ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಇಲ್ಲ: ಸಿದ್ದರಾಮಯ್ಯ
ಉಡುಪಿ, ನವೆಂಬರ್ 19: ರಾಜ್ಯದಲ್ಲಿ ಸಂಪೂರ್ಣ ಮದ್ಯ ಮಾರಾಟ ನಿಷೇಧಿಸುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಉಡುಪಿಯಲ್ಲಿ ಡಾ.ಬಿ.ಆರ್. ಶೆಟ್ಟಿ ನಿರ್ಮಿಸಿರುವ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, "ಕೆಪಿಎಂಇ ತಿದ್ದುಪಡಿ ಮಸೂದೆಯನ್ನು ಸೋಮವಾರ ಅಧಿವೇಶನದಲ್ಲಿ ಮಂಡಿಸಲಾಗುವುದು," ಎಂದು ಪ್ರತಿಕ್ರಿಯೆ ನೀಡಿದರು.
"ವೈದ್ಯರ ಹೋರಾಟದಲ್ಲಿ ಯಾರೂ ಸೋತಿಲ್ಲ; ಯಾರೂ ಗೆದ್ದಿಲ್ಲ. ಮಸೂದೆ ಜಾರಿಯಾದರೆ ಅದು ರಾಜ್ಯದ ಜನತೆಯ ಗೆಲುವು," ಎಂದು ಮುಖ್ಯಮಂತ್ರಿಗಳು ವಿಶ್ಲೇಷಿಸಿದರು.

ಇನ್ನು ಉಡುಪಿ ಕೃಷ್ಣ ಮಠದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, "ನಾನು ಕೃಷ್ಣಮಠಕ್ಕೆ ಹೋಗಲ್ಲ. ಈ ಬಾರಿ ನನಗೆ ಕೃಷ್ಣ ಮಠಕ್ಕೆ ಭೇಟಿ ನೀಡುವಂತೆ ಯಾವುದೇ ಆಹ್ವಾನ ಬಂದಿಲ್ಲ. ಕಾಗಿನೆಲೆ ಸ್ವಾಮೀಜಿ ಮಠಕ್ಕೆ ಬಂದು ಹೋಗಿದ್ದಾರೆ. ನಾನೇನೂ ಯಾರನ್ನೂ ಮಠಕ್ಕೆ ಹೋಗಬೇಡಿ ಎಂದು ಹೇಳಿಲ್ಲ. ಯಾರು ಬೇಕಾದರೂ ಮಠ ದೇವಸ್ಥಾನಕ್ಕೆ ಹೋಗಬಹುದು. ಅದು ಅವರವರ ನಂಬಿಕೆಗೆ ಬಿಟ್ಟದ್ದು. ನಾನು ಉದ್ದೇಶಪೂರ್ವಕವಾಗಿ ಮಠಕ್ಕೆ ಹೋಗದೆ ಇರುವುದಲ್ಲ," ಎಂದು ತಿಳಿಸಿದರು.
'ನನಗೆ ಕೃಷ್ಣ ಮಠದ ಬಗ್ಗೆ ಯಾವುದೇ ದ್ವೇಷ ಇಲ್ಲ. ಪೇಜಾವರ ಶ್ರೀಗಳ ಜೊತೆಯೂ ಯಾವುದೇ ಸಂಘರ್ಷವಿಲ್ಲ. ರಾಜ್ಯದ ಆರೂವರೆ ಕೋಟಿ ಜನರ ಜತೆಗೂ ನಾನು ಚೆನ್ನಾಗಿದ್ದೇನೆ' ಎಂದು ಅವರು ಸ್ಪಷ್ಟಪಡಿಸಿದರು.
"ಈ ಹಿಂದೆ ನಾನು ಮಠಕ್ಕೆ ಹೋಗಿದ್ದೆ. ನಾನು ಶಿವಭಕ್ತನೂ ಹೌದು, ಕೃಷ್ಣ ಭಕ್ತನೂ ಹೌದು. ದೇವನೊಬ್ಬನೇ ನಾಮ ಹಲವು ಎಂದು ನಂಬಿದವನು," ಎಂದು ಸಿದ್ದರಾಮಯ್ಯ ವಿವರಿಸಿದರು.
'ನನ್ನ ವಿರುದ್ಧ ಬಿಜೆಪಿಯವರು ಅಪಪ್ರಚಾರ ಮಾಡಲಿ. ಅದು ಅವರಿಗೇ ನೆಗೆಟಿವ್ ಆಗುತ್ತದೆ. ರಾಜ್ಯದ ಜನ ಎಲ್ಲದನ್ನೂ ತೀರ್ಮಾನ ಮಾಡುತ್ತಾರೆ,' ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೇ ಲಿಂಗಾಯತ ಸಮಾವೇಶದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು, "ಇದಕ್ಕೂ ನನಗೂ ಸಂಬಂಧವಿಲ್ಲ. ಅವರು ಡಿಸೆಂಬರ್ 31ರ ಗಡುವು ಕೊಟ್ಟಿರುವ ಬಗ್ಗೆಯೂ ನನಗೆ ಗೊತ್ತಿಲ್ಲ," ಎಂದು ಮಾಹಿತಿ ನೀಡಿದರು.
ಇಂದಿರಾ ಕ್ಯಾಂಟೀನ್ ಕಳಪೆ ಗುಣಮಟ್ಟ ಅಕ್ಕಿ ಪೂರೈಕೆ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಒಟ್ಟಾರೆ ಈ ಆರೋಪವೇ ಸರಿಯಾದುದಲ್ಲ. ಗ್ರಾಹಕರಿಂದ ಈ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ," ಎಂದರು.
ಆಸ್ಪತ್ರೆ ಉದ್ಘಾಟನೆ
ನಂತರ ಮುಖ್ಯಮಂತ್ರಿಗಳು ಉಡುಪಿಯ ನಗರ ಭಾಗದಲ್ಲಿ ನಿರ್ಮಿಸಲಾದ ಅರೆ ಸರ್ಕಾರಿ ಆಸ್ಪತ್ರೆ ಕಟ್ಟಡ ಉದ್ಘಾಟಿಸಿದರು.
'ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ'ಯನ್ನು ದೀಪ ಬೆಳಗಿಸಿ, ರಿಬ್ಬನ್ ಕಟ್ ಮಾಡಿ ಸಿ.ಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು.
ಆರೋಗ್ಯ ಸಚಿವ ರಮೇಶ್ ಕುಮಾರ್, ಆಹಾರ ಸಚಿವ ಯು.ಟಿ ಖಾದರ್, ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ ಜಾರ್ಜ್, ಬಿ.ಆರ್.ವೆಂಚರ್ಸ್ ಸಂಸ್ಥೆಯ ಮುಖ್ಯಸ್ಥ ಬಿ.ಆರ್.ಶೆಟ್ಟಿ ಈ ಸಂದರ್ಭ ಉಪಸ್ಥಿತರಿದ್ದರು.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications