ಶ್ರೀ ಕೃಷ್ಣಮಠದಲ್ಲಿ ಪರ್ಯಾಯ ಶ್ರೀಗಳಿಂದ ಭಕ್ತರಿಗೆ ತಪ್ತಮುದ್ರಾಧಾರಣೆ
ಉಡುಪಿ, ನವೆಂಬರ್ 26: ಉಡುಪಿಯ ಕೃಷ್ಣಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿ ದಿನವಾದ ದೇವಪ್ರಬೋಧಿನಿ ಏಕಾದಶಿ ದಿನದಂದು ತಪ್ತ ಮುದ್ರಾಧಾರಣೆ ನಡೆಯಿತು.
ಮಹಾವಿಷ್ಣುವಿನ ಚಿಹ್ನೆಗಳಾದ ಶಂಖ, ಚಕ್ರವನ್ನು ಪಂಚಗವ್ಯ ಪ್ರಾಶನ ಪೂರ್ವಕವಾಗಿ ಸುದರ್ಶನದ ಹೋಮದ ಕೆಂಡದಲ್ಲಿ ಕಾಯಿಸಿ ಶರೀರದಲ್ಲಿ ಧಾರಣೆ ಮಾಡಿಕೊಳ್ಳುವ ಸಂಪ್ರದಾಯ ಅಷ್ಟಮಠಗಳಲ್ಲಿದೆ. ಅದರಂತೆ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಅದಮಾರು ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದಲ್ಲಿ ತಪ್ತಮುದ್ರಾಧಾರಣೆ ನಡೆಯಿತು.
ಪರ್ಯಾಯ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು ಸುದರ್ಶನ ಹೋಮದ ಪೂರ್ಣಾಹುತಿಯನ್ನು ನಡೆಸಿದರು. ಪೇಜಾವರ ಶ್ರೀಪಾದರು ತಾವೇ ಮುದ್ರಾಧಾರಣೆ ಮಾಡಿಕೊಂಡು ಪರ್ಯಾಯ ಶ್ರೀಪಾದರಿಗೆ ಮುದ್ರಾಧಾರಣೆ ಮಾಡಿದರು. ನಂತರ ಪರ್ಯಾಯ ಅದಮಾರು ಈಶಪ್ರಿಯತೀರ್ಥ ಶ್ರೀಪಾದರು ಭಕ್ತಾದಿಗಳಿಗೆ ತಪ್ತ ಮುದ್ರಾಧಾರಣೆ ನಡೆಸಿದರು.

ಮಳೆಗಾಲದಲ್ಲಿ ಸೊಳ್ಳೆ, ಕ್ರಿಮಿ ಕೀಟಗಳಿಂದ ಎದುರಾಗುವ ರೋಗ ರುಜಿನಗಳನ್ನು ಎದುರಿಸಲು ಬೇಕಾದ ರೋಗ ನಿರೋಧಕ ಶಕ್ತಿಯ ಹೆಚ್ಚಳಕ್ಕೂ ತಪ್ತ ಮುದ್ರಾಧಾರಣೆ ಪೂರಕ ಎಂಬ ನಂಬಿಕೆ ಭಕ್ತರದಲ್ಲಿದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications