ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ: ತರಬೇತಿ ಶಿಬಿರದಿಂದ ರವಿಶಂಕರ್ ಗುರೂಜಿ, ಕರ್ಜಗಿ ಔಟ್
ಉಡುಪಿ, ಜೂನ್ 24: ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರ ನಡೆಸಲು ಸಂಪನ್ಮೂಲ ವ್ಯಕ್ತಿಗಳಾಗಿ ಅಹ್ವಾನಿಸಲಾಗಿದ್ದ ರವಿಶಂಕರ್ ಗುರೂಜಿ ಮತ್ತು ಶಿಕ್ಷಣ ತಜ್ಞ ಡಾ.ಗುರುರಾಜ ಕರ್ಜಗಿ ಅವರ ಹೆಸರನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ.
ಈ ಇಬ್ಬರ ಹೆಸರನ್ನು ರಾಜ್ಯ ಸರ್ಕಾರ ಕೈ ಬಿಡಲು ಸಾರ್ವಜನಿಕರ ಭಾರೀ ವಿರೋಧವೇ ಕಾರಣ ಎಂದು ಹೇಳಲಾಗಿದೆ. ಗುರುರಾಜ ಕರ್ಜಗಿ ಅವರ ಬದಲಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಮತ್ತು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಭಾಷಣಕ್ಕೆ ಆಹ್ವಾನಿಸಲಾಗಿದೆ.

ಜೂನ್ 26 ರಿಂದ ಜೂನ್ 29 ತನಕ ಈ ಶಿಬಿರ ನೆಲಮಂಗಲದ ಬಳಿಕ ಧರ್ಮಸ್ಥಳ ಕ್ಷೇಮ ವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ, ಮಹಮ್ಮದ್ ಕುಂಞ, ಮತ್ತು ವೀಣಾ ಅವರು ನೂತನ ಶಾಸಕರಿಗೆ ಪ್ರವಚನ ನೀಡಲಿದ್ದಾರೆ.
ರವಿಶಂಕರ್ ಗುರೂಜಿ ಅವರ ಹೆಸರು ಕೈ ಬಿಟ್ಟಿರೋದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಉಡುಪಿಯಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ರವಿಶಂಕರ್ ಗುರೂಜಿ, ಗುರುರಾಜ್ ಕರ್ಜಗಿಯನ್ನು ಆಹ್ವಾನಿಸಿದ್ದರು. ಯಾರದ್ದೋ ಒತ್ತಡ ಉಂಟು, ಕರೆಯೋದಿಲ್ಲ ಎಂದು ಸ್ಪೀಕರ್ ಖಾದರ್ ಹೇಳುತ್ತಿದ್ದಾರೆ. ಡಾ. ವೀರೇಂದ್ರ ಹೆಗ್ಗಡೆ ಎಂಪಿ ಅಲ್ಲದಿದ್ದರೆ ಕರೆಯೋದಿಲ್ಲ ಎಂದು ಹೇಳಿಕೆಗಳನ್ನು ಕೊಡುತ್ತಾರೆ. ಸ್ಪೀಕರ್ ಎಲ್ಲಾ ಧರ್ಮ, ಎಲ್ಲಾ ಪಕ್ಷ ಸಮಾಜವನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದರು.
ಇನ್ನು ಯಾವ ಆಧಾರದಲ್ಲಿ ಕೈಬಿಟ್ಟಿದ್ದೀರಿ? ಕೈಬಿಡಲು ಮಾನದಂಡ ಏನು? ರವಿಶಂಕರ್ ಗುರೂಜಿ- ಕರ್ಜಗಿಯನ್ನು ಕೈ ಬಿಟ್ಟಿದ್ದಕ್ಕೆ ನಾವು ಖಂಡಿಸುತ್ತೇವೆ. ಇಬ್ಬರ ಹೆಸರನ್ನು ಪುನರ್ ಪರಿಶೀಲನೆ ಮಾಡಿ, ಅಪಮಾನ ಮಾಡಬೇಡಿ. ಪ್ರಗತಿಪರರು ಏನು ಹೇಳಿದ್ದರು ಮಾಡುತ್ತೇವೆ ಎಂದರೆ ಇದು ಸರಿಯಲ್ಲ. ಎಡಪಂಥೀಯರು ಹೇಳಿದರು ಎಂದು ಪಠ್ಯಪುಸ್ತಕ, ಗೋ ಹತ್ಯೆ ನಿಷೇಧ, ಮತಾಂತರ ಕಾಯ್ದೆ ವಾಪಾಸ್ ತೆಗೆದುಕೊಳ್ಳುತ್ತೀರಿ ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಈ ಗೊಂದಲಗಳ ಬಗ್ಗೆ ಯುಟಿ ಖಾದರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಆಧ್ಯಾತ್ಮಿಕ ಚಿಂತಕರಿಗೆ ಆಹ್ವಾನ ನೀಡಿದ್ದೇವೆ. ಎಲ್ಲಾ ಸಂಪನ್ಮೂಲ ವ್ಯಕ್ತಿಗಳು ಇನ್ನೂ ನಮಗೆ ಸಮ್ಮತಿ ಸೂಚಿಸಿಲ್ಲ. ಕೆಲವರು ಮಾತ್ರ ಒಪ್ಪಿಗೆ ನೀಡಿದ್ದಾರೆ. ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಈ ಬಗ್ಗೆ ಈಗಾಗಲೇ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ವ್ಯತಿರಿಕ್ತವಾದ ಮಾತುಗಳು ಕೇಳಿಬರುತ್ತಿದೆ. ತರಬೇತಿ ಶಿಬಿರವನ್ನು ನೋಡದೆ ಈಗಲೇ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದರು.
ಆ ತರಬೇತಿ ಶಿಬಿರದಲ್ಲಿ ಏನಾದರೂ ಕುಂದುಕೊರತೆಗಳಿದಲ್ಲಿ ಸಲಹೆ ಸೂಚನೆಗಳನ್ನು ನೀಡಿದ್ದಲ್ಲಿ ಸರಿಪಡಿಸುತ್ತೇವೆ. ಈಗಲೇ ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ತಪ್ಪು. ಶ್ರೀ ರವಿಶಂಕರ್ ಗುರೂಜಿಯವರನ್ನು ನಾನು ಭೇಟಿ ಮಾಡಿದ ತಕ್ಷಣ ನಾನು ತರಬೇತಿ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ ಎಂದು ಗುಲ್ಲೆಬ್ಬಿಸುವುದು ತಪ್ಪು. ನನಗೆ ಹಿಂದಿನಿಂದಲೂ ಅವರೊಂದಿಗೆ ಆತ್ಮೀಯ ಒಡನಾಡಿಯಾಗಿದ್ದೇನೆ. ಅಲ್ಲದೆ ಅವರು ಈಗ ಅಮೇರಿಕಾದಲ್ಲಿ ದೊಡ್ಡಮಟ್ಟದ ಕಾರ್ಯಕ್ರಮದ ಹಿಂದಿದ್ದಾರೆ. ದೇಶದಲ್ಲಿಯೇ ಇಲ್ಲದ ಅವರ ಬಗ್ಗೆ ಇಲ್ಲಸಲ್ಲದ ಮಾತನಾಡುವುದು ತಪ್ಪು ಎಂದು ಹೇಳಿದರು.
ಅಲ್ಲದೇ ಈ ಬಗ್ಗೆ ನನ್ನಲ್ಲಿ ಸ್ಪಷ್ಟೀಕರಣ ಕೇಳದೆ ಹೇಳಿಕೆಗಳನ್ನು ಕೊಡುವವರಿಗೆ ನಾನೇನು ಹೇಳಲು ಹೋಗುವುದಿಲ್ಲ. ಆದ್ದರಿಂದ ತರಬೇತಿ ಕ್ಯಾಂಪ್ ಮುಗಿದ ಬಳಿಕ ಅದರ ಸಾಧಕ ಬಾಧಕಗಳು, ಸಲಹೆ ಸೂಚನೆಗಳನ್ನು ನೀಡಿದರೆ ಅದನ್ನು ಸ್ವಾಗತಿಸಲು ತಯಾರಿದ್ದೇವೆ ಎಂದು ಯು.ಟಿ.ಖಾದರ್ ಹೇಳಿದ್ದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications