ಪೇಜಾವರ ಶ್ರೀ ವಿರುದ್ಧ ಜುಲೈ 2ರಂದು ಶಾಂತಿಯುತ ಪ್ರತಿಭಟನೆ
ಉಡುಪಿ, ಜೂನ್ 30: ಜುಲೈ 2 ರಂದು ಪೇಜಾವರ ಶ್ರೀ ವಿರುದ್ಧ ಶಾಂತಿಯುತ ಪ್ರತಿಭಟನೆಗೆ ನಡೆಸಲು ನಿರ್ಧಾರ ಶ್ರೀರಾಮಸೇನೆ ಉಡುಪಿ ಘಟಕ ನಿರ್ಧಾರಿಸಿದೆ.
"ಶಾಂತಿಯುತ ಪ್ರತಿಭಟನೆಯಲ್ಲಿ ಕೃಷ್ಣನಿಗೆ ಪೂಜೆ ಮತ್ತು ಭಜನೆ ಮಾಡಲು ನಿರ್ಧರಿಸಿದ್ದೇವೆ," ಎಂದು ಶ್ರೀರಾಮ ಸೇನೆ ಮಂಗಳೂರು ಪ್ರಮುಖ ಮೋಹನ್ ಭಟ್ ಹೇಳಿದ್ದಾರೆ. ಇದೇ ವೇಳೆ ಅವರು ಮುಂದಿನ ಬಾರಿ ನಮಾಜ್ ಗೆ ಅವಕಾಶ ಕೊಡಬೇಡಿ ಎಂದು ಪೇಜಾವರ ಶ್ರೀಗೆ ಮನವಿ ಮಾಡಿಕೊಂಡರು.

ಜೂನ್ 23 ರಂದು ಶ್ರೀ ಕೃಷ್ಣ ಮಠದಲ್ಲಿ ನಡೆದಿದ್ದ ಇಫ್ತಾರ್ ಕೂಟಕ್ಕೆ ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ್ದರು. ಜತೆಗೆ ಪೇಜಾವರ ಶ್ರೀ ನಡೆಯನ್ನು ಖಂಡಿಸಿದ್ದರು. ಈ ವೇಳೆ ಉಗ್ರ ಪ್ರತಿಭಟನೆ ನಡೆಸಲು ಶ್ರೀರಾಮಸೇನೆ ನಿರ್ಧರಿಸಿತ್ತು.
ಇದೀಗ ಉಗ್ರ ಪ್ರತಿಭಟನೆಯಿಂದ ಹಿಂದಕ್ಕೆ ಸರಿದಿರುವ ಶ್ರೀರಾಮಸೇನೆ ಶಾಂತಿಯುತ ಪ್ರತಿಭಟನೆಗೆ ಮುಂದಾಗಿದೆ.
ಗೋ ಮೂತ್ರದಿಂದ ಮಠದ ಶುದ್ದೀಕರಣ ನಡೆಯಬೇಕು - ಹಿಂದೂ ಜನಜಾಗೃತಿ ಸಮಿತಿ
ಇನ್ನು ಕೃಷ್ಣ ಮಠದಲ್ಲಿ ಇಪ್ತಾರ್ ಕೂಟ ನಡೆದಿರುವು ಮತ್ತು ಗೋ ಭಕ್ಷಕರಿಗೆ ಕೃಷ್ಣ ಮಠಕ್ಕೆ ಪ್ರವೇಶ ನೀಡಿರುವುದು ತಪ್ಪು ಎಂದು ಹಿಂದೂ ಜನಜಾಗೃತಿ ವೇದಿಕೆ ಹೇಳಿದೆ.
"ಪೇಜಾವರ ಶ್ರೀಗಳು ಹಿಂದೂಗಳ ಕ್ಷಮೆ ಕೇಳಬೇಕು. ಗೋ ಮೂತ್ರದಿಂದ ಮಠದ ಶುದ್ದೀಕರಣ ನಡೆಯಬೇಕು," ಎಂದು ಹೇಳಿರುವ ಜನಜಾಗೃತಿ ವೇದಿಕೆ ಶ್ರೀರಾಮ ಸೇನೆಯ ಪ್ರತಿಭಟನೆಗೆ ನಮ್ಮ ಬೆಂಬಲವಿದೆ ಎಂದು ಹೇಳಿದೆ.
"ಮಠದ ಶುದ್ದೀಕರಣ ನಡೆಯದಿದ್ದರೆ ನಮ್ಮಮುಂದಿನ ನಡೆಯ ಬಗ್ಗೆ ಚರ್ಚಿಸಲಾಗುವುದು," ಎಂದು ಸುದ್ದಿಗೋಷ್ಟಿಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯ್ ವಿಜಯ್ ಹೇಳಿಕೆ ನೀಡಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications