ಉಡುಪಿ ಕೃಷ್ಣಮಠದಲ್ಲಿ ಸಕ್ಕರೆ, ಮೈದಾ ನಿಷೇಧ
ಉಡುಪಿ, ನವೆಂಬರ್ 25: ಉಡುಪಿ ಶ್ರೀ ಕೃಷ್ಣಮಠದಲ್ಲಿ ಇನ್ನು ಮುಂದೆ ಸಕ್ಕರೆ ಹಾಗೂ ಮೈದಾ ಬಳಸಿ ತಯಾರಿಸಿದ ಪ್ರಸಾದ- ಖಾದ್ಯಗಳು ಸಿಗದು. ಕಾರಣ ಇಲ್ಲಿ ಖಾದ್ಯಗಳ ತಯಾರಿಗೆ ಸಕ್ಕರೆ ಹಾಗೂ ಮೈದಾವನ್ನು ನಿಷೇಧಿಸುವಂತೆ ಪರ್ಯಾಯ ಪಲಿಮಾರು ಶ್ರೀಗಳು ಮಠದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇತ್ತೀಚೆಗೆ ಶ್ರೀಕೃಷ್ಣಮಠ ಪಾರ್ಕಿಂಗ್ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಯೋಗ ಶಿಬಿರದಲ್ಲಿ ಯೋಗಗುರು ಬಾಬಾ ರಾಮ್ದೇವ್ ಅವರು ಸಕ್ಕರೆ ಮತ್ತು ಮೈದಾ ಆರೋಗ್ಯಕ್ಕೆ ಹಾನಿಕಾರಕ. ಹೀಗಾಗಿ ಜನರು ಇದರ ಬಳಕೆ ತ್ಯಜಿಸುವಂತೆ ಕರೆ ನೀಡಿದ್ದರು. ರಾಮ್ದೇವ್ ಅವರ ಸಲಹೆಯನ್ನು ಕೃಷ್ಣಮಠದಲ್ಲಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಪಲಿಮಾರು ಶ್ರೀಗಳು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಸಕ್ಕರೆ ಹಾಗೂ ಮೈದಾ ಬದಲಿಗೆ ಬೆಲ್ಲ ಹಾಗೂ ಕಡ್ಲೆ ಹಿಟ್ಟು, ಗೋಧಿ ಹಿಟ್ಟನ್ನು ಬಳಸಲು ನಿರ್ಧರಿಸಲಾಗಿದೆ.
ವಿದೇಶಿ ತರಕಾರಿಗೂ ಇಲ್ಲ ಪ್ರವೇಶ: ಮಠದಲ್ಲಿ ಶತಮಾನಗಳಿಂದಲೂ ಪದಾರ್ಥಗಳಿಗೆ ಟೊಮ್ಯಾಟೊ, ಕ್ಯಾಬೇಜ್, ಹೂ ಕೋಸು, ಬೀಟ್ರೂಟ್, ಮೂಲಂಗಿ, ತೊಂಡೆಕಾಯಿ, ಈರುಳ್ಳಿ ಬೆಳ್ಳುಳ್ಳಿ ಮೊದಲಾದ ತರಕಾರಿಗಳನ್ನು ಬಳಸುತ್ತಿಲ್ಲ. ಇವು ವಿದೇಶಿ ಮೂಲದ ತರಕಾರಿಗಳಾಗಿರುವುದರಿಂದ ಸ್ವಾಮೀಜಿ ಹಾಗೂ ಶಿಷ್ಯವರ್ಗವಲ್ಲದೆ ಅನೇಕ ವಿದ್ವಾಂಸರು ಈ ತರಕಾರಿಗಳನ್ನು ಬಳಸಿದ ಪದಾರ್ಥ ಸ್ವೀಕರಿಸುವುದಿಲ್ಲ.

1 ಕ್ವಿಂಟಲ್ ಸಕ್ಕರೆ: ಕೃಷ್ಣ ಮಠದಲ್ಲಿ ಮೋಹನ್ ಲಾಡು ಹಾಗೂ ಪಂಚಕಜ್ಜಾಯ ಪ್ರಸಾದಕ್ಕೆ ನಿತ್ಯ 1 ಕ್ವಿಂಟಾಲ್ಗೂ ಅಧಿಕ ಸಕ್ಕರೆ ಬಳಸಲಾಗುತ್ತದೆ. 50 ಕೆಜಿ ಮೈದಾ ಬೇಕಾಗುತ್ತದೆ. ಆದರೆ ಕಳೆದ 1 ವಾರದಿಂದ ಕಡ್ಲೆ ಹಿಟ್ಟಿನಿಂದ ಮಾಡಿದ ಕಾಳು ಲಾಡು ಹಾಗೂ ಬೆಲ್ಲ ಬಳಸಿದ ಪಂಚಕಜ್ಜಾಯ ಪ್ರಸಾದವನ್ನು ಪ್ರಾಯೋಗಿಕವಾಗಿ ವಿತರಿಸಲಾಗುತ್ತಿದೆ.
ಕಿರಿಯ ಶ್ರೀ ಯೋಗಾಭ್ಯಾಸ: ಪಲಿಮಾರು ಮಠದ ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ರಾಮ್ದೇವ್ ಅವರ ಕೊನೆಯ ದಿನದ ಯೋಗ ಶಿಬಿರದಂದು ಯೋಗಾಭ್ಯಾಸ ನಡೆಸಿದ್ದರು. ಮೂರು ದಿನಗಳಿಂದ ಅವರು ಬೆಳಗ್ಗೆ 4.15ರಿಂದ 5.15ರ ವರೆಗೆ ಯೋಗಾಭ್ಯಾಸ ನಡೆಸುತ್ತಿದ್ದಾರೆ. ಇವರಿಗೆ ಪತಂಜಲಿ ಯೋಗ ಸಮಿತಿ ಯೋಗ ಶಿಕ್ಷಕ ರಾಘವೇಂದ್ರ ಭಟ್ ಯೋಗಾಸನ, ಪ್ರಾಣಾಯಾಮ ಕಲಿಸುತ್ತಿದ್ದಾರೆ.

ರಾಮ್ದೇವ್ ಯೋಗ ಶಿಬಿರದ ಬಳಿಕ ಸಕ್ಕರೆ, ಮೈದಾ ಬಳಕೆ ಕೈಬಿಡಲು ಪಲಿಮಾರು ಶ್ರೀಗಳು ನಿರ್ಧರಿಸಿದ್ದಾರೆ. ಇದಕ್ಕೆ ಪರ್ಯಾಯವಾಗಿ ಬೆಲ್ಲದ ಬಳಕೆ ಹೆಚ್ಚು ಮಾಡಲಾಗುತ್ತದೆ. ಸಕ್ಕರೆ ಹಾಗೂ ಮೈದಾ ಬಳಸದ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ.
ಲೇಖಕರು: ಉಪವ್ಯವಸ್ಥಾಪಕ, ಉಗ್ರಾಣ ವಿಭಾಗ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications