ಪರಶುರಾಮನ ಮೂರ್ತಿಯೇ ನಕಲಿ: ಸುನೀಲ್ ಕುಮಾರ್ ಕ್ಷಮೆಯಾಚನೆಗೆ ಹೆಚ್ಚಿದ ಆಗ್ರಹ
ಮಂಗಳೂರು, ಅಕ್ಟೋಬರ್ 16: ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗುವತ್ತ ದಾಪುಗಾಲು ಇಟ್ಟಿದ್ದ ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನ ಪರಶುರಾಮ ಮೂರ್ತಿ ಕಾಣೆಯಾಗಿದೆ. ನಕಲಿ ಮೂರ್ತಿ ವಿಚಾರ ಇಟ್ಟುಕೊಂಡು ಕಳೆದ ಕೆಲವು ತಿಂಗಳುಗಳಿಂದ ಹೋರಾಟಕ್ಕೆ ಇಳಿದಿದ್ದ ಕಾಂಗ್ರೆಸ್ ಈಗ ಬಹಿರಂಗ ಪ್ರತಿಭಟನೆಗೆ ಇಳಿಯುವ ಮೂಲಕ ಕಾರ್ಕಳ ಶಾಸಕರಿಗೆ ಬಿಸಿ ಮುಟ್ಟಿಸುವ ಪ್ರಯತ್ನ ಮಾಡಿದೆ.
ಕರಾವಳಿಗರ ಆಸ್ಥೆಯ ವಿಚಾರ ಇಟ್ಟು ಮೋಸ ಮಾಡಿದ ಕುರಿತು ಶಾಸಕರು ಕ್ಷಮೆ ಕೇಳಬೇಕು ಎನ್ನುವ ಕೂಗು ಪ್ರತಿಭಟನೆಯಲ್ಲಿ ಕೇಳಿ ಬಂದಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಬೈಲೂರು ಉಮ್ಮಿಕಲ್ ಬೆಟ್ಟ ಸದ್ಯ ರಾಜ್ಯದಾದ್ಯಂತ ಸುದ್ದಿಯಲ್ಲಿರುವ ಸ್ಥಳ. ಕಳೆದ ಜನವರಿಯಲ್ಲಿ ಉದ್ಘಾಟನೆಗೊಂಡಿದ್ದ ಪರಶುರಾಮ ಥೀಂ ಪಾರ್ಕ್ ಸದ್ಯ ವಿವಾದ ಮೂಲಕವೇ ರಾಜ್ಯದಲ್ಲಿ ಗುರುತಿಸಿಕೊಂಡಿದೆ.
ಕಳೆದ ಬಿಜೆಪಿ ಸರಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ರಾಗಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ಉಮ್ಮಿಕಲ್ ಬೆಟ್ಟದ ಮೇಲೆ ಪರಶುರಾಮನ ಥೀಂ ಪಾರ್ಕ್ ನಿರ್ಮಾಣವಾಗಿತ್ತು. ಚುನಾವಣಾ ಪೂರ್ವದಲ್ಲಿ ಅಂದಿನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಥೀಂ ಪಾರ್ಕ್ ಮತ್ತು ಪರಶುರಾಮನ ಭವ್ಯ ಮೂರ್ತಿ ಲೋಕಾರ್ಪಣೆ ಮಾಡಿದ್ದರು. ನಂತರ ದಿನಗಳಲ್ಲಿ ಕಾಮಗಾರಿ ಬಾಕಿ ಇದೆ ಎನ್ನುವ ಕಾರಣಕ್ಕೆ ಥೀಂ ಪಾರ್ಕ್ಗೆ ಪ್ರವಾಸಿಗರ ನಿಷೇಧ ಹೇರಲಾಗಿತ್ತು.
ಇದು ಸ್ಥಳೀಯರಿಗೆ ಅನುಮಾನ ಮೂಡಿಸಿದ ಪರಿಣಾಮ ತನಿಖೆ ನಡೆಸಿದಾಗ ಮೂರ್ತಿ ಅಸಲಿಯತ್ತು ಹೊರಬಿದ್ದಿದೆ. ಹಿತ್ತಾಳೆ ಮೂರ್ತಿಯ ಬದಲು ಫೈಬರ್ ಮೂರ್ತಿ ಸ್ಥಾಪನೆ ಮಾಡಿರುವ ಕುರಿತು ಸ್ಥಳೀಯರು, ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು, ಸದ್ಯ ವಿರೋಧ ಪ್ರತಿಭಟನೆ ರೂಪ ಪಡೆದಿದೆ.

ಪರಶುರಾಮ ಮೂರ್ತಿಯ ಅಸಲಿಯತ್ತು ತಿಳಿಯುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಥೀಂ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿಚಾರಣೆಗೆ ಆದೇಶ ನೀಡಿದ್ದರು. ಇದಾದ ಬಳಿಕ ನಿರಂತರವಾಗಿ ಕಾರ್ಕಳ ಕಾಂಗ್ರೆಸ್, ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರನ್ನು ಪ್ರಶ್ನಿಸಿದರು ಯಾವುದೇ ಉತ್ತರ ನೀಡಿರಲಿಲ್ಲ.
ಎರಡು ದಿನಗಳ ಹಿಂದೆ ಪರಶುರಾಮ ಥೀಂ ಪಾರ್ಕ್ಗೆ ಸಾರ್ವಜನಿಕ ರ ನಿಷೇಧ ಹೇರಿ, ಬೀಗಿ ಪೊಲೀಸ್ ಬಂದೋಬಸ್ತ್ ಮೂಲಕ ಕಾಮಗಾರಿ ನಡೆಸುತ್ತಿರುವುದು ಕಾಂಗ್ರೆಸ್ ಗೆ ಆಕ್ರೋಶ ಕ್ಕೆ ಕಾರಣವಾಗಿದೆ. ಅಲ್ಲದೇ ಡ್ರೋನ್ ಹಾರಿಸಿ ಥೀಂ ಪಾರ್ಕ್ ಪರಿಶೀಲನೆ ನಡೆಸಿದಾಗ ಪರಶುರಾಮ ಮೂರ್ತಿ ಕಾಣೆಯಾಗಿರುವುದು ಕಂಡು ಬಂದಿರುವ ಹಿನ್ನಲೆಯಲ್ಲಿ ಇಂದು ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಒಕ್ಕೊರಲಿನಿಂದ ಶಾಸಕ ಸುನೀಲ್ ಕುಮಾರ್ ಅವರ ಕರಾವಳಿಗರ ಅಸ್ಥೆಯ ಜೊತೆಗೆ ಆಟವಾಡಿದ ಹಿನ್ನಲೆಯಲ್ಲಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಒಟ್ಟಾರೆಯಾಗಿ ಕಾರ್ಕಳದಲ್ಲಿ ಪರಶುರಾಮ ನ ಮೂರ್ತಿ ಕಾಣೆಯಾಗಿರುವುದು ಕರಾವಳಿಗರ ಬೇಸರಕ್ಕೆ ಕಾರಣವಾಗಿದೆ. ಸದ್ಯ ಹೊಸ ಒರಿಜಿನಲ್ ಮೂರ್ತಿ ಸ್ಥಾಪಿಸುವ ಕಾರ್ಯವಾಗಬೇಕಿದ್ದು, ಶಾಸಕರು ಇನ್ನಾದರೂ ಬಾಯಿ ತೆರೆದು ಕ್ಷಮೆ ಕೇಳುತ್ತಾರಾ ಎಂದು ಕಾದು ನೋಡಬೇಕಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications