ಸಂಪನ್ನಗೊಂಡ ಉಡುಪಿ ಪರ್ಯಾಯ; ಸಾಕ್ಷಿಯಾದ ಭಕ್ತಸಾಗರ
ಉಡುಪಿ, ಜನವರಿ 18: ಉಡುಪಿಯ ಜನತೆಗೆ ನಿನ್ನೆ ರಾತ್ರಿಯಿಡೀ ಹಗಲಾಗಿತ್ತು. ಅದ್ದೂರಿಯಾಗಿ ಪರ್ಯಾಯ ಮಹೋತ್ಸವ ಸಂಪನ್ನಗೊಂಡಿತು. ಒಂದೆಡೆ ಅಷ್ಠಮಠಾಧೀಶರುಗಳು ಪರ್ಯಾಯ ಸಂಪ್ರದಾಯಗಳಲ್ಲಿ ಮುಳುಗಿದ್ದರೆ, ಇನ್ನೊಂದೆಡೆ ಅಲ್ಲಿ ನೆರೆದಿದ್ದ ಸಹಸ್ರ ಸಹಸ್ರ ಭಕ್ತರಿಗೆ ರಾತ್ರಿಯಿಡೀ ಸಡಗರ-ಸಂಭ್ರಮದಲ್ಲಿ ತೇಲಿದರು.
ಅದಮಾರು ಈಶಪ್ರಿಯ ಶ್ರೀಗಳ ಪೀಠಾರೋಹಣದೊಂದಿಗೆ ಉಡುಪಿಯಲ್ಲಿ 250 ನೇ ಪರ್ಯಾಯ ಸಂಪನ್ನಗೊಂಡಿತು. ಉಡುಪಿ ಸಹಿತ ನಾಡಿನ ಮೂಲೆಮೂಲೆಯ ಭಕ್ತರು ಪರ್ಯಾಯದ ಅದ್ದೂರಿತನ ಮತ್ತು ವೈಭವಕ್ಕೆ ಸಾಕ್ಷಿಯಾದರು.
ಮುಂಜಾನೆ ಪರ್ಯಾಯದ ಮೆರವಣಿಗೆ, ಸರ್ವಜ್ಞ ಪೀಠಾರೋಹಣ, ಅಕ್ಷಯಪಾತ್ರೆ ಹಸ್ತಾಂತರ ಕಾರ್ಯಕ್ರಮಗಳೊಂದಿಗೆ ಪರ್ಯಾಯದ ಒಂದು ಹಂತ ಮುಗಿಯಿತು.

ಅದಮಾರು ಶ್ರೀಗಳಿಂದ ಪೀಠಾರೋಹಣ
ಅದಮಾರು ಈಶಪ್ರಿಯ ಶ್ರೀಗಳು ಕೃಷ್ಣ ಪೂಜಾ ಅಧಿಕಾರ ಸ್ವೀಕರಿಸುವ ಶುಭಗಳಿಗೆಗೆ ನಾಡಿಗೆ ನಾಡೇ ಸಾಕ್ಷಿಯಾಯಿತು. ನಿನ್ನೆ ಸಂಜೆಯಿಂದ ಇಂದು ಮುಂಜಾನೆಯತನಕ ಉಡುಪಿಯಲ್ಲಿ ಅಕ್ಷರಶಃ ಹಬ್ಬದ ವಾತಾವರಣ ನೆಲೆಸಿತ್ತು.
ಈಶಪ್ರಿಯ ಶ್ರೀಗಳ ಪರ್ಯಾಯ ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ ಅತ್ಯಂತ ವೈಭವದಿಂದ ಜರುಗಿತು. ಉಡುಪಿಯ ಎಲ್ಲ ಬೀದಿಗಳಲ್ಲಿ ದೀಪಾಲಂಕಾರ ಮಾಡಿ ಕಂಗೋಳಿಸುವಂತೆ ಮಾಡಲಾಗಿತ್ತು. ಈ ಪರ್ಯಾಯವನ್ನು ಕಣ್ತುಂಬಿಕೊಳ್ಳಲು ನಾಡಿನ ವಿವಿಧೆಡೆಯಿಂದ ಭಕ್ತರು ಆಗಮಿಸಿದ್ದರು.

ಸಹಸ್ರ ಸಹಸ್ರ ಭಕ್ತರು ಸಾಕ್ಷಿಯಾದರು
ಇಂದು ಮುಂಜಾನೆ 5.57 ರ ಸುಮಾರಿಗೆ ಪಲಿಮಾರು ಶ್ರೀಗಳಿಂದ ಅಕ್ಷಯಪಾತ್ರೆ ಪಡೆದುಕೊಳ್ಳುವುದರೊಂದಿಗೆ ಮತ್ತು ಸರ್ವಜ್ನ ಪೀಠಾರೋಹಣಗೈಯುವುದರೊಂದಿಗೆ ಅದಮಾರು ಈಶಪ್ರಿಯ ಶ್ರೀಗಳು ಪ್ರಥಮ ಬಾರಿಗೆ ಪರ್ಯಾಯ ಪೀಠ ಏರಿದಂತಾಯಿತು. ಹಾಗೆಯೇ ಮಠದ ಪರಂಪರೆಯ 250 ನೇ ಪರ್ಯಾಯ ಸಂಪನ್ನಗೊಂಡಿತು.
ನಿನ್ನೆ ರಾತ್ರಿ ಭಕ್ತರು ಸಹಸ್ರೋಪಾದಿಯಲ್ಲಿ ಕೃಷ್ಣಮಠಕ್ಕೆ ಲಗ್ಗೆ ಇಡುವುದರೊಂದಿಗೆ ಪರ್ಯಾಯದ ಸಡಗರ ಮೊದಲುಗೊಂಡು, ಬಳಿಕ ನಿರ್ಗಮನ ಪಲಿಮಾರು ಶ್ರೀಗಳಿಗೆ ಸಂಪ್ರದಾಯದಂತೆ ಪೌರ ಸನ್ಮಾನ ನಡೆಯಿತು.

ಮೆರವಣಿಗೆಯಲ್ಲಿ ಸ್ತಬ್ಧಚಿತ್ರಗಳು, ಕಲಾಕೃತಿಗಳು
ತದನಂತರ ಕೃಷ್ಣಮಠದ ಸಡಗರ ನಗರದೆಲ್ಲೆಡೆ ಹಬ್ಬಿತ್ತು. ಪ್ರತೀ ಪರ್ಯಾಯ ಮಹೋತ್ಸವದ ಐತಿಹಾಸಿಕ ಮೆರವಣಿಗೆ ಜೋಡುಕಟ್ಟೆಯಿಂದ ಪ್ರಾರಂಭಗೊಂಡು ಕೃಷ್ಣ ಮಠಕ್ಕೆ ಸಾಗಿ ಬರಬೇಕು. ಈ ಸಮಯದಲ್ಲಿ ಮನೆಯಲ್ಲಿ ಕುಳಿತ ಮಠಾಧೀಶರುಗಳು ಪರ್ಯಾಯದ ಮೆರವಣಿಗೆಗೆ ಐತಿಹಾಸಿಕ ಮುದ್ರೆಯೊತ್ತುತ್ತಾರೆ.
ಮುಂಜಾನೆ ನಡೆದ ಮೆರವಣಿಗೆಯನ್ನು ನೋಡಿದವರಿಗೇ ಅದರ ವೈಭವ ಗೊತ್ತಾಗುತ್ತದೆ. ಸ್ತಬ್ಧಚಿತ್ರಗಳು, ವಿವಿಧ ಬಿರುದಾವಳಿಗಳು, ವಿವಿಧ ಸಾಂಸ್ಕೃತಿಕ ಕಲೆಗಳನ್ನು ಬಿಂಬಿಸುವ ಕಲಾಕೃತಿಗಳು ಭಕ್ತರನ್ನು ಭಾವಪರವಶರನ್ನಾಗಿಸಿದವು.

ಇಂದು ಮಧ್ಯಾಹ್ನ ಅಧಕೃತವಾಗಿ ಪರ್ಯಾಯ ಸಂಪನ್ನ
ಬೆಳಿಗ್ಗೆ 5 ಗಂಟೆ ಸುಮಾರಿಗೆ ಮೆರವಣಿಗೆ ಕೃಷ್ಣ ಮಠ ತಲುಪಿದ ಬಳಿಕ ಪರ್ಯಾಯ ಶ್ರೀಗಳಿಗೆ ಅಕ್ಷಯಪಾತ್ರೆ ಹಸ್ತಾಂತರ ವಿಧಿ ನಡೆಯಿತು. ಪಲಿಮಾರು ಶ್ರೀಗಳು ಅಕ್ಷಯಪಾತ್ರೆ ಮತ್ತು ಸಟ್ಟುಗವನ್ನು ಅದಮಾರು ಶ್ರೀಗಳಿಗೆ ಹಸ್ತಾಂತರಿಸಿದರು.
ಬಳಿಕ ಸರ್ವಜ್ನ ಪಿಠಾರೋಹಣ ವಿಧಿ ನೆರವೇರಿತು. ಪರ್ಯಾಯದ ಹಲವು ಸಾಂಪ್ರದಾಯಿಕ ವಿಧಿಗಳು ಜರುಗಿದ ಬಳಿಕ ರಾಜಾಂಗಣದಲ್ಲಿ ಇಂದು ಮಧ್ಯಾಹ್ನ ಪರ್ಯಾಯ ದರ್ಬಾರ್ ಕಾರ್ಯಕ್ರಮ ಅಧಿಕೃತವಾಗಿ ಸಂಪನ್ನಗೊಳ್ಳಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications