ಇಂಗ್ಲಿಷ್ ಭಾಷೆಯಿಂದ ಉಳಿದುಕೊಂಡ ಕನ್ನಡ ಸರಕಾರಿ ಶಾಲೆಯಿದು!
ಉಡುಪಿ, ಆಗಸ್ಟ್ 9: ಇಂಗ್ಲಿಷ್ ಭಾಷೆಯನ್ನು ಒಂದು ವಿಷಯವಾಗಿ ಪರಿಚಯಿಸಿದ ಕಾರಣಕ್ಕೆ ಒಂದು ಸರಕಾರಿ ಶಾಲೆ ಮುಚ್ಚುವುದರಿಂದ ತಪ್ಪಿದ ವರದಿ ಇದು. ವಿಷಯ ಏನಪ್ಪಾ ಅಂದರೆ, ಉಡುಪಿ ಜಿಲ್ಲೆಯ ಬೈಂದೂರಿನ ಬಾಡಾ ಹಿರಿಯ ಪ್ರಾಥಮಿಕ ಶಾಲೆಯು ಇನ್ನೇನು ಮುಚ್ಚಬೇಕು ಎಂಬ ಸ್ಥಿತಿ ತಲುಪಿತ್ತು. ಅದಕ್ಕೆ ಕಾರಣವಾಗಿ ಇದ್ದಿದ್ದು ವಿದ್ಯಾರ್ಥಿಗಳ ಸಂಖ್ಯೆಯ ಕೊರತೆ.
ಆದರೆ, ಇಲ್ಲಿ ಯಾವಾಗ ಇಂಗ್ಲಿಷ್ ಅನ್ನು ಒಂದು ಬೋಧನಾ ವಿಷಯವಾಗಿ ಪರಿಚಯಿಸಲಾಯಿತೋ ಆಗಿಂದ ಪರಿಸ್ಥಿತಿ ಬದಲಾಯಿತು. ಕಳೆದ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಎರಡಕ್ಕೆ ಕುಸಿದು ಹೋಗಿತ್ತು. ಅದೇ ಈಗ 62 ತಲುಪಿದೆ. ಇಲ್ಲಿರುವುದು ಕನ್ನಡ ಮಾಧ್ಯಮ ಶಾಲೆ. 95 ವರ್ಷದಷ್ಟು ಹಳೆಯದು. ಈ ಶಾಲೆಯ ಆಟದ ಮೈದಾನ ಬಹಳ ಪ್ರಸಿದ್ಧಿ ಪಡೆದಿದೆ.
ಇಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುವ ಮುನ್ನ ಇಲ್ಲಿಂದಲೇ ಕಲಿತು, ವಿದ್ಯಾವಂತರಾಗಿ ವಿಜ್ಞಾನಿಗಳು, ಕ್ರೀಡಾಳುಗಳು, ವೈದ್ಯರು ಹಾಗೂ ಎಂಜಿನಿಯರ್ ಗಳಾದ ಸಾಕಷ್ಟು ಮಂದಿ ಇದ್ದಾರೆ. ಒಂದು ಕಾಲದಲ್ಲಿ ಈ ಶಾಲೆಯಲ್ಲಿ ಎಂಟುನೂರು ವಿದ್ಯಾರ್ಥಿಗಳು ಇದ್ದರು. ಆದರೆ ಯಾವಾಗ ಇಂಗ್ಲಿಷ್ ಮೀಡಿಯಂ ಶಾಲೆಗಳು ಹೆಚ್ಚಾದವೋ ಅಲ್ಲಿಂದ ಆಚೆಗೆ ಪರಿಸ್ಥಿತಿ ಬದಲಾಯಿತು.

ಈ ಶಾಲೆಯಲ್ಲೇ ಓದಿದ ವಿದ್ಯಾರ್ಥಿಗಳು ಒಂದು ಸಂಘ ಮಾಡಿಕೊಂಡು, ಈ ಶಾಲೆಯನ್ನು ಉಳಿಸುವ ಪ್ರಯತ್ನ ಮಾಡಿದರು. ಅದರ ಭಾಗವಾಗಿ ಇಂಗ್ಲಿಷ್ ವ್ಯಾಕರಣ ಮತ್ತು ಸಾಮಾನ್ಯಜ್ಞಾನ ಹೇಳಿಕೊಡುವ ನಿರ್ಧಾರವಾಯಿತು. ಆ ಹಳೇ ವಿದ್ಯಾರ್ಥಿಗಳ ಸಂಘದ ಮೂಲಕವೇ ಇಬ್ಬರು ಶಿಕ್ಷಕರನ್ನು ಕೂಡ ಪರಿಚಯಿಸಲಾಯಿತು. ಅದೇ ವರ್ಷ ಇಪ್ಪತ್ನಾಲ್ಕು ವಿದ್ಯಾರ್ಥಿಗಳು ಸೇರಿದರು ಎನ್ನುತ್ತಾರೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್.
ಈ ಶಾಲೆಯ ಚೇತರಿಕೆಗೆ ಹಳೆ ವಿದ್ಯಾರ್ಥಿಗಳ ಕೊಡುಗೆ ಕೂಡ ತುಂಬ ದೊಡ್ಡದಿದೆ. ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರುವುದಕ್ಕೆ ಟೆಂಪೋ ವ್ಯವಸ್ಥೆ ಮಾಡಲಾಗಿದೆ. ಅದರ ಚಾಲಕರಿಗೆ ಸಂಘದಿಂದಲೇ ವೇತನ ಕೊಡಲಾಗುತ್ತಿದೆ. ವಾರದಲ್ಲಿ ಮೂರು ದಿನ ವಿದ್ಯಾರ್ಥಿಗಳಿಗೆ ಯೋಗ ತರಗತಿಗಳು ಇರುತ್ತವೆ. ಕಳೆದ ವರ್ಷ ಸರಕಾರದಿಂದ ಸಮವಸ್ತ್ರ ಬರುವುದು ತಡವಾದಾಗ ಈ ಸಂಘದಿಂದಲೇ ಹಣ ಒಗ್ಗೂಡಿಸಿ, ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರ ನೀಡಲಾಗಿದೆ.
ವಿದ್ಯಾರ್ಥಿಗಳಿಗಾಗಿ ವಾಟರ್ ಪ್ಯೂರಿಫೈಯರ್, ಆಟದ ವಸ್ತುಗಳು ಕೂಡ ವ್ಯವಸ್ಥೆ ಮಾಡಿರುವ ಬಗ್ಗೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಬಗ್ಗೆ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಿ.ಕೆ.ಜಯನಂದ ಇವೆಲ್ಲ ತಮ್ಮ ಕರ್ತವ್ಯ ಎಂಬಂತೆ ಹೇಳುತ್ತಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications