ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ಇಂದಿನಿಂದ ಸಾಂಪ್ರದಾಯಿಕ ಮೀನುಗಾರಿಕೆ ಶುರು; ಸಮುದ್ರರಾಜನಿಗೆ ಪೂಜೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜೂನ್ 22: ಹೊಸ ಋತುವಿನ ಮೀನುಗಾರಿಕೆಗೆ ತೆರಳುವ ಮುನ್ನ ಸಮುದ್ರ ರಾಜನಿಗೆ ಪೂಜೆ ಸಲ್ಲಿಸುವುದು ವಾಡಿಕೆ. ಅದರಂತೆ ಇಂದು ಉಡುಪಿಯ ಮಲ್ಪೆಯಲ್ಲಿ ಮೀನುಗಾರರು ಬಲರಾಮ ದೇವರಿಗೆ ಪೂಜೆ ಸಲ್ಲಿಸಿ, ಸಮುದ್ರಕ್ಕೆ ಕ್ಷೀರ ಅರ್ಪಿಸಿ ಮೀನುಗಾರಿಕೆ ಪ್ರಾರಂಭಿಸಿದರು.

Recommended Video

Karnataka Lockdown? ಲಾಕ್ ಡೌನ್ ಎದುರಿಸಲು ಕರ್ನಾಟಕ ರಾಜ್ಯ ಎಲ್ಲಾ ರೀತಿಯಲ್ಲೂ ರೆಡಿ | Oneindia Kannada

ಮಳೆಗಾಲ ಬಂತೆಂದರೆ ಇಲ್ಲಿ ಯಾಂತ್ರೀಕೃತ ಮೀನುಗಾರಿಕೆ ಸ್ಥಗಿತಗೊಳ್ಳುತ್ತದೆ. ಮಳೆಗಾಲದ ಎರಡು ತಿಂಗಳು ಮೀನುಗಾರಿಕೆಗೆ ನಿಷೇಧದ ಅವಧಿ. ಜೂನ್ ನಲ್ಲಿ ಸ್ಥಗಿತಗೊಳ್ಳುವ ಮೀನುಗಾರಿಕೆ ಆಗಸ್ಟ್ ತಿಂಗಳಲ್ಲಿ ಪ್ರಾರಂಭಗೊಳ್ಳಬೇಕು. ಈ ಅವಧಿಯಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ಅಂದರೆ ನಾಡದೋಣಿ ಮೀನುಗಾರಿಕೆ ನಡೆಸುವುದು ಪದ್ಧತಿ.

Traditional Fishing Started In Udupi Fishermen Performed Special Pooja To Sea

 ಜೂ.15ರಿಂದ ಕರಾವಳಿಯಲ್ಲಿ ಮೀನುಗಾರಿಕೆಗೆ ನಿಷೇಧ ಜೂ.15ರಿಂದ ಕರಾವಳಿಯಲ್ಲಿ ಮೀನುಗಾರಿಕೆಗೆ ನಿಷೇಧ

ಅದರಂತೆ ಇಂದು ಸಮುದ್ರರಾಜನಾದ ಬಲರಾಮನಿಗೆ ಪೂಜೆ ಸಲ್ಲಿಸಿ ಮೀನುಗಾರರು ಅಧಿಕೃತವಾಗಿ ನಾಡದೋಣಿ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ಇಳಿದಿದ್ದಾರೆ. ಪ್ರಾಕೃತಿಕ ವಿಕೋಪಗಳಿಂದ ಮುಕ್ತಿ ಸಿಗುವಂತಾಗಲು ಮತ್ತು ವಿಪುಲ ಮೀನುಗಾರಿಕೆ ಆಗುವಂತಾಗಲು ಮೀನುಗಾರರು ಪ್ರಾರ್ಥನೆ ನಡೆಸಿದರು.

English summary
Traditional fishing started from today in malpe udupi. Fishermen performed special pooja to sea and started fishing
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X