ಆಗಸ್ಟ್ 27ಕ್ಕೆ ಕೊಲ್ಲೂರು ದೇಗುಲಕ್ಕೆ ವಿಕ್ರಮ ಸಿಂಘೆ ಆಗಮನ
ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ್ ಸಿಂಘೆ ನಾಳೆ ಕೊಲ್ಲೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ರಾನಿಲ್ ವಿಕ್ರಮಸಿಂಗೆ ಇಂದು ಕೊಲ್ಲೂರಿಗೆ ಬರಬೇಕಾಗಿತ್ತು . ಆದರೆ ಭದ್ರತೆಯ ಕಾರಣಗಳಿಂದಾಗಿ ಅದನ್ನು ನಾಳೆಗೆ ಮುಂದೂಡಲಾಗಿದೆ.
ಉಡುಪಿ, ಆಗಸ್ಟ್ 26: ಇದೇ ತಿಂಗಳ 26ರಂದು (ಶನಿವಾರ) ಕೊಲ್ಲೂರಿನ ದೇಗುಲಕ್ಕೆ ಭೇಟಿ ನೀಡಬೇಕಿದ್ದ ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ ಸಿಂಘೆ ಅವರ ಭೇಟಿ ಒಂದು ದಿನದ ಮಟ್ಟಿಗೆ ಮುಂದೂಡಿದ್ದು, ಅವರು ಆಗಸ್ಟ್ 27ರಂದು ದೇಗುಲಕ್ಕೆ ಭೇಟಿ ನೀಡಿ ಮೂಕಾಂಬಿಕೆಯ ದರ್ಶನ ಮಾಡಲಿದ್ದಾರೆ. ಭದ್ರತಾ ಕಾರಣಗಳಿಂದಾಗಿ ಅವರ ಪ್ರಯಾಣ ಒಂದು ದಿನದ ಮಟ್ಟಿಗೆ ಮುಂದೂಡಲಾಗಿತ್ತೆಂದು ಹೇಳಲಾಗಿದೆ.
ನಾಳೆ ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಆಗಮಿಸಲಿರುವ ಅವರು ಬಳಿಕ ಕಾರಿನ ಮೂಲಕ ಕೊಲ್ಲೂರು ಕ್ಷೇತ್ರಕ್ಕೆ ತಲುಪಲಿದ್ದಾರೆ. ಅಲ್ಲಿ ದೇವಿ ಮೂಕಾಂಬಿಕೆಗೆ ವಿಶೇಷ ಪೂಜೆ ನೆರವೇರಿಸಿ ಪ್ರಸಾದ ಸ್ವೀಕರಿಸಲಿರುವ ವಿಕ್ರಮ್ ಸಿಂಘೆ ಬೆಳಿಗ್ಗೆ 11.15 ರಿಂದ 1 ಗಂಟೆಯವರೆಗೆ ದೇವಸ್ಥಾನದಲ್ಲಿ ನಡೆಯಲಿರುವ ಚಂಡಿಕಾ ಹೋಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಪರಾಹ್ನ 1.30 ಕ್ಕೆ ಮತ್ತೆ ಬೆಂಗಳೂರಿಗೆ ಹೊರಡಲಿದ್ದಾರೆ ಎಂದು ಶ್ರೀಲಂಕಾ ಪ್ರಧಾನಿ ಸಚಿವಾಲಯ ಮಾಹಿತಿ ನೀಡಿದೆ. ಪ್ರಧಾನಿ ಅವರೊಂದಿಗೆ ಶ್ರೀಲಂಕಾದ ಡೆಪ್ಯುಟಿ ಹೈಕಮಿಷನರ್ ವಿ. ಕೃಷ್ಣಮೂರ್ತಿ ಹಾಗೂ ಎರಡೂ ದೇಶಗಳ ಹಿರಿಯ ಅಧಿಕಾರಿಗಳು ಬರಲಿದ್ದಾರೆ.
ಚಂಡಿಕಾ ಹೋಮದಲ್ಲಿ ಪಾಲ್ಗೊಳ್ಳಲು ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ್ ಸಿಂಘೇ ಅವರ ಕುಟುಂಬದ ಸದಸ್ಯರು ಈಗಾಗಲೇ ಉಡುಪಿಗೆ ಅಗಮಿಸಿದ್ದಾರೆ. ಅವರು ನಾಳೆ ಮುಂಜಾನೆಯಿಂದಲೇ ಚಂಡಿಕಾ ಹೋಮದ ಧಾರ್ಮಿಕ ವಿಧಿ-ವಿಧಾನಗಳಲ್ಲಿ ಪಾಲ್ಗೊಳ್ಳಲಿದ್ದು, ವಿಕ್ರಮ್ ಸಿಂಘೆ ಅವರು ಪೂರ್ಣಾಹುತಿಯ ಸಮಯಲ್ಲಿ ಬಂದು ಪಾಲ್ಗೊಳ್ಳಲಿದ್ದಾರೆ .
ಶ್ರೀಲಂಕಾ ಪ್ರಧಾನಿಯ ಕೊಲ್ಲೂರು ಭೇಟಿಯ ಹಿನ್ನೆಲೆಯಲ್ಲಿ ಅಭೂತ ಪೂರ್ವ ಭದ್ರತಾ ಕ್ರಮಗಳನ್ನು ಪೋಲಿಸ್ ಹಾಗೂ ಸ್ಥಳೀಯಾಡಳಿತ ಕೈಗೊಂಡಿದೆ. ನಾಳೆ ಮುಂಜಾನೆಯಿಂದ ಕೊಲ್ಲೂರು ದೇವಾಲಯಕ್ಕೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications