ಅಕ್ರಮ ಮರಳು ಗಣಿಗಾರಿಕೆ; ತಹಶೀಲ್ದಾರ್ ದಾಳಿ ಬಗ್ಗೆ ಮಾಹಿತಿ ಸೋರಿಕೆ!
ಉಡುಪಿ, ಜುಲೈ 09; ಅಕ್ರಮ ಮರಳು ಗಣಿಗಾರಿಕೆ ಅಡ್ಡೆ ಮೇಲೆ ತಹಶೀಲ್ದಾರ್ ದಾಳಿ ನಡೆಸುವ ವಿಚಾರವನ್ನು ಅಧಿಕಾರಿಗಳೇ ದಂಧೆಕೋರರಿಗೆ ನೀಡಿದ್ದಾರೆ. ಇದರಿಂದಾಗಿ ಅವರು ಪರಾರಿಯಾಗಲು ಸಹಾಯ ಮಾಡಿದ ಘಟನೆ ಉಡುಪಿ ಜಿಲ್ಲೆಯ ಶಿರ್ವದಲ್ಲಿ ನಡೆದಿದೆ.
ಶಿರ್ವದ ಮುಟ್ಲಪಾಡಿ ಬಳಿ ಎಗ್ಗಿಲ್ಲದೇ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಕಾಪು ತಹಶೀಲ್ದಾರ್ ಪ್ರತಿಭಾ ದಾಳಿ ನಡೆಸಿದ್ದು, ತಹಶೀಲ್ದಾರ್ ದಾಳಿ ಬಗ್ಗೆ ಗಣಿ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿ ಆರೋಪಿಗಳು ಪರಾರಿಯಾಗಿದ್ದಾರೆ.
ಹಲವು ದಿನಗಳಿಂದ ಶಿರ್ವ ಬಳಿಯ ಮುಟ್ಲುಪಾಡಿ ಸೇತುವೆ ಕೆಳಗಡೆ ಕೇರಳ ಮೂಲದ ಕೋಶಿ ಎಂಬಾತನ ತೋಟದ ಜಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತಿತ್ತು. ಹಗಲಿನಲ್ಲೇ ಯಾರ ಭಯವೂ ಇಲ್ಲದೇ ರಾಜಾರೋಷವಾಗಿ ಹೊಳೆಗೆ ಡ್ರಜ್ಜಿಂಗ್ ಮಿಶಿನ್ ಗಳನ್ನು ಹಾಕಿ ಮರಳು ತೆಗೆದು ನೂರಾರು ಲೋಡು ಸಾಗಿಸುತ್ತಿದ್ದರು.

ಸ್ಥಳೀಯರು ಶಿರ್ವ ಪೊಲೀಸರಿಗೆ ಹಾಗೂ ಗಣಿ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತರ ಮೂಲಕ ಕಾಪು ತಹಶೀಲ್ದಾರ್ಗೆ ಮಾಹಿತಿ ನೀಡಿದ್ದು, ವಿಷಯ ತಿಳಿದ ಪ್ರಾಮಾಣಿಕ ಅಧಿಕಾರಿ ತಹಶೀಲ್ದಾರ್ ಪ್ರತಿಭಾ ಅಕ್ರಮ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ.
ಆದರೆ ತಹಶೀಲ್ದಾರ್ ದಾಳಿ ವೇಳೆ ದಂಧೆಕೋರರು ಸ್ಥಳದಲ್ಲಿದ್ದ ಸುಮಾರು ಇಪ್ಪತ್ತಕ್ಕೂ ಹೆಚ್ಚು ಲಾರಿಗಳನ್ನು ಸ್ಥಳಾಂತರ ಮಾಡಿದ್ದಾರೆ. ಹೊಳೆಯಲ್ಲಿ ಡ್ರಜ್ಜಿಂಗ್ ಮೆಶಿನ್ ಇದ್ದ ದೋಣಿಯನ್ನು ತೆರವುಗೊಳಿಸಿದ್ದಾರೆ. ಆದರೆ, ಪೈಪುಗಳನ್ನ ಅಲ್ಲೇ ಹೊಳೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಮತ್ತೊಂದು ಭಾಗದಲ್ಲಿ ಜೆಸಿಬಿಯನ್ನು ಲಾರಿ ಮೂಲಕ ಸಾಗಿಸಲು ಪ್ರಯತ್ನ ಪಡುವಷ್ಟರಲ್ಲಿ ತಹಶೀಲ್ದಾರ್ ದಾಳಿ ನಡೆಸಿಯಾಗಿತ್ತು. ಹೀಗಾಗಿ ಜೆಸಿಬಿ ಸಹಿತ ಲಾರಿಯನ್ನು ತಹಶೀಲ್ದಾರ್ ವಶಪಡಿಸಿಕೊಂಡಿದ್ದಾರೆ.
ಕಾಪು ಭಾಗದಲ್ಲಿ ಹಲವೆಡೆ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಪೊಲೀಸ್ ಇಲಾಖೆ ಹಾಗೂ ಗಣಿ ಇಲಾಖೆ ಇದಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂಬ ಆರೋಪವೂ ಇದೆ.
-
Gruhalakshmi scheme: ರಾಜ್ಯದ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್: 26, 27ನೇ ಕಂತಿನ ಹಣ ಜಮಾದ ಬಗ್ಗೆ ಮಹತ್ವದ ಅಪ್ಡೇಟ್ -
Horoscope 28 February: ಫೆಬ್ರವರಿ 28ರ ದ್ವಾದಶ ರಾಶಿ ಫಲ: ಯಾವ ರಾಶಿಗೆ ಯಶಸ್ಸು, ಯಾರಿಗೆ ಸವಾಲು ಇಲ್ಲಿದೆ ಸಂಪೂರ್ಣ ಮಾಹಿತಿ -
LPG Price: ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಏರಿಕೆ: ಇಲ್ಲಿದೆ ಮಾರ್ಚ್ 1ರ ದರಪಟ್ಟಿ -
ರಣಜಿ ಟೂರ್ನಿಯಲ್ಲಿ ಜಮ್ಮು-ಕಾಶ್ಮೀರ ವಿರುದ್ಧ ಸೋತರೂ ಗೆದ್ದ ಕನ್ನಡಿಗ: ಮೋಡಿಯಂತೂ ಅಲ್ಲ, ಇಲ್ಲಿದೆ ಮಾಹಿತಿ -
Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬಿಸಿಲೂ ಹೆಚ್ಚು -
ಮಾರ್ಚ್ 3, 2026 – ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ: ದ್ವಾದಶ ರಾಶಿಗಳ ಫಲಿತಾಂಶ -
Gold Rate Today: ಆಭರಣ ಪ್ರಿಯರ ಗಮನಕ್ಕೆ: ಬೆಂಗಳೂರಿನಲ್ಲಿ ಇಂದು ಚಿನ್ನ-ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ -
Bengaluru Rental Row: ಬೆಂಗಳೂರು ಬಾಡಿಗೆದಾರರಿಗೆ ಶಾಕ್: ಪೇಂಟಿಂಗ್, ಕ್ಲೀನಿಂಗ್ ಹೆಸರಲ್ಲಿ 51,000 ರೂ. ಕಡಿತ -
National Highway: ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಯ ಮಹತ್ವದ ಅಪ್ಡೇಟ್ -
ಹರ್ಮೂಜ್ ಜಲಸಂಧಿ ಬಂದ್: ಭಾರತಕ್ಕೆ ತಟ್ಟಲಿದೆ ತೈಲ ದರದ ಬಿಸಿ, ಆರ್ಥಿಕತೆಗೂ ಭಾರಿ ಹೊಡೆತ -
ಅಮೆರಿಕಕ್ಕೆ ಸೆಡ್ಡು ಹೊಡೆದು 16,800 ಕೋಟಿ ರೂ ಒಪ್ಪಂದ ಕಡಿದುಕೊಂಡ ಆಂತ್ರೋಪಿಕ್: ಬೆಂಗಳೂರು ಟೆಕ್ಕಿ ಮೆಚ್ಚುಗೆ -
March Monthly Horoscope: ಮಾರ್ಚ್ ಮಾಸ ಭವಿಷ್ಯ: 12 ರಾಶಿಗಳ ಜೀವನದಲ್ಲಿ ಯಾವ ಬದಲಾವಣೆ ? ಯಾರಿಗೆ ಅದೃಷ್ಟ, ಯಾರಿಗೆ ಪರೀಕ್ಷೆ












Click it and Unblock the Notifications