ಮಲ್ಪೆಯ ಸುಂದರ ಕಡಲ ತೀರದಲ್ಲಿ ಕೆಜಿಎಫ್-2 ಚಿತ್ರೀಕರಣ: ಯಶ್ ನೋಡಲು ನೂರಾರು ಅಭಿಮಾನಿಗಳು
ಉಡುಪಿ, ಅಕ್ಟೋಬರ್ 8: ಉಡುಪಿ ಜಿಲ್ಲೆ ಮಲ್ಪೆಯ ಸುಂದರ ಕಡಲ ತೀರದಲ್ಲಿ ಕನ್ನಡದ ಬಹುನಿರೀಕ್ಷೆಯ ಕೆಜಿಎಫ್-2 ಚಿತ್ರೀಕರಣ ನಡೆಯುತ್ತಿದೆ. ಉಡುಪಿಯ ಮಲ್ಪೆ, ಪಡುಕೆರೆ ಭಾಗದಲ್ಲಿ ಚಿತ್ರೀಕರಣವು ಆರಂಭಗೊಂಡಿದ್ದು, ಇನ್ನೂ ಎರಡು ದಿನಗಳ ಕಾಲ ಉಡುಪಿಯಲ್ಲಿ ಚಿತ್ರೀಕರಣ ನಡೆಯಲಿದೆ.
ಚಿತ್ರೀಕರಣದಲ್ಲಿ ನಾಯಕ ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ ಹಾಗೂ ಇತರರು ಭಾಗಿಯಾಗಿದ್ದಾರೆ. ಸಹಜವಾಗಿಯೇ ತಮ್ಮ ಫೇವರಿಟ್ ನಟನನ್ನು ನೋಡಲು ಪಡುಕೆರೆಯಲ್ಲಿ ಇಂದು ನೂರಾರು ಯಶ್ ಅಭಿಮಾನಿಗಳು ಸೇರಿದ್ದರು.

ಆದರೆ ಅಭಿಮಾನಿಗಳಿಗಾಗಲೀ, ಮಾಧ್ಯಮದವರಿಗಾಗಲೀ ಚಿತ್ರೀಕರಣ ಮತ್ತು ಫೋಟೋ ತೆಗೆಯಲು ಚಿತ್ರತಂಡ ಅವಕಾಶ ನೀಡಲಿಲ್ಲ. ಚಿತ್ರೀಕರಣದ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಯಶ್, Waves cant be stopped but you can learn to sail... After a long break.. Rocky sets sail from today. ಎಂದು ಬರೆದುಕೊಂಡಿದ್ದಾರೆ.

ವರದಿಗಾಗಿ ಬಂದಿದ್ದ ಪತ್ರಕರ್ತರು ಮತ್ತು ಸ್ಥಳದಲ್ಲಿದ್ದ ಬೌನ್ಸರ್ ಗಳ ನಡುವೆ ಶೂಟಿಂಗ್ ವಿಚಾರದಲ್ಲಿ ಮಾತಿನ ಚಕಮಕಿ ನಡೆಯಿತು. ಬಳಿಕ ಸ್ಪಷ್ಟೀಕರಣ ನೀಡಿದ ಚಿತ್ರತಂಡ, ಹೆಚ್ಚಿನ ನಿರೀಕ್ಷೆ ಇರುವ ಚಿತ್ರ ಇದು. ಮಾಧ್ಯಮಗಳಿಗೆ ಬೇಕಾದ ಮಾಹಿತಿಯನ್ನು ಮುಂದೆ ಚಿತ್ರತಂಡವೇ ಮಾಹಿತಿ ನೀಡಲಿದೆ ಎಂದು ಹೇಳಿತು.

Recommended Video
ಸ್ಥಳದಲ್ಲಿ ಸೇರಿರುವ ಅಭಿಮಾನಿಗಳಿಗೂ, ಬೌನ್ಸರ್ ಗಳು ಫೋಟೋ, ವಿಡಿಯೋ ತೆಗೆಯಲು ಅವಕಾಶ ನೀಡುತ್ತಿರಲಿಲ್ಲ. ಮಲ್ಪೆಯ ಸಮುದ್ರತೀರ, ಕಡಲದಂಡೆಯ ಕಲ್ಲು ಬಂಡೆಗಳ ಬಳಿ ಚಿತ್ರೀಕರಣ ನಡೆಯುತ್ತಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications