ಉಡುಪಿ; ಕಠಿಣ ಲಾಕ್ಡೌನ್, ಮದುವೆ, ಮೆಹಂದಿ ಕಾರ್ಯಕ್ರಮ ರದ್ದು
ಉಡುಪಿ, ಮೇ 24; "ಲಾಕ್ಡೌನ್ ಮುಗಿಯುವ ತನಕ ಜಿಲ್ಲೆಯಲ್ಲಿ ಮದುವೆ ಸಮಾರಂಭಗಳಿಗೆ ಅವಕಾಶ ಇಲ್ಲ" ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.
ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಸಭೆ ನಡೆಸಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿಗಳು, "ಜಿಲ್ಲಾಡಳಿತ ಇಂತಹದ್ದೊಂದು ಕಠಿಣ ನಿಯಮ ಜಾರಿಗೆ ತಂದಿದೆ. ಮದುವೆಗಳಿಂದಲೇ ಹೆಚ್ಚಾಗಿ ಕೊರೊನಾ ಹರಡುತ್ತಿದೆ" ಎಂದರು.
"ಇವತ್ತಿನವರೆಗೆ ನೀಡಿದ ಅನುಮತಿ ಪಡೆದ ಮದುವೆಗಳನ್ನು ನಡೆಸಬಹುದು. ಮಂಗಳವಾರದಿಂದ ಜೂನ್ 7ರ ತನಕ ಯಾವುದೇ ಮದುವೆಗಳಿಗೆ ಅವಕಾಶ ಇಲ್ಲ. ನಿಶ್ಚಿತಾರ್ಥ, ಮೆಹಂದಿ ಇನ್ನಿತರ ಕಾರ್ಯಕ್ರಮ ನಡೆಸಿದರೆ ಕ್ರಿಮಿನಲ್ ಕೇಸ್ ಹಾಕುತ್ತೇವೆ" ಎಂದು ಎಚ್ಚರಿಕೆ ನೀಡಿದರು.

"ಉಡುಪಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಜನರ ಸಹಕಾರಕ್ಕೆ ಧನ್ಯವಾದ ಹೇಳುತ್ತೇನೆ. ಇದೇ ರೀತಿ ಸಹಕಾರ ನೀಡಿದರೆ ಇನ್ನೊಂದು ಲಾಕ್ಡೌನ್ಗೆ ಹೋಗುವುದು ತಪ್ಪಲಿದೆ" ಎಂದರು.
"ಜಿಲ್ಲೆಯ ಅನೇಕ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಐಸೋಲೇಷನ್ ಆದವರನ್ನು ಸಂಪರ್ಕಿಸಿದ್ದೇನೆ. ಮದುವೆ ಸಮಾರಂಭಗಳಿಗೆ, ಮೆಹಂದಿ ಮತ್ತಿತರ ಕಾರ್ಯಕ್ರಮಗಳಿಗೆ ಹೋದವರಲ್ಲೇ ಹೆಚ್ಚಾಗಿ ಸೋಂಕು ಕಂಡುಬರುತ್ತಿದೆ" ಎಂದು ಹೇಳಿದರು.
"ಗುಂಪಾಗಿ ಅಗತ್ಯ ವಸ್ತು ಖರೀದಿಸುವವರಲ್ಲೂ ಸೋಂಕು ಕಂಡು ಬರುತ್ತಿದೆ. ಆದ್ದರಿಂದ ಯಾವುದೇ ಸಮಾರಂಭಗಳಿಗೂ ಹೋಗಬೇಡಿ. ಕೆಲವು ದಿನಗಳ ಮಟ್ಟಿಗೆ ಮದುವೆ, ಮೆಹಂದಿಗಳನ್ನು ಮುಂದೂಡಿ" ಎಂದು ಜಿಲ್ಲಾಧಿಕಾರಿಗಳಿ ಮನವಿ ಮಾಡಿದರು.
"ಲಾಕ್ಡೌನ್ ಸಂದರ್ಭದಲ್ಲಿ ಗುಂಪುಗೂಡಿ ಕ್ರಿಕೆಟ್ ಆಡುವುದು ಕಂಡುಬಂದಿದೆ. ಅಂಥವರ ವಿರುದ್ಧ ಕೇಸ್ ದಾಖಲಿಸುತ್ತೇವೆ" ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications