ತಾಯಿ ಮನೆಗೆಲಸ ಮಾಡಿಕೊಂಡಿದ್ದ ಮನೆಯಲ್ಲಿ ಸೋಂಕು; ಉಡುಪಿ ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ, ಜುಲೈ 7: ತನ್ನ ತಾಯಿಯು ಮನೆಗೆಲಸ ಮಾಡುತ್ತಿದ್ದ ಮನೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ವಿಚಾರವಾಗಿ ಮನನೊಂದು ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

Recommended Video

      ಬೆಂಗಳೂರಿನಿಂದ ಬರುವವರಿಗೆ ಇಲ್ಲ ಪ್ರವೇಶ | Oneindia Kannada

      ಸಾಲಿಗ್ರಾಮದ ಮಾಣಿಕಟ್ಟಿ ನಿವಾಸಿ, 10ನೇ ತರಗತಿ ವಿದ್ಯಾರ್ಥಿ ಕಾರ್ತಿಕ (15) ಆತ್ಮಹತ್ಯೆ ಮಾಡಿಕೊಂಡವನು. ಕೋಟ ವಿವೇಕ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಕಾರ್ತಿಕ್ ತಾಯಿ ಮನೆಗೆಲಸ ಮಾಡಿದ್ದರು. ಅವರು ಮನೆಗೆಲಸ ಮಾಡಿಕೊಂಡಿದ್ದ ಮನೆಯ ಸದಸ್ಯರೊಬ್ಬರಲ್ಲಿ ಕೊರೊನಾ ವೈರಸ್ ಪತ್ತೆಯಾಗಿತ್ತು.

      ಈ ಹಿನ್ನೆಲೆಯಲ್ಲಿ ತಾಯಿ ರುದ್ರಮ್ಮ ಮತ್ತು ಮಗ ಕಾರ್ತಿಕ್ ಗೆ ಹೋಂ ಕ್ವಾರಂಟೈನ್ ವಿಧಿಸಲಾಗಿತ್ತು. ಇದೇ ವಿಚಾರವಾಗಿ ಮನನೊಂದು ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮೃತನ ಕೊರೊನಾ ಸೋಂಕಿನ ವರದಿ ಬಂದ ಬಳಿಕ ಶವ ಸಂಸ್ಕಾರಕ್ಕೆ ಅವಕಾಶ ನೀಡಲಾಗಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      Student In Home Quarantine Commits Suicide In Udupi

      ಚೂರಿ ಇರಿದು ಯುವಕನ ಕೊಲೆ: ಉಡುಪಿಯಲ್ಲಿ ಯುವಕನೊಬ್ಬನನ್ನು ಚೂರಿ ಇರಿದು ಕೊಲೆ ಮಾಡಲಾಗಿದೆ. ತಡರಾತ್ರಿ ಉಡುಪಿಯ ಲಕ್ಷ್ಮೀ ನಗರದಲ್ಲಿ ಈ ಘಟನೆ ನಡೆದಿದೆ. ಇರಿತಕ್ಕೊಳಗಾದ ಯೋಗೀಶ್ (28) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಯೋಗೀಶ್ ಮೀನುಗಾರಿಕಾ ವೃತ್ತಿ ಮಾಡುತ್ತಿದ್ದ.

      ಐದು ಮಂದಿಯ ತಂಡ ಚೂರಿ ಇರಿದು ಪರಾರಿ ಆಗಿದ್ದಾರೆ. ವ್ಯವಹಾರ ವಿಚಾರದಲ್ಲಿ ಗಲಾಟೆ ನಡೆದಿರುವ ಸಾಧ್ಯತೆಯಿದ್ದು, ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+