ರಾಮಜನ್ಮಭೂಮಿ ವಿವಾದ: ಉಡುಪಿ 'ಧರ್ಮ ಸಂಸದ್'ಗೆ ರವಿಶಂಕರ್ ಗೈರು
ಉಡುಪಿ, ನವೆಂಬರ್ 25: ನಗರದಲ್ಲಿ ನಡೆಯುತ್ತಿರುವ ಧರ್ಮ ಸಂಸದ್ ನಿಂದ 'ಆರ್ಟ್ ಆಫ್ ಲಿವಿಂಗ್' ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ದೂರ ಉಳಿದಿದ್ದಾರೆ.
ಶುಕ್ರವಾರ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಧರ್ಮ ಸಂಸದ್ ನಲ್ಲಿ ಮಾತನಾಡಿ ಪರೋಕ್ಷವಾಗಿ ಶ್ರೀ ಶ್ರೀ ಟೀಕಿಸಿದ್ದರು. ಈ ಹಿನ್ನಲೆಯಲ್ಲಿ ಧರ್ಮ ಸಂಸದ್ ಗೆ ಗೈರಾಗಲು ರವಿಶಂಕರ್ ನಿರ್ಧರಿಸಿದ್ದಾರೆ.
ವಿಶ್ವ ಹಿಂದೂ ಪರಿಷತ್ ಆಯೋಜಿಸಿರುವ ಈ ಧರ್ಮ ಸಂಸದ್ ನಲ್ಲಿ ಪಾಲ್ಗೊಳ್ಳುವಂತೆ ಶ್ರೀ ಶ್ರೀ ರವಿಶಂಕರ್ ನ್ನು ಆಹ್ವಾನಿಸಲಾಗಿತ್ತು. ಅವರೂ ಇದರಲ್ಲಿ ಭಾಗವಹಿಸಲು ಉತ್ಸುಕರಾಗಿದ್ದರು. ಆದರೆ ಇದೀಗ ತಮ್ಮ ನಿರ್ಧಾರದಿಂದ ರವಿಶಂಕರ್ ಹಿಂದೆ ಸರಿದಿದ್ದಾರೆ.

ಶುಕ್ರವಾರ ಧರ್ಮ ಸಂಸದ್ ನಲ್ಲಿ ಮಾತನಾಡಿದ್ದ ಮೋಹನ್ ಭಾಗವತ್, ಶ್ರೀ ಶ್ರೀ ಹೆಸರು ಹೇಳದೇ ಅವರನ್ನು ಟೀಕಿಸಿದ್ದರು. "ಪ್ರಖ್ಯಾತ ವ್ಯಕ್ತಿಯೊಬ್ಬರಿದ್ದಾರೆ. ಅವರ ಬಗ್ಗೆ ನಾವು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇವೆ. ಅವರು ಸಂಧಾನದ ಭಾಗವಾಗಿದ್ದಾರೆ. ಅವರು ಬಂದು ನನ್ನನ್ನು ಭೇಟಿಯಾಗಿ ಈ ಸಂಬಂಧ (ರಾಮ ಜನ್ಮಭೂಮಿ) ಮಾತುಕತೆ ನಡೆಸಿದರು. ನಾನು ಇದು ಯಾವತ್ತೂ ನಮ್ಮ ಕೆಲಸ ಅಲ್ಲ ಎಂದು ಹೇಳಿದೆ. ಅವರು ನನ್ನ ಮಾತು ಕೇಳಲಿಲ್ಲ. ನಾನು ಭಾಗವಹಿಸಿದ್ದ ಕಾರ್ಯಕ್ರಮದಲ್ಲೇ ಅವರು ಈ ಸಂಬಂಧ ನಿರ್ಣಯ ಮಂಡಿಸಿದರು. ಈ ವಿವಾದದಲ್ಲಿ ತೀರ್ಮಾನ ತೆಗೆದುಕೊಳ್ಳಲು ಧರ್ಮ ಸಂಸದ್ ಇದೆ," ಎಂದು ಭಾಗವತ್ ಹೇಳಿದರು.
ಇನ್ನು ಈ ವಿವಾದದ ಬಗ್ಗೆ ಮಾತನಾಡಿದ ಭಾಗವತ್, "ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರವನ್ನೇ ನಿರ್ಮಾಣ ಮಾಡಲಾಗುತ್ತದೆ. ಅಲ್ಲಿ ಬೇರೇನನ್ನೂ ನಿರ್ಮಾಣ ಮಾಡಲಾಗುವುದಿಲ್ಲ. ಮೂಲ ಮಾದರಿಯಲ್ಲಿ ಅದೇ ಕಲ್ಲುಗಳಿಂದ ರಾಮ ಮಂದಿರ ನಿರ್ಮಾಣ ಮಾಡಲಾಗುತ್ತದೆ," ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
"ರಾಮ ಜನ್ಮ ಭೂಮಿ ಹೋರಾಟವನ್ನು ನಿರಂತರ 20-25 ವರ್ಷ ಮುನ್ನಡೆಸಿದವರ ನೇತೃತ್ವದಲ್ಲೇ ಇದನ್ನು ನಿರ್ಮಾಣ ಮಾಡಲಾಗುತ್ತದೆ," ಎಂದೂ ಭಾಗವತ್ ಹೇಳಿದ್ದಾರೆ. ಈ ಮೂಲಕ ಅವರು ಶ್ರೀ ಶ್ರೀ ಸಂಧಾನ ಸೂತ್ರವನ್ನು ತಳ್ಳಿ ಹಾಕಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications