ಪ್ರಮೋದ್ ಮಧ್ವರಾಜ್ ವಿರುದ್ಧ ಟಿ ಜೆ ಅಬ್ರಹಂ ವಾಗ್ದಾಳಿ
ಉಡುಪಿ, ಮಾರ್ಚ್ 23: ಉಡುಪಿ - ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಘೋಷಣೆಯಾಗುತ್ತಿದ್ದಂತೆ ಪ್ರಮೋದ್ ಮಧ್ವರಾಜ್ ಅವರ 193 ಕೋಟಿ ಸಾಲ ಪ್ರಕರಣ ಮತ್ತೆ ಜೀವ ಪಡೆದಿದೆ.
ಈ ಕರಿತು ಸಾಮಾಜಿಕ ಹೋರಾಟಗಾರ ಟಿ ಜೆ ಅಬ್ರಹಂ , ಪ್ರಮೋದ್ ಮಧ್ವರಾಜ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉಡುಪಿ ಮಲ್ಪೆಯ ಸಿಂಡಿಕೇಟ್ ಬ್ಯಾಂಕಲ್ಲಿ 1.10 ಕೋಟಿ ಆಸ್ತಿ ಅಡವಿಟ್ಟು 193 ಕೋಟಿ ಸಾಲ ಪಡೆದ ಪ್ರಕರಣ ಕುರಿತು ಪ್ರಮೋದ್ ಮಧ್ವರಾಜ್ ವಿರುದ್ಧ ಟಿಜೆ ಆಬ್ರಹಂ ಗರಂ ಆಗಿದ್ದಾರೆ.
ಪ್ರಮೋದ್ ಮಧ್ವರಾಜ್ ವಿರುದ್ಧ ವಾಗ್ದಾಳಿ ನಡೆಸಿದ ಅವರು ಪ್ರಮೋದ್ ಮಧ್ವರಾಜ್ ವಿರುದ್ಧ ಬಹಿರಂಗವಾಗಿ ನಾನು ಪ್ರಚಾರ ಮಾಡುತ್ತೇನೆ. ಮಧ್ವರಾಜ್ ಗೆ ಯಾರೂ ಓಟ್ ಹಾಕಬೇಡಿ.
ಉಡುಪಿ ಚಿಕ್ಕಮುಗಳೂರು ಕ್ಷೇತ್ರದ ಮೂಲೆ ಮೂಲೆ ಹೋಗಿ ಪ್ರಚಾರ ಮಾಡುತ್ತೇನೆ ಎಂದು ಅವರು ಕಿಡಿಕಾರಿದರು.
ನೇರವಾಗಿ ನಾನು ಮಧ್ವರಾಜ್ ಗೆ ಸವಾಲು ಹಾಕುತ್ತೇನೆ. ನೀವು ಈ ಬಾರಿ ಠೇವಣಿ ಕಳೆದುಕೊಳ್ಳುತ್ತೀರಿ. ರಾಜ್ಯದ ರೈತರು ಲಕ್ಷ ರೂಪಾಯಿಗೆ ನೇಣು ಹಾಕೊತ್ತಾ ಇದ್ದಾರೆ. ನಿಮ್ಮಂತವರು ಸಂಸತ್ ಪ್ರವೇಶ ಮಾಡಬಾರದು.
ನಾನು ವಿಚಾರವನ್ನು ವೈಯಕ್ತಿಕವಾಗಿಯೇ ತಗೊಂಡಿದ್ದೇನೆ. ಪ್ರಮೋದ್ ನನ್ನ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಹೇಳಿದ್ದರು.
ಆದರೆ ಮಾನನಷ್ಟ ಮೊಕದ್ದಮೆ ಬದಲು ಕ್ರಿಮಿನಲ್ ಕೇಸು ಹಾಕಿದ್ದಾರೆ. ನಾನು 9 ಬಾರಿ ಕೋರ್ಟಿಗೆ ಹಾಜರಾಗಿದ್ದೇನೆ. ಮಧ್ವರಾಜ್ ಬ್ಯಾಂಕ್ ಕಬಳಿಸಿ ಕೋರ್ಟನ್ನು ದುರ್ಬಳಕೆ ಮಾಡಿದ್ದಾರೆ.
ಒಂದು ಬಾರಿರೂ ಕೋರ್ಟಿಗೆ ಹಾಜರಾಗಿಲ್ಲ. ಮಿಸ್ಟರ್ ಮಧ್ವರಾಜ್ ನನ್ನ ಮೇಲೆ ಕೇಸು ಹಾಕ್ರೀ. ಯಾಕ್ರೀ ಕೇಸ್ ಹಾಕೋದಕ್ಕೆ ಕಾಸಿಲ್ವಾ.? ಧಂ ಇದ್ರೆ ಕೇಸ್ ಫೈಲ್ ಮಾಡಿ.
ಧಂ ಇಲ್ಲದಿದ್ದರೆ ಮೋಸದ ಸಾಲ ಹಗರಣ ಒಪ್ಪಿಕೊಳ್ಳಿ. ಸಿವಿಲ್ ಕೇಸು ಹಾಕುವ ಧಮ್ ನಿಮಗಿಲ್ಲ. ಕೋರ್ಟನ್ನು ನೀವು ಬಳಸಿದ್ದೀರಿ.
ಮತದಾನವನ್ನು ನಾನು ಬಳಸುತ್ತೇನೆ ಎಂದು ಅವರು ವಾಗ್ದಾಳಿ ನಡೆಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications