠಕ್ಕೆ ಸಂವಿಧಾನ ಬೇಕಂತೆ; ಪೇಜಾವರ ವಿರುದ್ಧ ಕೋರ್ಟಿಗೆ ದೂರು]
ಅಧಿಸೂಚಿತ ಪಟ್ಟಿಯಿಂದ ಕೈಬಿಟ್ಟ ಮೇಲೆ ದೇವಾಲಯ ಹಾಗು ಶ್ರೀ ಮಠ ಸ್ವತಂತ್ರವಾಗಿದ್ದು, ತಮ್ಮ ಕಾರ್ಯಕ್ಷೇತ್ರದಲ್ಲಿ ಯಾವುದೇ ಚಟುವಟಿಕೆ, ಆಚರಣೆ ನಡೆಸಲು ಅವಕಾಶವಿದೆ. ಆದರೆ ದೇವಾಲಯದ ನವೀಕರಣಕ್ಕೆ ಸಂಬಂಧಿಸಿದಂತೆ ತಿದ್ದುಪಡಿಯಲ್ಲಿ ಯಾವ ಷರತ್ತು ಇದೆ ಜೊತೆಗೆ ಜಿಲ್ಲಾಡಳಿತ ನೀಡಿರುವ ಕಾರಣ ಏನೆಂಬುದು ತಿಳಿಯಬೇಕಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications