ಉಡುಪಿಯಲ್ಲಿ ಮೊಬೈಲ್ ಆಸೆಗೆ ಸಿಕ್ಕಿದ್ದು ಆರತಿ ತಟ್ಟೆ, ದೇವರ ಗಂಟೆ
ಉಡುಪಿ, ಅಕ್ಟೋಬರ್ 12: "ನಿಮ್ ಮೊಬೈಲ್ ನಂಬರ್ ಗೆ ಸ್ಯಾಮ್ಸಂಗ್ ಸ್ಮಾರ್ಟ್ ಫೋನ್ ಸಿಕ್ಕಿದೆ. ಈಗ್ಲೇ ಪರ್ಚೇಸ್ ಮಾಡಿ ಬರೇ 1850 ರೂಪಾಯಿಗೆ". ಮೊಬೈಲ್ ಗೆ ಬಂದ ಹೀಗೊಂದು ಮೆಸೇಜ್ ಗೆ ಮರುಳಾಗಿ ಹಣ ಪಾವತಿಸಿದಾಗ ಬಂದ ಪಾರ್ಸಲ್ ನಲ್ಲಿ ದೇವರ ವಿಗೃಹ, ಆರತಿ ತಟ್ಟೆ, ಗಂಟೆ ಕಳುಹಿಸಿ ವಂಚಿಸಿದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.
ಉಡುಪಿಯ ಕಲ್ಯಾಣಪುರ ನಿವಾಸಿ ಹರೀಶ್ ಕುಮಾರ್ ಅವರೇ ಈ ರೀತಿ ಮೋಸ ಹೋದವರಾಗಿದ್ದಾರೆ.

ಹರೀಶ್ ಕುಮಾರ್ ಎಂಬವರಿಗೆ ಎಸ್.ಕೆ.ವರ್ಲ್ಡ್ ಅನ್ನೋ ಸಂಸ್ಥೆಯಿಂದ ಕರೆ ಬಂದಿತ್ತು. ನಿಮ್ಮ ಮೊಬೈಲ್ ನಂಬರ್ ಲಕ್ಕಿ ಡ್ರಾ ದಲ್ಲಿ ಆಯ್ಕೆಯಾಗಿದ್ದು 10 ಸಾವಿರ ರೂಪಾಯಿ ಬೆಲೆ ಬಾಳುವ ಮೊಬೈಲ್ ಬರೇ 1850 ರೂಪಾಯಿ ಪಾವತಿಸಿದರೆ ನಿಮಗೆ ಪೋಸ್ಟ್ ಮೂಲಕ ಕಳಿಸಲಾಗುವುದು ಎಂದು ಕರೆ ಮಾಡಿ ತಿಳಿಸಿದ್ದರು.
ಇದಕ್ಕೆ ಹರೀಶ್ ಕುಮಾರ್ ಸ್ಪಂದಿಸಿ ಮೊಬೈಲ್ ಕಳುಹಿಸಿಕೊಡುವಂತೆ ಸೂಚಿಸಿದ್ದರು.
ಆದರೆ ಅದ್ಯಾವಾಗ ಮೊಬೈಲ್ ಬಂದು ಕೈ ಸೇರಿತೋ ಅದಾಗಲೇ ಹರೀಶ್ ಕುಮಾರ್ ರವರಿಗೆ ಬಾಕ್ಸ್ ಕಂಡ ಕೂಡಲೇ ಮೋಸ ಹೋಗಿರುವುದು ಅರಿವಾಯಿತು.

ಆದರೂ ಹರೀಶ್ ಹಣ ಪಾವತಿಸಿ ಪಾರ್ಸಲ್ ಬಾಕ್ಸ್ ಪಡೆದಿದ್ದಾರೆ. ಪಾರ್ಸಲ್ ಬಾಕ್ಸ್ ನಲ್ಲಿ ಮೊಬೈಲ್ ಬದಲಿಗೆ ದೇವರ ವಿಗ್ರಹ, ದೀಪ, ಗಂಟಾಮಣಿ, ಆರತಿ ತಟ್ಟೆಗಳು ಕಂಡು ಒಂದು ಕ್ಷಣ ಹೌ ಹಾರಿದ್ದಾರೆ.
ತಕ್ಷಣ ಹರೀಶ್ ಕುಮಾರ್ ಪೋಸ್ಟ್ ಆಫೀಸ್ ಗೆ ಅರ್ಜಿಯೊಂದನ್ನು ಬರೆದು ತನಗಾದ ಅನ್ಯಾಯದ ಬಗ್ಗೆ ವಿವರಿಸಿ ತಾನು ನೀಡಿದ ಮೊತ್ತವನ್ನು ತಡೆ ಹಿಡಿಯುವಂತೆ ಕೋರಿದ್ದಾರೆ.

ಈ ರೀತಿಯ ವಂಚನೆ ಕುರಿತು ಎಷ್ಟೇ ಜಾಗೃತಿ ಮೂಡಿಸಿದರೂ ಜನರು ಮಾತ್ರ ಆಫರ್ ಗಳಿಗೆ ಮರುಳಾಗುತ್ತಲೇ ಇದ್ದಾರೆ. ವಂಚನೆಗೆ ಒಳಗಾದವರು ಅದರ ಬಗ್ಗೆ ಗೊಣಗುತ್ತಾ, ಕಳುಹಿಸಿದ ದೇವರ ಮೂರ್ತಿಗೆ ಗಂಟೆ ಆಡಿಸುತ್ತಾ, ಆರತಿ ಬೆಳಗುತ್ತಿರಿ ಎಂದು ವಂಚಕರು ಮೋಸ ಮಾಡುತ್ತಲೇ ಇರುತ್ತಾರೆ.
ಇಂತಹ ವಂಚನೆ ನಡೆಸುವವರಿಗೆ ಕಠಿಣ ಶಿಕ್ಷೆ ನೀಡುವ ಅಗತ್ಯವಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications