ಜ 14ರಿಂದ ಮಾರಣಕಟ್ಟೆ ಜಾತ್ರೆ: ವಾಯ್ ಎಲ್ಲಾ ಬರ್ಕ್ ಮಾರ್ರೇ
ಉಡುಪಿ, ಜ 14: ಸೇವಂತಿಗೆ ಹೂ ಮತ್ತು ಗಂಟೆಪ್ರಿಯ, ನಾಡಿನ ಪ್ರಮುಖ ದೈವಸ್ಥಾನಗಳಲ್ಲೊಂದಾದ ಐತಿಹಾಸಿಕ ಶ್ರೀಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಾಲಯದ ಮೂರು ದಿನಗಳ ವಾರ್ಷಿಕ ಮಕರಸಂಕ್ರಾಂತಿ ಜಾತ್ರೆ ಗುರುವಾರದಿಂದ (ಜ14) ಆರಂಭವಾಗಲಿದೆ.
ಉಡುಪಿ ಜಿಲ್ಲೆ, ಕುಂದಾಪುರದಿಂದ ವಂಡ್ಸೆ ಮೂಲಕ ಕೊಲ್ಲೂರಿಗೆ ಹೋಗುವ ಮಾರ್ಗದಲ್ಲಿರುವ ಈ ದೇವಾಲಯಕ್ಕೆ 28ನೇ ದ್ವಾಪರ ಯುಗದ ವೈವಸ್ವತ ಮನ್ವಂತರದ ಇತಿಹಾಸವಿದೆ. ದೇವಸ್ಥಾನದ ಸಮೀಪದಲ್ಲಿ 'ಬ್ರಹ್ಮಕುಂಡ' ಎಂಬ ಸಣ್ಣ ನದಿಯು ಹರಿಯುತ್ತದೆ. (ಪೇಜಾವರರ ಪರ್ಯಾಯಕ್ಕೆ ಯಾರ್ಯಾರು ಬರ್ತಾರೆ)

ಗುರುವಾರ ಅಭಿಜಿನ್ ಮಹೂರ್ತದಲ್ಲಿ ಮಧ್ಯಾಹ್ನ ಹನ್ನೆರಡು ಗಂಟೆಗೆ ಬ್ರಹ್ಮಲಿಂಗೇಶ್ವರ ದೈವಸ್ಥಾನಕ್ಕೆ ಮಹಾಮಂಗಳಾರತಿಯ ಮೂಲಕ ಮೂರು ದಿನಗಳ ವಿಜೃಂಭಣೆಯ ಜಾತ್ರೆಗೆ ಚಾಲನೆ ಸಿಗಲಿದೆ.
ಮೂಲೋಕದೊಡತಿ ಮೂಕಾಂಬಿಕೆಯಿಂದ ಮಡಿದ ಮೂಕಾಸುರ, ದೇವಿಯಿಂದ ವರ ಪಡೆದು ಕಾರಣೀಕ ದೈವ ಬ್ರಹ್ಮಲಿಂಗೇಶ್ವರನಾಗಿ ಮಾರಣಕಟ್ಟೆಯಲ್ಲಿ ನೆಲೆಸಿದ್ದಾನೆ ಎನ್ನುತ್ತದೆ ಪುರಾಣ.
ಉಡುಪಿ ಜಿಲ್ಲೆಯ ಬಹಳಷ್ಟು ಕುಟುಂಬಗಳಿಗೆ ಮನೆದೇವರಾಗಿರುವ ಬ್ರಹ್ಮಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೆಗೆ ಶತಮಾನಗಳ ಇತಿಹಾಸವಿದೆ.
ಆದಿ ಶಂಕರಾಚಾರ್ಯರು, ಕೊಲ್ಲೂರಿನಲ್ಲಿ ತಾಯಿ ಮೂಕಾಂಬಿಕೆಯ ಇಷ್ಟ ವಿಗ್ರಹವನ್ನು ಪಂಚಲೋಹಗಳಲ್ಲಿ ಪ್ರತಿಷ್ಟಾಪಿಸಿದ ನಂತರ ಮಾರಣಕಟ್ಟೆಗೆ ಬಂದು ಬ್ರಹ್ಮಲಿಂಗೇಶ್ವರನ ಸನ್ನಿಧಿಯಲ್ಲಿ ಶ್ರೀ ಚಕ್ರ ಸ್ಥಾಪಿಸಿದರು ಎನ್ನುವ ಪ್ರತೀತಿಯಿದೆ.
ಬ್ರಹ್ಮಲಿಂಗೇಶ್ವರನ ಸನ್ನಿಧಿಯಲ್ಲಿ ಹರಕೆಯ ಯಕ್ಷಗಾನ ಬಯಲಾಟ, ರಂಗಪೂಜೆ, ಚರುವಿನ ಪೂಜೆ, ಹೂವಿನ ಪೂಜೆ, ಮಂಗಳಾರತಿ, ಹರಿವಾಣ ನೈವೇದ್ಯ ಮೊದಲಾದ ಪೂಜೆ ಸಲ್ಲಿಸುವುದು ವಾಡಿಕೆ.

ಅಲ್ಲದೇ, ಸನ್ನಿಧಿಯಲ್ಲಿ ಶ್ರೀ ಯಕ್ಷೆ, ಹೈಗುಳಿ, ಚಿಕ್ಕು ದೇವತೆಗಳ ಗುಡಿಯೂ ಇದ್ದು, ಕುಟುಂಬಗಳ ನಡುವಿನ ವಾಕ್ ತೀರ್ಮಾನಕ್ಕೂ ಕ್ಷೇತ್ರಕ್ಕೂ ಪ್ರಸಿದ್ದಿಯಾಗಿದೆ.
ಮೂರು ದಿನಗಳ ಜಾತ್ರೆಯ ಕಾರ್ಯಕ್ರಮ ಪಟ್ಟಿ ಇಂತಿದೆ:
14.01.2016
ಮಧ್ಯಾಹ್ನ 12ಗಂಟೆಗೆ: ಮಹಾಮಂಗಳಾರತಿ
ರಾತ್ರಿ: 10.30ಕ್ಕೆ ಗೆಂಡಸೇವೆ
15.01.2016
ಬೆಳಗ್ಗೆ 9.30: ಮಹಾಮಂಗಳಾರತಿ, ಮಂಡಲಸೇವೆ
16.01.2016
ಬೆಳಗ್ಗೆ 9.30: ಮಹಾಮಂಗಳಾರತಿ , ಮಂಡಲಸೇವೆ
ರಾತ್ರಿ 10: ಕಡುಬು ನೈವೇದ್ಯ, ಮಹಾಮಂಗಳಾರತಿ
ಇದಾದ ನಂತರ ಶ್ರೀಬ್ರಹ್ಮಲಿಂಗೇಶ್ವರ ದಶಾವತಾರ ಯಕ್ಷಗಾನ ಮೇಳದವರಿಂದ ಸೇವೆ ಬಯಲಾಟ ನಡೆಯಲಿದೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications