ಕಾಪು ಕಡಲ ಕಿನಾರೆಯಲ್ಲಿ ರಾಶಿ ರಾಶಿ ಬೊಲೆಂಜಿರ್ ಮೀನುಗಳು!
ಉಡುಪಿ, ಸೆಪ್ಟೆಂಬರ್.06: ಉಡುಪಿಯಲ್ಲಿ ಬುಧವಾರ ಮೀನು ಪ್ರಿಯರಿಗೆ ಸುಗ್ಗಿಯೋ ಸುಗ್ಗಿ. ಕಾಪು ಕಡಲ ಕಿನಾರೆಯಲ್ಲಿ ಸಮುದ್ರದ ಅಲೆಗಳೊಂದಿಗೆ ದಡಕ್ಕೆ ರಾಶಿ ರಾಶಿ ಮೀನುಗಳು ಬಂದು ಬಿದ್ದಿದ್ದು, ಅಕ್ಷರಶಃ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು.
ಕಾಪು ತಾಲೂಕಿನ ಹೆಜಮಾಡಿಯಲ್ಲಿರುವ ಕೋಡಿ ಕಡಲ ಕಿನಾರೆಯಲ್ಲಿ ಸಮುದ್ರದಲೆಗಳೊಂದಿಗೆ ದಡಕ್ಕೆ ಅಪ್ಪಳಿಸಿದ ಬೊಲೆಂಜಿರ್ ಮೀನು ಅಥವಾ ಸಿಲ್ವರ್ ಫಿಶ್ ಗಳ ರಾಶಿಯತ್ತ ಜನಸಾಗರವೇ ಹರಿದುಬಂದಿತ್ತು.
ಮಳೆಗಾಲದ ಸಂದರ್ಭದಲ್ಲಿ ಪ್ರತೀ ವರ್ಷ ಮೀನುಗಳು ದಡಕ್ಕೆ ಅಪ್ಪಳಿಸುವುದು ಸಾಮಾನ್ಯ . ಆದರೆ ಈ ಬಾರಿ ಟನ್ ಗಟ್ಟಲೆ ಬೊಲೆಂಜಿರ್ ಮೀನುಗಳು ದಡಕ್ಕಪ್ಪಳಿಸಿವೆ.

ಕಾಪು ಕಡಲ ಕಿನಾರೆಯ ಒಂದು ಕಿಲೋಮೀಟರ್ ವರೆಗೂ ಮೀನುಗಳು ದಡಕ್ಕೆ ಅಪ್ಪಳಿಸಿದ್ದು, ಸಮುದ್ರ ಕಿನಾರೆಗೆ ದೌಡಾಯಿಸಿದ ಜನರು ಮೀನುಗಳನ್ನು ತಾ ಮುಂದು ನಾ ಮುಂದು ಎಂಬಂತೆ ಬುಟ್ಟಿ, ಗೋಣಿ, ರಿಕ್ಷಾ,ಟೆಂಪೋ, ವ್ಯಾನ್ ಗಳಲ್ಲಿ ತುಂಬಿಸಿಕೊಂಡು ಹೋಗುವ ದೃಶ್ಯ ಸಾಮಾನ್ಯವಾಗಿತ್ತು.

ಇಷ್ಟು ಪ್ರಮಾಣದಲ್ಲಿ ಮೀನು ಸಿಕ್ಕಿರುವುದು ಸ್ಥಳೀಯರಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications