ಮೂರನೇ ಮದುವೆಯಾದ ಭೂಪನಿಂದ ಪತ್ನಿಗೆ ಚಿತ್ರಹಿಂಸೆ, ಪತ್ನಿಯಿಂದ ದೂರು ದಾಖಲು
ಉಡುಪಿ, ಆಗಸ್ಟ್ 30: ವಂಚಿಸಿ ಮೂರನೇ ಮದುವೆಯಾಗಿ, ಬಳಿಕ ಪತ್ನಿಗೆ ವರದಕ್ಷಿಣೆ ಕಿರುಕುಳ, ಚಿತ್ರಹಿಂಸೆ ನೀಡಿದ ಪತಿ ವಿರುದ್ಧ ಪತ್ನಿ ಠಾಣೆ ಮೆಟ್ಟಿಲೇರಿದ್ದಾರೆ.
ಎಂಟು ತಿಂಗಳ ಹಿಂದೆ ವಿವಾಹವಾಗಿದ್ದ ಪತ್ನಿಗೆ ವರದಕ್ಷಿಣೆ ನೀಡುವಂತೆ ಕಿರುಕುಳ ನೀಡಿದ್ದಲ್ಲದೇ ಮನೆಯವರೆಲ್ಲರೂ ಸೇರಿ ಹಲ್ಲೆ ನಡೆಸಿದ ಪ್ರಕರಣ ಇದಾಗಿದೆ. ಈ ಸಂಬಂಧ ನೊಂದ ಪತ್ನಿ ಕುಂದಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕುಂದಾಪುರ ತಾಲೂಕು ವಕ್ವಾಡಿ ಗ್ರಾಮದ ನೂರ್ ಜಹಾನ್ (25) ಎಂಬಾಕೆ ದೂರು ನೀಡಿದ ಮಹಿಳೆ.
ಈಕೆ ಭಟ್ಕಳದ ರಿಯಾಜ್ ಎಂಬಾತನನ್ನು 2018ರ ಡಿಸೆಂಬರ್ 23ರಂದು ಮದುವೆಯಾಗಿದ್ದರು. ಮದುವೆಯ ಬಳಿಕ ಜಹಾನ್ ಗಂಡನ ಮನೆಯಲ್ಲಿಯೇ ಇದ್ದರು. ಆ ಸಂದರ್ಭದಲ್ಲಿ ಜಹಾನಳ ಗಂಡ ರಿಯಾಜ್, ಮಾವ, ಅತ್ತೆ ಹಾಗು ನಾದಿನಿಯರು ವರದಕ್ಷಿಣಿ ಹಣ, ಚಿನ್ನ ತಂದುಕೊಡುವಂತೆ ಹಿಂಸೆ ನೀಡಿದ್ದಾರೆ.

ಆಗಸ್ಟ್ 27ರಂದು ಇವರೆಲ್ಲರೂ ಸೇರಿಕೊಂಡು ತನ್ನನ್ನು ವರದಕ್ಷಿಣೆ ತರುವಂತೆ ಬೈದು ಹಲ್ಲೆ ನಡೆಸಿದ್ದಾಗಿ ನೂರ್ ಜಹಾನ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಕುಂದಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿದ ನೂರ್ ಜಹಾನ್, "ಗಂಡ, ಅತ್ತೆ, ಮಾವ, ನಾದಿನಿಯರು ಸೇರಿ ನನಗೆ ನಿರಂತರವಾಗಿ ಚಿತ್ರಹಿಂಸೆ ನೀಡುತ್ತಿದ್ದಾರೆ. ಗಂಡ ರಿಯಾಝ್ ಅವರಿಗೆ ನಾನು ಮೂರನೇ ಹೆಂಡತಿ. ಇದಕ್ಕೂ ಮೊದಲು ಇಬ್ಬರನ್ನು ಮದುವೆಯಾಗಿ ವರದಕ್ಷಿಣೆ ಹಿಂಸೆ ನೀಡಿ ಅವರು ಬಿಟ್ಟು ಹೋಗಿದ್ದರು. ಒಬ್ಬಾಕೆಗೆ ಒಂದು ಮಗು ಕೂಡ ಇದೆ. ಮೊನ್ನೆ ಎಲ್ಲರೂ ಸೇರಿ ನನ್ನ ಮೇಲೆ ಹಲ್ಲೆ ಮಾಡಿದರು. ನಾನು ತಪ್ಪಿಸಿಕೊಂಡು ಹೊರಗೆ ಓಡಿ ಬಂದೆ. ನನಗೆ ನ್ಯಾಯ ಕೊಡಿಸಿ" ಎಂದು ಆಗ್ರಹಿಸಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications