ಕೋಟದ ಮೂಡುಗಿಳಿಯಾರಿನಲ್ಲಿ ಅತೀ ಎತ್ತರದ ವಿವೇಕಾನಂದ ಪ್ರತಿಮೆ
ಉಡುಪಿ, ಫೆಬ್ರುವರಿ 01: ಸ್ವಾಮಿ ವಿವೇಕಾನಂದರ ಎತ್ತರದ ಪ್ರತಿಮೆ ಕನ್ಯಾಕುಮಾರಿಯಲ್ಲಿದೆ. ಆದರೆ ಅದನ್ನೂ ಮೀರಿಸುವ ಪ್ರಪಂಚದ ಅತೀ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆ ಜ್ಞಾನಪೀಠ ಪುರಸ್ಕೃತ ಡಾ.ಕೋಟ ಶಿವರಾಮ ಕಾರಂತರ ಊರಲ್ಲಿ ತಲೆ ಎತ್ತಿದೆ.
ಹೌದು. ಸುತ್ತಲೂ ಹಸಿರು ಹಸಿರಾದ ಕೃಷಿ ಭೂಮಿ ಮತ್ತು ನಿಸರ್ಗದ ಮಧ್ಯ ಕೈಕಟ್ಟಿ ಮಂದಸ್ಮಿತರಾಗಿ ನೋಡುತ್ತಿರುವ ಸ್ವಾಮಿ ವಿವೇಕಾನಂದರ ಬೃಹತ್ ಮೂರ್ತಿ ಇಂದು ಲೋಕಾರ್ಪಣೆಗೊಂಡಿದೆ. ಈ ಸುಂದರ ದೃಶ್ಯವನ್ನು ಕಣ್ಣು ತುಂಬಿಕೊಳ್ಳಲು ನೀವು ಉಡುಪಿಯ ಕೋಟದ ಮೂಡು ಗಿಳಿಯಾರಿಗೆ ಬರಬೇಕು. ಕೋಟ ರಾಷ್ಟ್ರೀಯ ಹೆದ್ದಾರಿ 66ರ ಪೂರ್ವ ದಿಕ್ಕಿಗೆ ಸಾಗಿದರೆ ಮೂಡ ಗಿಳಿಯಾರು ಸಿಗುತ್ತದೆ. ಇದೇ ಊರಿನಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ನಿರ್ಮಿಸಲಾಗಿದೆ. ನೂತನವಾಗಿ ನಿರ್ಮಾಣಗೊಂಡ ಸರ್ವ ಕ್ಷೇಮ ಆಸ್ಪತ್ರೆಯ ಅಂಗಳದಲ್ಲಿದೆ ಈ ಪ್ರತಿಮೆ.
ಸಾಲಿಗ್ರಾಮ ಡಿವೈನ್ ಪಾರ್ಕ್ನ ಅಂಗ ಸಂಸ್ಥೆಯಾದ ಸರ್ವ ಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನದ ಯೋಗಬನದಲ್ಲಿನ 35 ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಕಾಂಕ್ರಿಟ್ ಪ್ರತಿಮೆ ಗಿನ್ನೆಸ್ ದಾಖಲೆಯ ಪುಟ ಸೇರಲು ತಯಾರಾಗಿದೆ.

ರಾಂಚಿಯಲ್ಲಿ ನಿರ್ಮಾಣವಾದ ವಿವೇಕಾನಂದರ ಪ್ರತಿಮೆಯು 32 ಅಡಿ ಇದ್ದು, ಅದು ಈ ಹಿಂದೆ ಪ್ರಪಂಚದ ಎತ್ತರದ ವಿವೇಕಾನಂದರ ಪ್ರತಿಮೆ ಎನ್ನುವ ಹೆಗ್ಗಳಿಕೆ ಪಡೆದಿತ್ತು. ಉಳಿದಂತೆ ಸಾಲಿಗ್ರಾಮ ಡಿವೈನ್ ಪಾರ್ಕ್ನಲ್ಲಿರುವ ವಿವೇಕಾನಂದರ ಫೈಬರ್ ಪ್ರತಿಮೆ ಮತ್ತು ಮಲೇಷ್ಯಾದಲ್ಲಿರುವ ಪ್ರತಿಮೆ, ಎರಡು ಮತ್ತು ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿತ್ತು. ಕನ್ಯಾಕುಮಾರಿಯಲ್ಲಿರುವ ವಿವೇಕಾನಂದರ ಪ್ರತಿಮೆಯ ತದ್ರೂಪು ಇದಾಗಿದೆ.

ಮುರ್ಡೇಶ್ವರದಲ್ಲಿ ಅತೀ ಎತ್ತರದ ಶಿವನ ವಿಗ್ರಹ ಮತ್ತು ಗದಗದಲ್ಲಿ ಅತೀ ಎತ್ತರದ ಬಸವನ ಪ್ರತಿಮೆ ನಿರ್ಮಿಸಿದ ಬೆಂಗಳೂರಿನ ಶ್ರೀಧರ ಮೂರ್ತಿ ತಂಡ ಈ ಪ್ರತಿಮೆ ನಿರ್ಮಿಸಿದೆ. ಕಾಂಕ್ರೀಟ್ ಪ್ರತಿಮೆಗೆ ಗಾಳಿ ಮಳೆಯಿಂದ ರಕ್ಷಣೆ ನೀಡುವ ಉದ್ದೇಶಕ್ಕೆ ಲೋಹದ ಹೊದಿಕೆ ಹಾಕಲಾಗಿದ್ದು, ಸುಮಾರು 40 ಮಂದಿ ಶಿಲ್ಪಿಗಳು ಆರು ತಿಂಗಳುಗಳ ಕಾಲ ಶ್ರಮವಹಿಸಿ ಈ ಪ್ರತಿಮೆ ಸಿದ್ಧಪಡಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications